ಚಾಮರಾಜನಗರ: ಸಾವು ಹೇಗೆ ಬರಲಿದೆ ಎಂಬುದು ಊಹೆಗೂ ನಿಲುಕದ್ದು ಎಂಬುದಕ್ಕೆ ಇಂದು ಚಾಮರಾಜನಗರದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಪಲ್ಟಿಯಾಗಿ ಇಬ್ಬರು ಬಾಲಕರು ದುರಂತ ಅಂತ್ಯ ಕಂಡಿದ್ದಾರೆ.
ಉತ್ತರಪ್ರದೇಶ ಮೂಲದ ಅತುಲ್(17), ಮಯೂರ್(17) ಮೃತ ದುರ್ದೈವಿಗಳು. ಜೀವನೋಪಯಕ್ಕಾಗಿ ಬಟ್ಟೆ ವ್ಯಾಪಾರ ಮಾಡಲು ಬಂದಿದ್ದ ಇವರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಬ್ಬು ತುಂಬಿದ ಲಾರಿ ಆ ರಸ್ತೆಯಲ್ಲಿಯೇ ಹೋಗುತ್ತಿತ್ತು. ಆದರೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಲಾರಿ ಉರುಳಿ ಬಾಲಕರ ಮೇಲೆ ಪಲ್ಟಿಯಾಗಿದೆ. ಪರಿಣಾಮ ಬಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯಕ್ರಮಗಳಲ್ಲಿ ‘ಸೈಬರ್ ಸುರಕ್ಷತೆ’ ಅಧ್ಯಯನ ಅಳವಡಿಕೆ
ಅವೈಜ್ಞಾನಿಕ ರಸ್ತೆ ಜೊತೆಗೆ ಚಾಲಕನ ಅತಿವೇಗವೇ ಘಟನೆಗೆ ಕಾರಣ ಎನ್ನಲಾಗಿದ್ದು, ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಕಬ್ಬು ರಸ್ತೆಯಲ್ಲೆಲ್ಲಾ ಚೆಲ್ಲಾಡಿ ಸಂಚಾರವೂ ಅಸ್ತವ್ಯಸ್ತವಾಗಿತ್ತು. ಅಪಘಾತ ನಡೆಯುತ್ತಿದ್ದಂತೆ ಜನರು ಮುತ್ತಿಕೊಂಡಿದ್ದರಿಂದ ಕಾರ್ಯಾಚರಣೆ ನಡೆಸಲು ಪೊಲೀಸರು ಹರಸಾಹಸ ಪಡಬೇಕಾಯಿತು.