Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ

Cinema

ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ

Public TV
Last updated: March 22, 2022 12:56 pm
Public TV
Share
2 Min Read
FotoJet 4 34
SHARE

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪ್ರತಿ ವರ್ಷವೂ ಮೈಸೂರು ವಿಶ್ವವಿದ್ಯಾಲಯದಲ್ಲಿ ಓದಿದ ಪ್ರತಿಭಾವಂತರಿಗೆ 2 ಚಿನ್ನದ ಪದಕವನ್ನು ನೀಡುವುದಾಗಿ ರಾಘವೇಂದ್ರ ರಾಜ್ ಕುಮಾರ್ ಘೋಷಿಸಿದ್ದಾರೆ. ಇಂದು ಮೈಸೂರಿನ ವಿವಿಯಲ್ಲಿ ನಡೆಯುತ್ತಿರುವ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ ‘ಪುನೀತ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕಗಳನ್ನು ನೀಡುವುದಾಗಿ ತಿಳಿಸಿದರು. ಪಾರ್ವತಮ್ಮ ರಾಜಕುಮಾರ್ ಅವರ ಹೆಸರಿನಲ್ಲಿ, ಬ್ಯೂಸಿನೇಸ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಂಗಾರದ ಪದಕ ಮತ್ತು ಪುನೀತ್ ರಾಜಕುಮಾರ್  ಹೆಸರಿನಲ್ಲಿ ಲಲಿತಾ ಕಲೆಗಳ ವಿಷಯದಲ್ಲಿ ಬಂಗಾರದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಘೋಷಣೆ ಆಯಿತು.  ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು ಎಂದಿದೆ ಡಾ.ರಾಜ್ ಕುಟುಂಬ.

puneeth rajkumar

ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣುಸ್ತಿಲ್ಲ. ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನ ಶ್ರದ್ದೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಅಂತ ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್‌ ನಮ್ಮ ಕುಟುಂಬದ ಜವಾಬ್ದಾರಿಯನ್ನ ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

FotoJet 3 55

ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

FotoJet 2 68

ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

FotoJet 89

ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

TAGGED:Ashwini Puneet Raj Kumardoctoratemysore universityPuneet Raj Kumarraghavendra raj kumarsandalwoodVinay Kumarಅಶ್ವಿನಿ ಪುನೀತ್ ರಾಜ್ ಕುಮಾರ್ಡಾಕ್ಟರೇಟ್ಪುನೀತ್ ರಾಜ್ ಕುಮಾರ್ಮೈಸೂರು ಯೂನಿವರ್ಸಿಟಿರಾಘವೇಂದ್ರ ರಾಜ್ ಕುಮಾರ್ವಿನಯ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?