ಬೆಂಗಳೂರು: ರಾಮದೇವರ ಬೆಟ್ಟದಲ್ಲಿ ಕರಡಿ ಮತ್ತು ಕರಡಿ ಮರಿ ಕಾಣಿಸಿದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಗ್ರಾಮದ ಬಳಿ ಇರುವಂತಹ ರಾಮದೇವರ ಬೆಟ್ಟದಲ್ಲಿ ಎರಡು ಕರಡಿಗಳು ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿದೆ. ಕರಡಿಗಳನ್ನು ಕಂಡ ರಾಯರಪಾಳ್ಯ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.
ಕರಡಿಗಳನ್ನು ಹಿಡಿಯಲು ಅರಣ್ಯಧಿಕಾರಿಗಳು ವಿಫಲರಾಗಿದ್ದು, ಬೋನ್ಗಳನ್ನು ನೀಡಲು ಗ್ರಾಮಸ್ಥರ ಸಹಕಾರವೇ ಬಯಸುತ್ತಾರೆ ಎಂದು ಗ್ರಾಮಸ್ಥರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದಷ್ಟೂ ಬೇಗ ಕರಡಿಗಳನ್ನು ಹಿಡಿಯಬೇಕೆಂದು ಗ್ರಾಮದವರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಘಟನೆ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.