ಚಂಡೀಗಢ: ಸ್ಕೂಟರ್ನಲ್ಲಿ ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾಮಗಾರಿಗಾಗಿ ತೋಡಲಾಗಿದ್ದ ರಸ್ತೆಯ ಬೃಹತ್ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ಪಂಜಾಬ್ನ ಲೂದಿಯಾನ ಜಿಲ್ಲೆಯಲ್ಲಿ ನಡೆದಿದೆ.
ಆಕಸ್ಮಿಕವಾಗಿ ರಸ್ತೆಯ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಎಕ್ಸ್-ರೇ ಹಾಗೂ ಚಿಕಿತ್ಸೆ ನಂತರ ಅವರು ಶಾಲೆಗೆ ತೆರಳಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ
ಗುಂಡಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯರು ಮೇಲಕ್ಕೆ ಬರಲು ವ್ಯಕ್ತಿಯೊಬ್ಬ ಕಬ್ಬಿಣದ ಏಣಿಯನ್ನು ಹಾಕುತ್ತಿರುವ ದೃಶ್ಯ ವೈರಲ್ ಆಗಿದೆ. ಅವರ ಸ್ಕೂಟರ್ ಕೆಸರಿನಲ್ಲಿ ಸಿಲುಕಿ ಬಿದ್ದಿತ್ತು. ಘಟನೆಯಾದ ಕೆಲ ಹೊತ್ತಿನಲ್ಲೇ ಗುಂಡಿಯಲ್ಲಿ ನೀರು ತುಂಬಿಕೊಂಡಿತು.
ಇಂತಹ ಘಟನೆಗಳನ್ನು ತಪ್ಪಿಸಲು ರಸ್ತೆ ಕಾಮಗಾರಿಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಾಗಬೇಕು ಎಂದು ಗಾಯಗೊಂಡ ವಿದ್ಯಾರ್ಥಿನಿಯೊಬ್ಬರ ತಂದೆ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ಘಟನೆ ನಂತರ ಎಚ್ಚೆತ್ತುಕೊಂಡ ಸ್ಥಳೀಯ ಆಡಳಿತವು ಗುಂಡಿ ಮುಚ್ಚುವ ಕಾರ್ಯವನ್ನು ಆರಂಭಿಸಿದೆ.