ಬೆಂಗಳೂರು: ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.
ಕೃಷ್ಣ(06) ಮತ್ತು ಅರವಿಂದ್(05) ಕಾಣೆಯಾಗಿರುವ ಮಕ್ಕಳು. ಒಂದು ದಿನದ ಹಿಂದೆಯಷ್ಟೇ ಸಂಬಂಧಿಕರ ಮನೆಗೆ ಬಂದಿದ್ದರು. ಬಾಗಲಕೋಟೆಯ ಮಹಾಲಿಂಗಪುರದಿಂದ ಬೆಂಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು.
ಶನಿವಾರ ಸಂಜೆ ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳು ನಾಪತ್ತೆಯಾಗಿದ್ದಾರೆ. ಸದ್ಯ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.