ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 153 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಅತಿ ಹೆಚ್ಚು 142 ಪ್ರಕರಣ ವರದಿಯಾಗಿದೆ.
ಬೆಂಗಳೂರನ್ನು ಹೊರತು ಪಡಿಸಿ ದಕ್ಷಿಣ ಕನ್ನಡದಲ್ಲಿ ದಾಖಲಾಗಿರುವ 6 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೊರೊನಾ ಕೇಸ್ ಆಗಿದೆ. ನಿನ್ನೆ ಕೂಡ ದಕ್ಷಿಣ ಕನ್ನಡದಲ್ಲಿ 6 ಪ್ರಕರಣ ದಾಖಲಾಗಿತ್ತು. ಉಳಿದಂತೆ 24 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತೆಯ ಮದುವೆಗಾಗಿ ಬೆಂಗಳೂರಿಗೆ ಬಂದಿಳಿದ ರಶ್ಮಿಕಾ ಮಂದಣ್ಣ
ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 175 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.72 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,777ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇಂದು ಕೂಡ ಸ್ಥಿರತೆ ಕಾಯ್ದುಕೊಂಡಿದೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿ ಕೈಕೊಟ್ಟ ಯುವಕ – ಲವ್ಜಿಹಾದ್ಗೆ ಯುವತಿ ಬಲಿ?
ಈವರೆಗೆ ರಾಜ್ಯದಲ್ಲಿ ಒಟ್ಟು 39,51,131 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,248 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 63,840 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,068 ಸ್ಯಾಂಪಲ್ (ಆರ್ಟಿಪಿಸಿಆರ್ 15,762 + 5,306 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 142, ದಕ್ಷಿಣ ಕನ್ನಡ 6, ಶಿವಮೊಗ್ಗ 2, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮತ್ತು ಉಡುಪಿಯಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 153 ಪ್ರಕರಣ ವರದಿಯಾಗಿದೆ.