ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಕಿತರ ಸಂಖ್ಯೆಯಲ್ಲಿ ಇತ್ತೀಚೆಗೆ ಏರಿಳಿತಗಳು ಆಗುತ್ತಲೇ ಇದೆ. ಇಂದು ರಾಜ್ಯದಲ್ಲಿ 1,736 ಮಂದಿಗೆ ಸೋಕು ತಗುಲಿದ್ದು, ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
ಇಂದು ರಾಜ್ಯದಲ್ಲಿ 1,699 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,59,342 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದುವೆರೆಗೆ ಒಟ್ಟು 40,106 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.6.74 ಇದೆ. 10,896 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಇಂದು ಸುವರ್ಣ ದಿನ- ಟೇಬಲ್ ಟೆನಿಸ್ನಲ್ಲಿ ಚಿನ್ನ ಗೆದ್ದ ಭಾರತ
ಇಂದು 25,753 ಮಂದಿಯನ್ನು (9,074 ರ್ಯಾಪಿಡ್ ಆಂಟಿಜನ್, 16,679 ಆರ್ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,78,45,629 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇಂದು 47,110 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಹಾನಿ – ಇಲ್ಲಿಯವರೆಗೆ ಏನು ಹಾನಿಯಾಗಿದೆ? ಸಿಎಂ ಸಭೆಯಲ್ಲಿ ಏನು ಚರ್ಚೆಯಾಗಿದೆ?
ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಬೆಂಗಳೂರು ನಗರದಲ್ಲಿ 1,274 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 13, ಬಾಗಲಕೋಟೆ 6, ಬಳ್ಳಾರಿ 19, ಬೆಳಗಾವಿ 45, ಬೀದರ್ 6, ಚಾಮರಾಜನಗರ 20, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 10, ದಾವಣಗೆರೆ 12, ಧಾರವಾಡ 45, ಗದಗ 2, ಹಾಸನ 49, ಹಾವೇರಿ 2, ಕಲಬುರಗಿ 4, ಕೊಡಗು 30, ಕೋಲಾರ 7, ಕೊಪ್ಪಳ 6, ಮಂಡ್ಯ 18, ಮೈಸೂರು 51, ರಾಯಚೂರು 30, ರಾಮನಗರ 3, ಶಿವಮೊಗ್ಗ 18, ತುಮಕೂರು 29, ಉಡುಪಿ 5, ಉತ್ತರ ಕನ್ನಡ 14, ವಿಜಯಪುರ 4 ಹಾಗೂ ಯಾದಗಿರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ.