`ಚೆಲುವಿನ ಚಿತ್ತಾರ’ ನನ್ನ ಜೀವನದಲ್ಲಿ ಕೇವಲ ಸಿನಿಮಾ ಆಗಿ ಉಳಿದಿಲ್ಲ: ಅಮೂಲ್ಯ ಭಾವುಕ

Public TV
2 Min Read
amulya 1 3

ಸ್ಯಾಂಡಲ್‌ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ, ಸಿನಿಮಾರಂಗದಿಂದ ಬ್ರೇಕ್ ತೆಗೆದುಕೊಂಡು ಇದೀಗ ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಅಮೂಲ್ಯ ವೃತ್ತಿ ಜೀವನಕ್ಕೆ ಬ್ರೇಕ್ ಕೊಟ್ಟ ಐಸು ನಾ ನೆನಪು ಮಾಡಿದ್ದಾರೆ. ಸ್ಟಾರ್ ನಾಯಕಿ ಪಟ್ಟ ತಂದು ಚೆಲುವಿನ ಚಿತ್ತಾರ ಚಿತ್ರದ ಬಗ್ಗೆ ಭಾವುಕರಾಗಿದ್ದಾರೆ.

amulya

ಬಾಲನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ಮೋಡಿ ಮಾಡಿದ್ದ ಅಮೂಲ್ಯ, ಬಳಿಕ `ಚೆಲುವಿನ ಚಿತ್ತಾರ’ದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ನಾಯಕಿಯಾಗುವ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಟ್ಟರು. ಸ್ಟಾರ್ ನಾಯಕಿ ಪಟ್ಟ ತಂದು ಕೊಟ್ಟಿರೋ `ಚೆಲುವಿನ ಚಿತ್ತಾರ’ ಚಿತ್ರ ತೆರೆಕಂಡು ಇದೀಗ 15 ವರ್ಷಗಳಾಗಿದೆ. ಈ ವೇಳೆ ತನ್ನ ಸಿನಿಮಾ ಜರ್ನಿಯ ಐಸು ಪಾತ್ರವನ್ನು ನೆನೆದು ನಟಿ ಅಮೂಲ್ಯ ಟ್ವೀಟ್ ಮಾಡಿದ್ದಾರೆ.

amulya

`ಚೆಲುವಿನ ಚಿತ್ತಾರ’ ಎಂಬ ಮೊದಲ ಸಿನಿಮಾ, ನನ್ನ ಜೀವನದಲ್ಲಿ ಕೇವಲ ಸಿನಿಮಾ ಆಗಿ ಉಳಿದಿಲ್ಲ. ಅದು ಅಪಾರ ನೆನಪುಗಳ ಆಗರವಾಗಿದೆ, ಅದು ನನ್ನ ಬಣ್ಣ ಹಚ್ಚುವ ಕನಸಿಗೆ ಹೊಸ ದಿಶೆ ನೀಡಿದ ಕೂಸಾಗಿದೆ. `ಚೆಲುವಿನ ಚಿತ್ತಾರ’ ಚಿತ್ರದ ಮೂಲಕ ನನ್ನನ್ನು ನಾಯಕಿ ನಟಿಯಾಗಿ ಪರಿಚಯಿಸಿ, ಕನ್ನಡ ಜನತೆಯ ಮನಸ್ಸಲ್ಲಿ ಐಸೂ ಎನ್ನುವ ಹೆಸರಿನೊಂದಿಗೆ ಎಂದು ಅಮೂಲ್ಯ ಟ್ವೀಟ್ ಮಾಡುವ ಮೂಲಕ ಚಿತ್ರದ ಸವಿನೆನಪನ್ನು ಮೆಲಕು ಹಾಕಿದ್ದಾರೆ. ಈ ವೇಳೆ ನಿರ್ದೇಶಕ ಎಸ್.ನಾರಾಯಣ್, ನಟ ಗಣೇಶ್ ಮತ್ತು ಹರಿಸಿದ ಎಲ್ಲಾ ಅಭಿಮಾನಿಗಳಿಗೆ ಅಮೂಲ್ಯ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್

ನಟಿ ಅಮೂಲ್ಯ ಜಗದೀಶ್ ಚಂದ್ರ ಅವರನ್ನು ಮದುವೆಯಾಗಿ, ಇದೀಗ ಮಕ್ಕಳ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿನ ಐಸು ನಯಾ ಫೋಟೋಶೂಟ್ ನೋಡಿ ಫ್ಯಾನ್ಸ್ ಮತ್ತೆ ಸಿನಿಮಾರಂಗಕ್ಕೆ ಕಮ್‌ಬ್ಯಾಕ್ ಆಗಿ ಅಂತಾ ನಟಿಗೆ ಕೇಳ್ತಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *