ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರ ಸಾವು- ಅಚ್ಚರಿಯ ರೀತಿಯಲ್ಲಿ ಪಾರಾಯ್ತು ಮಗು

Public TV
1 Min Read
ctd accident

ಚಿತ್ರದುರ್ಗ: ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟೆನೆ ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ctd accident 1

ಅಪಘಾತದಲ್ಲಿ ಕಾರಿನಲ್ಲಿದ್ದ ಬಸವರಾಜ್ (32) ಮತ್ತು ವಿದ್ಯಾ (27) ಮೃತಪಟ್ಟಿದ್ದಾರೆ. ದಂಪತಿಯ ಜೊತೆಯಲ್ಲಿದ್ದ ಅವರ ಒಂದು ವರ್ಷದ ಮಗು ಚಿನ್ಮಯಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದೆ. ಮೃತರು ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ನಿವಾಸಿಗಳು ಎಂದು ತಿಳಿದುಬಂದಿದೆ. ಇವರು ಕಿತ್ತೂರೂನಿಂದ ಬೆಂಗಳೂರಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

ctd accident 2

ಟ್ರ್ಯಾಕ್ಟರ್‍ನಲ್ಲಿ ಸುಮಾರು ಎಂಟು ಜನರು ಪ್ರಯಾಣಿಸುತ್ತಿದ್ದು, ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಮಗು ಮತ್ತು ಗಾಯಾಳಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾಯಾಗಿದ್ದಾನೆ.

ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

CTD

ctd accident 5

 

 

Share This Article
Leave a Comment

Leave a Reply

Your email address will not be published. Required fields are marked *