ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಸಿಎಂ ಬೊಮ್ಮಾಯಿ

Public TV
2 Min Read
Basavaraj Bommai 3

ಬೆಂಗಳೂರು: ಕರ್ನಾಟಕದಲ್ಲಿ (Karnataka) 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ (Renewable Energy) ಉತ್ಪಾದಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ (NarendraModi) ಅವರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ `ಇಂಡಿಯನ್ ಎನರ್ಜಿ ವೀಕ್-2023′ (India Energy Week 2023) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರಿಂದು ಮಾತನಾಡಿದರು. ಇದನ್ನೂ ಓದಿ: ಎಲ್ಲಾ ಸಿಎನ್‌ಜಿ ವಾಹನಗಳ ಸಿಲಿಂಡರ್‌ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆ: ಸಾರಿಗೆ ಇಲಾಖೆ

ದೇಶದ ಶೇ.50 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿ 108 `ನಮ್ಮ ಕ್ಲಿನಿಕ್’ಗಳಿಗೆ ಫೆ.7 ರಂದು ಸಿಎಂ ಚಾಲನೆ: ಸುಧಾಕರ್

ಕರ್ನಾಟಕ ನಂ.1 ಆಗಿಸುವ ಗುರಿ: ಕಳೆದ ತಿಂಗಳು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9 ಉದ್ದಿಮೆಗಳು ಗ್ರೀನ್ ಹೈಡ್ರೋಜನ್ (Green Hydrogen) ಉತ್ಪಾದನೆಗೆ 3 ಲಕ್ಷ ಕೋಟಿ ಬಂಡವಾಳದಲ್ಲಿ ಸುಮಾರು 2 ಲಕ್ಷ ಕೋಟಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಇ.ವಿ (ವಿದ್ಯುತ್ ಚಾಲಿತ ವಾಹನ) (Electric vehicle) ಸಾರಿಗೆ ವಾಹನಗಳ ಕ್ಷೇತ್ರದಲ್ಲಿ ಅತ್ಯಧಿಕ ಸಂಖ್ಯೆಯ ಸಂಶೋಧನೆ ನಡೆದಿವೆ. ಈ ನಿಟ್ಟಿನಲ್ಲಿ ಕರ್ನಾಟವನ್ನು ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ದೇಶದಲ್ಲಿಯೇ ನಂ.1 ಆಗಿಸುವ ಗುರಿಯಿದೆ. ಇದಕ್ಕೆ ಪೂರಕವಾಗಿ ಬಂಡವಾಳ ಸ್ನೇಹಿ ಇ.ವಿ ನೀತಿಯನ್ನೂ ತರಲಾಗಿದೆ ಎಂದು ವಿವರಿಸಿದರು.

ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ: ಬಯೋ ಇಂಧನವಾದ ಎಥೆನಾಲ್ (Ethanol) ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ನಿಲ್ಲುತ್ತದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಅರಿಯುವ ಘಟಕಗಳಿವೆ. ರಾಜ್ಯದ ಯುವ ಉದ್ಯಮಿ ವಿಜಯ್ ನಿರಾಣಿ ಅವರು ದೇಶದಲ್ಲಿಯೇ ದೊಡ್ಡ ಪ್ರಮಾಣದ ಎಥೆನಾಲ್ ಉತ್ಪಾದನೆಯಲ್ಲಿ ನಿರತರಾಗಿದ್ದಾರೆ. ಭಾರತದ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ಮೋದಿಯವರ ಅಮೃತ ಕಾಲದಲ್ಲಿ ಇಂಧನ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಗುರಿ ಬಹಳ ಮಹತ್ವದ್ದಾಗಿದ್ದು, `ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ’ ಎಂಬ ಘೋಷವಾಕ್ಯದ ಗುರಿಯನ್ನು ಸಾಧಿಸಲಾಗುವುದು ಎಂದು ಶಪಥ ಮಾಡಿದರು.

2046ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ: ಗುಜರಾತ್ ರಾಜ್ಯದ ಯಶಸ್ವಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ, ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಧಾನಿ ಮೋದಿಯವರು ತಂದಿದ್ದಾರೆ. ಆ ಅನುಭವದಿಂದ ದೇಶದ ಇಂಧನ ಕ್ಷೇತ್ರದಲ್ಲಿ ಮಹತ್ವಪೂರ್ಣ ಹಾಗೂ ಮಾದರಿ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ನಾವಿಂದು ಇಂಧನ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಧಾನಿ ಮೋದಿಯವರು 2046 ರೊಳಗೆ ಮಾಲಿನ್ಯ ರಹಿತ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಆರ್.ಕೆ ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *