ರಾಂಚಿ: ಜಾರ್ಖಂಡ್ನ (Jharkhand) ಪಲಮು (Palamu) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಿಷೇಧಿತ ಟಿಎಸ್ಪಿಸಿ, ಸಿಪಿಐ (ಮಾವೋವಾದಿ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಕುರಿತು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಗುರುವಾರ (ಸೆ.4) ಮನಾಟು ಪೊಲೀಸ್ ಠಾಣಾ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮಂಡ್ಯ | ಸಾಮೂಹಿಕ ಗಣೇಶ ವಿಸರ್ಜನೆ – ಇಂದು, ನಾಳೆ ನಾಗಮಂಗಲದಲ್ಲಿ ನಿಷೇಧಾಜ್ಞೆ
ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುವನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.