ಬೆಳಗಾವಿ: ಜಿಲ್ಲೆಯ ಪ್ರತ್ಯೇಕ ಗ್ರಾಮದಲ್ಲಿ ಹಾವು ಕಡಿತದಿಂದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸವದತ್ತಿ ತಾಲೂಕಿನ ಓಬಲದಿನ್ನಿ ಗ್ರಾಮದಲ್ಲಿ 50 ವರ್ಷದ ಲಕ್ಷ್ಮಣ ಲಿಂಬನ್ನವರ ಅವರಿಗೆ ವಿಷಕಾರಿ ಹಾವು ಕಡಿದಿತ್ತು. ಚಿಕಿತ್ಸೆಗೆ ಸಹಾಯವಾಗಲೆಂದು ಕಡಿದ ಹಾವನ್ನು ಒಂದು ಚೀಲದಲ್ಲಿ ತೆಗೆದುಕೊಂಡು ಆಸ್ಪತ್ರೆಗೆ ಹೋಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಲಕ್ಷ್ಮಣ್ ಸಾವನ್ನಪ್ಪಿದ್ದಾರೆ. ಚೀಲದಲ್ಲಿ ತೆಗೆದುಕೊಂಡು ಹೋಗಿದ್ದ ಹಾವು ಕೂಡ ಸತ್ತು ಹೋಗಿದೆ.
ಬೈಲಹೊಂಗಲ ತಾಲೂಕಿನ ಹೊಸಕೋಟೆ ಗ್ರಾಮದ 29 ವರ್ಷದ ರಾಮಪ್ಪ ಕೆಳಗಿನಮನಿ ಅವರಿಗೆ ಹಾವು ಕಡಿದಿತ್ತು. ಅವರೂ ಕೂಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.