ಲಕ್ನೋ: ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆ ಉತ್ತರ ಪ್ರದೇಶದ ಮಥುರಾ ದೇವಾಲಯದಲ್ಲಿ ಶುಕ್ರವಾರ ಜನದಟ್ಟಣೆ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇವಾಲಯದಲ್ಲಿ ಭಕ್ತರ ಸಂಖ್ಯೆ ಹಠಾತ್ತನೆ ಏರಿಕೆಯಾಗಿ, ಆರತಿಯ ಸಮಯ ದೇವಾಲಯದ ಒಳಗೆ ಜನರು ನುಗ್ಗಲಾರಂಭಿಸಿದರು. ಈ ವೇಳೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನೂ 6 ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಥುರಾದ ಹಿರಿಯ ಪೊಲೀಸ್ ಅಭಿಷೇಕ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ನಿಮಗಿಂತ ದೊಡ್ಡ ಗೂಂಡಾಗಳು: ಚರ್ಚೆಗೆ ಕಾರಣವಾದ ಬಿಜೆಪಿ ನಾಯಕನ ಹೇಳಿಕೆ
ಮಥುರಾವನ್ನು ಕೃಷ್ಣನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಪುರಾಣಗಳ ಪ್ರಕಾರ, ಶ್ರೀಕೃಷ್ಣನ ಜನನ ಮಧ್ಯರಾತ್ರಿಯಲ್ಲಿ ನಡೆದಿದ್ದು, ಈ ವೇಳೆಯ ಮಂಗಳಾರತಿಗೆ ಜನರು ಪ್ರಸಾದವನ್ನು ಸ್ವೀಕರಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಕುಟುಂಬದಂತೆ: ಓದಿನ ನೆರವಿಗಾಗಿ ಅಫ್ಘನ್ ಯುವತಿಯಿಂದ ಮೋದಿಗೆ ಮನವಿ
ಘಟನೆಗೂ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದ ಕೃಷ್ಣ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡಿ, ರಾಜ್ಯದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಬದ್ಧರಾಗಿರುವುದಾಗಿ ತಿಳಿಸಿದರು.