ಕಾರವಾರ: ಹಿಂದೂಗಳನ್ನೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚಾರ ಮಾಡುತ್ತಿದ್ದ ಸುಮಾರು 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೇರೆ ರಾಜ್ಯಗಳಿಂದ ಬಂದ ಯುವಕರು ಮತ ಪ್ರಚಾರದ ಪುಸ್ತಕಗಳನ್ನು ವಿತರಿಸುತ್ತಾ ಮತಾಂತರವಾಗುವಂತೆ ಜನರಿಗೆ ಪ್ರೇರಣೆ ನೀಡುತ್ತಿದ್ದರು. ಇದನ್ನು ತಿಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಗೋವಾ, ಅಸ್ಸಾಂ, ಉತ್ತರ ಕರ್ನಾಟಕ ಮೂಲದ ಯುವಕರು ಜಿಲ್ಲೆಯ ಸುಭಾಶ್ ವೃತ್ತದಲ್ಲಿ ನಿಂತುಕೊಂಡು ಹಿಂದು ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಜನರಿಗೆ ವಿತರಿಸುತ್ತಿದ್ದರು ಎಂದು ಆರೋಪಿಸಿ ಸ್ಥಳೀಯರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.