ಬೆಂಗಳೂರು: ಇಂದು ರಾಜ್ಯದಲ್ಲಿ 1,781 ಮಂದಿಗೆ ಸೋಂಕು ತಗುಲಿದ್ದು, 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒಟ್ಟು 17,811 ಆಂಟಿಜನ್ ಟೆಸ್ಟ್, 1,03,801 ಆರ್ಟಿ ಪಿಸಿಆರ್ ಇತ್ಯಾದಿ ಪರೀಕ್ಷೆ ಮಾಡಿದ್ದು, ಒಟ್ಟು 1,21,612 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 99,81,137 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ 1,067 ಮಂದಿಗೆ ಸೋಂಕು ಬಂದಿದ್ದು, ಇಂದು 6 ಮಂದಿ ಮೃತಪಟ್ಟಿದ್ದಾರೆ. ಮಂಡ್ಯ 66, ಬೆಂಗಳೂರು ಗ್ರಾಮಾಂತರ 66, ಬಳ್ಳಾರಿ 54, ತುಮಕೂರು 48, ಮೈಸೂರಿನಲ್ಲಿ 46 ಜನರಲ್ಲಿ ಸೋಮಕು ಪತ್ತೆಯಾದರೆ, ಬೆಳಗಾವಿ 38, ದಕ್ಷಿಣ ಕನ್ನಡ 36, ಉತ್ತರ ಕನ್ನಡದಲ್ಲಿ 33 ಮಂದಿಗೆ ಸೋಂಕು ಬಂದಿದೆ.
ಒಟ್ಟು 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಬೆಂಗಳೂರು ನಗರ 279, ತುಮಕೂರು 28, ಕಲಬುರಗಿಯಲ್ಲಿ 23 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.