ಬೆಂಗಳೂರು: ರಾಜ್ಯದಲ್ಲಿ ಇಂದು ಇಬ್ಬರಲ್ಲಿ ಕೊರೊನಾ ರೂಪಾಂತರಿ ಹೊಸ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಮೂಲಕ ಭಾರತದಲ್ಲೇ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆಯಾಗಿರುವ ರಾಜ್ಯ ಕರ್ನಾಟಕವಾಗಿದೆ. ಓಮಿಕ್ರಾನ್ ಹೊರತುಪಡಿಸಿ ಇಂದು ಒಟ್ಟು 363 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದ್ದು, 3 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 191 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,743 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,96,833 ಮಂದಿಗೆ ಕೊರೊನಾ ಬಂದಿದೆ. 29,51,845 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.34 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.82 ರಷ್ಟಿದೆ. ಇಂದು ಬೆಂಗಳೂರು ನಗರ 2 ಮತ್ತು ಹಾಸನದಲ್ಲಿ 1 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್: ಸುಧಾಕರ್
ರಾಜ್ಯದಲ್ಲಿ ಇಂದು ಒಟ್ಟು 3,36,737 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,06,300 ಸ್ಯಾಂಪಲ್ (ಆರ್ಟಿಪಿಸಿಆರ್ 87,554 + 18,746 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ!
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 206, ಬೀದರ್ 0, ಚಾಮರಾಜನಗರ 12, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 2, ದಕ್ಷಿಣ ಕನ್ನಡ 20, ದಾವಣಗೆರೆ 3, ಧಾರವಾಡ 7, ಗದಗ 0, ಹಾಸನ 8, ಹಾವೇರಿ 1, ಕಲಬುರಗಿ 1, ಕೊಡಗು 8, ಕೋಲಾರ 6, ಕೊಪ್ಪಳ 4, ಮಂಡ್ಯ 2, ಮೈಸೂರು 19, ರಾಯಚೂರು 0, ರಾಮನಗರ 0, ಶಿವಮೊಗ್ಗ 6, ತುಮಕೂರು 6, ಉಡುಪಿ 10, ಉತ್ತರ ಕನ್ನಡ 22, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪತ್ತೆಯಾದ ಓಮಿಕ್ರಾನ್ ಸೋಂಕಿತರನ್ನು ಐಸೋಲೇಟ್ ಮಾಡಲಾಗಿದೆ: ಅಶ್ವಥ್ ನಾರಾಯಣ್