ಚೆನ್ನೈ: ಚಂಡಮಾರುತ (Cyclone) ಪ್ರಭಾವದಿಂದ ತಮಿಳುನಾಡಿನಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.
ಉತ್ತರ ತಮಿಳುನಾಡು (Tamil Nadu) ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧತೆ ಇದೆ. ಕಳೆದ 24 ಗಂಟೆಗಳಲ್ಲಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ. ಇದನ್ನೂ ಓದಿ: 17,000 ಕೆಲಸ ಕಡಿತಗೊಳಿಸಲಿದೆ ಬೋಯಿಂಗ್ – ಕಂಪನಿಯ 10% ಉದ್ಯೋಗಿಗಳ ಕೆಲಸಕ್ಕೆ ಕುತ್ತು
ಕವಲಿ ಮತ್ತು ಒಂಗೋಲೆಯಲ್ಲಿ ಕ್ರಮವಾಗಿ 67ಮಿ.ಮೀ ಹಾಗೂ 63ಮಿ.ಮೀ ಮಳೆ ದಾಖಲಾಗಿದೆ. ಮಿನಂಬಕ್ಕಂ, ನುಂಗಂಬಾಕ್ಕಂ, ಪುದುಚೇರಿ ಮತ್ತು ಕಡಲೂರುಗಳಲ್ಲಿ 15ಮಿ.ಮೀ ಮಳೆಯಾಗಿದೆ. ದಕ್ಷಿಣ ಕರಾವಳಿ ತಮಿಳುನಾಡು ಮತ್ತು ರಾಜ್ಯದ ಒಳಭಾಗಗಳಲ್ಲಿ ಅಲ್ಪ ಪ್ರಮಾಣದ ಸುರಿದಿದೆ. ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ
ಮುಂದಿನ 48 ಗಂಟೆಗಳಲ್ಲಿ ಬಾಪಟ್ಲಾ, ಕವಾಲಿ, ಒಂಗೋಲ್, ನೆಲ್ಲೂರು, ಶ್ರೀಹರಿಕೋಟಾ, ಚೆನ್ನೈ (Chennai), ಕಾಂಚೀಪುರಂ, ತಾಂಬರಂ, ಪುದುಚೇರಿ, ಕಡಲೂರು ಮತ್ತು ಕಾರೈಕಲ್ನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಬಂಗಾಳ ಕೊಲ್ಲಿಯ ಮೇಲಿನ ಕಡಿಮೆ ಒತ್ತಡದ ವ್ಯವಸ್ಥೆಯು ಈ ಮಳೆಗೆ ಕಾರಣವಾಗಿದೆ. ಇದು ವಿಶೇಷವಾಗಿ ತಮಿಳುನಾಡಿನ ಕರಾವಳಿ ಜಿಲ್ಲೆಗಳು ಮತ್ತು ಚೆನ್ನೈ ಮೇಲೆ ಪರಿಣಾಮ ಬೀರುತ್ತದೆ. ಈ ಹವಾಮಾನ ವ್ಯವಸ್ಥೆಯಿಂದ ನ.16 ರ ತನಕ ರಾಜ್ಯದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದಂತೆ ಗ್ಯಾಸ್ ಚೇಂಬರ್ಗೆ ಪ್ರವೇಶಿಸಿದಂತಾಯ್ತು: ಪ್ರಿಯಾಂಕಾ ಗಾಂಧಿ