ರಾಜಕಾಲುವೆಯಲ್ಲಿ ಮಣ್ಣು ಕುಸಿದು ಇಬ್ಬರ ದುರ್ಮರಣ

Public TV
1 Min Read
pulakeshinagar death2

– ನಾಲ್ವರು ಕಾರ್ಮಿಕರಿಗೆ ಗಾಯ

ಬೆಂಗಳೂರು: ರಾಜಕಾಲುವೆಯಲ್ಲಿ ಕೆಲಸ ಮಾಡುವ ವೇಳೆ ಮಣ್ಣು ಕುಸಿದು ಇಬ್ಬರ ಮೃತಪಟ್ಟ ಘಟನೆ ಬೆಂಗಳೂರಿನ ಪುಲಕೇಶಿನಗರ ಮುಖ್ಯರಸ್ತೆಯ ಬಿಜಿ ಗಾರ್ಡನ್ ಬಳಿ ನಡೆದಿದೆ.

ಸುದರ್ಶನ್ ಹಾಗೂ ಶಫೀಕ್ ಮೃತ ದುರ್ದೈವಿಗಳು. ಸುದರ್ಶನ್ ಹಾಗೂ ಶಫೀಕ್ ಇಬ್ಬರು ಜಾರ್ಖಂಡ್ ಮೂಲದ ಕಾರ್ಮಿಕರು. ಸುದರ್ಶನ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯೆ ಶಫೀಕ್ ಮೃತಪಟ್ಟಿದ್ದಾನೆ.

pulakeshinagar death 1

ಶನಿವಾರ ಸಂಜೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಎಂಟು ಜನ ಕಾರ್ಮಿಕರು ಒಳಚರಂಡಿ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಘಟನೆಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.

ಸುದರ್ಶನ್ ಹಾಗೂ ಶಫೀಕ್ ಮೃತದೇಹವನ್ನು ಬೋರಿಂಗ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *