ಕೊಪ್ಪಳ: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ 18 ಹಿಂದೂಗಳ (Hindu) ಕೊಲೆಯಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ (Sunil Kumar) ಆರೋಪಿಸಿದರು.
ಕೊಪ್ಪಳದ (Koppal) ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ 18 ಹಿಂದೂಗಳ ಕೊಲೆಯಾಗಿದೆ. ನಮ್ಮ ಅವಧಿಯಲ್ಲಿ ಕೇವಲ ಒಬ್ಬ ಹಿಂದೂವಿನ ಕೊಲೆಯಾಗಿದೆ. ಬಿಜೆಪಿ ಸರ್ಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಬಿಜೆಪಿ ಸರ್ಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಹಿಜಬ್ ಕುರಿತು ಕಾಯ್ದೆ ರೂಪಿಸಿದೆ ಎಂದು ಹೇಳಿದರು.
ರಾಜ್ಯಕ್ಕೆ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಆಗಮನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 10 ಬಾರಿ ಬರಲಿದ್ದಾರೆ, ಅದರಲ್ಲಿ ತಪ್ಪೇನು? ನರೇಂದ್ರ ಮೋದಿ ನಮ್ಮ ಪರಮೋಚ್ಛ ನಾಯಕರು. ನಾವು ಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ
ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಬಿಜೆಪಿ ರಾಜ್ಯದ 224 ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಚುನಾವಣೆ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ ಎಂದರು. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k