Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

Bengaluru City

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

Public TV
Last updated: December 22, 2025 7:27 pm
Public TV
Share
3 Min Read
DK Shivakumar 11
SHARE

– ಮೆಟ್ರೋ 3ನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ (Namma Metro) ಮಾರ್ಗ ಕಾರ್ಯಾರಂಭವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಬಿಎಂಆರ್‌ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ 30% ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಬೆಂಗಳೂರಿನ ಕೊಹ್ಲಿ ಫ್ಯಾನ್ಸ್‌ಗೆ ನಿರಾಸೆ – ಅಭಿಮಾನಿಗಳಿಲ್ಲದೇ ನಡೆಯುತ್ತಾ ವಿಜಯ್‌ ಹಜಾರೆ ಪಂದ್ಯ?

Namma Metro Greenline

ಮುಂದಿನ ವರ್ಷ (2026ರಲ್ಲಿ) 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಮಾರ್ಗ ಸೇರಿದಂತೆ 38 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. ಆ ಮೂಲಕ ಬೆಂಗಳೂರಿನಲ್ಲಿ 175 ಕಿ.ಮೀ ಉದ್ದದ ಮಾರ್ಗ ಕಾರ್ಯನಿರ್ವಹಿಸಲಿದೆ. ಇದರ ಹೊರತಾಗಿ ಮಾಗಡಿ ರಸ್ತೆಯಲ್ಲಿ ತಾವರಕೆರೆವರೆಗೆ, ಹೊಸಕೋಟೆ, ಬಿಡದಿ, ನೆಲಮಂಗಲದವರೆಗೆ ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ. ಒಂದು ಕಡೆ ಯೋಜನೆ ಕೈಗೆತ್ತಿಕೊಂಡಿದ್ದು, ಉಳಿದ ಕಡೆಗಳಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

ಮುಂದಿನ ತಿಂಗಳು ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಸೇರಿದಂತೆ ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು. ಸಂಚಾರ ದಟ್ಟಣೆ ನಿಯಂತ್ರಿಸಿ ಜನರ ಪ್ರಯಾಣಕ್ಕೆ ಅನುಕೂಲವಾಗಲು ಕಾಮಗಾರಿ ವೇಗವಾಗಿ ನಡೆಸುತ್ತಿದೆ. ಮೆಟ್ರೋ ನಿಲ್ದಾಣಗಳ ಬಳಿ ಹೆಚ್ಚಿನ ಜಮೀನು ಸ್ವಾಧೀನಪಡಿಸಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ. ವಾಹನ ನಿಲುಗಡೆಗೂ ಅವಕಾಶ ಕಲ್ಪಿಸಬೇಕಿದೆ ಎಂದರು. ಇದನ್ನೂ ಓದಿ: ಕೆಂಗೇರಿ, ಹೆಜ್ಜಾಲ ರೈಲ್ವೇ ನಿಲ್ದಾಣಗಳ ಮಧ್ಯೆ ಗರ್ಡರ್‌ ಆಳವಡಿಕೆ – ಕೆಲ ರೈಲುಗಳ ಸೇವೆ ರದ್ದು

ಮೂರನೇ ಹಂತದ ಯೋಜನೆ ಟೆಂಡರ್ ಕರೆಯಲಾಗುತ್ತಿದೆ. 25,311 ಸಾವಿರ ಕೋಟಿ ವೆಚ್ಚದ ಈ ಕಾಮಗಾರಿಗೆ, ಜೈಕಾದಿಂದ 15,600 ಕೋಟಿ ರೂ. ಸಾಲ ಮಾಡಲಾಗುತ್ತಿದೆ. ಉಳಿದಂತೆ ಎಲಿವೇಟೆಡ್ ಕಾರಿಡಾರ್‌ಗೆ 9,700 ಕೋಟಿ ರೂ. ಮೊತ್ತದ ಟೆಂಡರ್ ಅನ್ನು ಜನವರಿಯಲ್ಲಿ ಕರೆಯಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವಿವಾಹಿತನ ಜೊತೆ ಪ್ರೀತಿ, ಮದುವೆಗೆ ನಿರಾಕರಣೆ – ವಿವಾಹಿತೆ ಲೈವ್ ಸೂಸೈಡ್

NAMMA METRO 4

ಮೂರನೇ ಹಂತದಲ್ಲಿ ಸಂಪೂರ್ಣ ಮಾರ್ಗ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಮಾಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಮೂರನೇ ಹಂತದ ಯೋಜನೆಯಲ್ಲಿ ಸಂಪೂರ್ಣವಾಗಿ ಎಲ್ಲಾ ಮಾರ್ಗದಲ್ಲೂ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುವುದು. ತಾವರೆಕೆರೆ ಬಳಿ ಮೆಟ್ರೋ ನಿಲ್ದಾಣಕ್ಕೆ ಜಾಗ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಹಾಸನದಿಂದ ಬರುವ ಜನರು ಈ ಮಾರ್ಗವಾಗಿ ಬರುವುದರಿಂದ ಇಲ್ಲೂ ಡಬಲ್ ಡೆಕ್ಕರ್ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರೈಲ್ವೆ ಟಿಕೆಟ್ ದರ ಏರಿಕೆ – ಕಿ.ಮೀಗೆ ಒಂದು ಪೈಸೆ ಮಾತ್ರ ಹೆಚ್ಚಾಗಿದೆ: ಜೋಶಿ

ಟನಲ್ ರಸ್ತೆ ಟೆಂಡರ್ ಅಂತಿಮಗೊಂಡಿದ್ದು, ಅದಾನಿ ಕಂಪನಿ ಕಡಿಮೆ ಬಿಡ್ ಮಾಡಿದೆ ಎಂಬ ವರದಿಗಳು ಬಂದಿವೆ ಎಂಬ ಕುರಿತು ಪ್ರತಿಕ್ರಿಯಿಸಿ, ನನಗೆ ಇನ್ನೂ ಸಂಪೂರ್ಣ ಮಾಹಿತಿ ಬಂದಿಲ್ಲ. ನನಗೆ ಅಧಿಕೃತವಾಗಿ ಪತ್ರ ಬರುವವರೆಗೂ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ನುಡಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಸದ್ದಿಲ್ಲದೇ ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ

ಸರ್ಕಾರ ನಿಗದಿ ಮಾಡಿದ ಮೊತ್ತಕ್ಕಿಂತ ಹೆಚ್ಚಿನ ಹಣ ಬಿಡ್ ಮಾಡಲಾಗಿದೆ ಎಂದು ಕುರಿತು ಮಾತನಾಡಿ, ನಾವು ಯಾರಿಗೂ ಹಣ ನೀಡುವುದಿಲ್ಲ. ಅವರೇ ಹಣ ಬಂಡವಾಳ ಹಾಕಿ ಮಾಡಬೇಕು. ವಿಜೆಎಫ್ ಎಷ್ಟು ಪರ್ಸೆಂಟ್ ನೀಡುತ್ತೇವೆ ಎಂದು ಹೇಳಿದ್ದೇವೋ ಅಷ್ಟನ್ನೇ ನೀಡುತ್ತೇವೆ. ನಾವು ಅಂದಾಜು ಮಾಡಿರುವುದರಲ್ಲಿ 40% ಮಾತ್ರ ನೀಡುತ್ತೇವೆ. ಅದರ ಮೇಲೆ ನಾವು ನೀಡುವುದಿಲ್ಲ. ಮೆಟ್ರೋಗೆ ತಗುಲುವ ವೆಚ್ಚ ಪರಿಶೀಲಿಸಿದೆ. ಬಾಂಬೆಯಲ್ಲಿ ಆಗುತ್ತಿರುವ ವೆಚ್ಚದ ಮಾಹಿತಿ ತರಿಸಿಕೊಂಡೆ. ಬಾಂಬೆಯಲ್ಲಿ ಪ್ರತಿ ಕಿ.ಮೀಗೆ 1,200 ಕೋಟಿ ರೂ. ಆಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ಥಳೀಯವಾಗಿಯೇ ಪಕ್ಷದ ಗೊಂದಲ ಬಗೆಹರಿಸಿಕೊಳ್ಳಬೇಕು, ಖರ್ಗೆಯವರ ಹೇಳಿಕೆಗೆ ಗೌರವ ಕೊಡ್ತೇವೆ: ಪರಮೇಶ್ವರ್

TAGGED:bengaluruBMRCLcongressDK Shivakumarnamma metroಕಾಂಗ್ರೆಸ್ಡಿಕೆ ಶಿವಕುಮಾರ್ನಮ್ಮ ಮೆಟ್ರೋಬಿಎಂಆರ್‍ಸಿಎಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
20 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
56 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
1 hour ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
1 hour ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
2 hours ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?