Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Districts

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Public TV
Last updated: March 8, 2026 6:09 pm
Public TV
Share
4 Min Read
Mallikarjun Kharge DK Shivakumar Priyank Kharge
SHARE

– ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ
– ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ; ಬಾಯಿ ಬಿಡದ ಬಿಜೆಪಿ ನಾಯಕರು

ಕಲಬುರಗಿ: ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ (Kalaburagi) ಜಿಲ್ಲೆಗೆ ನೀಡಲಾಗಿದೆ. ಸುಮಾರು 2000 ಮನೆಗಳನ್ನು ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.

ಕಲಬುರಗಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

365 ಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು ತುಂಬಿಸಲಾಗುತ್ತಿದೆ. ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ನೀಡಿ ಬಡವರ ಮನೆ ಬೆಳಕಾಗಿದ್ದೇವೆ. 400 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇವೆ ಆ ಮೂಲಕ ನೀರಾವರಿ ಗ್ಯಾರಂಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 2000 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 330 ಶಾಲೆಗಳನ್ನು ಸ್ಥಾಪಿಸಲಾಗುತ್ತದೆ. ಜೊತೆಗೆ 2.50 ಲಕ್ಷ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು. ಸದ್ಯ 56,000 ಕ್ಕೂ ಅಧಿಕ ಖಾಲಿ ಹುದ್ದೆ ತುಂಬಲು ಈಗಾಗಲೇ ಕ್ರಮವಹಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ (Guarantee Scheme) ಮೂಲಕ ರಾಜ್ಯದ ಜನರಿಗೆ ನೆಮ್ಮದಿ ಜೀವನ ನಡೆಸಲು ಸರ್ಕಾರ ಪ್ರತಿ ವರ್ಷ 52,000 ಕೋಟಿ ರೂ.ಗೂ ಅಧಿಕ ವೆಚ್ಚ ಮಾಡುತ್ತಿದೆ. ಇದು ನಮ್ಮ ಬದ್ಧತೆ ಎಂದು ಹೇಳಿದರು.

ಸಾಧನೆ ತನ್ನ ಪಾಡಿಗೆ ಆಗುವುದಿಲ್ಲ. ಅದರ ಹಿಂದೆ ಶ್ರಮ ಇರಬೇಕು, ಛಲ ಇರಬೇಕು. ಜನರ ಬದುಕನ್ನು ಬದಲಾವಣೆ ಮಾಡುತ್ತೇನೆ ಎನ್ನುವ ಹಠ ಇರಬೇಕು. ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ಅವರ ಋಣವನ್ನ ಕಲ್ಯಾಣ ಕರ್ನಾಟಕದ ಜನತೆ ತೀರಿಸಿದ್ದಾರೆ. 371 ಜೆ ಮೂಲಕ ಈ ಭಾಗದ ಜನರ ಬದುಕನ್ನು ಬದಲಾವಣೆ ಮಾಡಿದ್ದಾರೆ. ಈ ಭಾಗದಲ್ಲಿ ಸಂಸತ್ ಸದಸ್ಯರನ್ನು ಗೆಲ್ಲಿಸುವ ಮೂಲಕ ಅವರಿಗೆ ಋಣ ಸಂದಾಯ ಮಾಡಿದ್ದೀರಿ ಎಂದು ತಿಳಿಸಿದರು. ಇದನ್ನೂ ಓದಿ: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

ಚಿತ್ತಾಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಮುನ್ನುಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ ಅವರೊಂದಿಗೆ ಭಾಗವಹಿಸಿ… pic.twitter.com/QGRaGvISV2

— DK Shivakumar (@DKShivakumar) March 8, 2026

ಪ್ರಿಯಾಂಕ್ ಭವಿಷ್ಯದ ನಾಯಕ
ನಮ್ಮ ರಾಜ್ಯಕ್ಕೆ ಭವಿಷ್ಯದ ನಾಯಕರಾಗಿ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ಈ ಕಲಬುರಗಿ ಜನತೆ ನೀಡಿದ್ದಾರೆ. ಅವರಿಗೆ ನಮ್ಮೆಲ್ಲರ ಪರವಾಗಿ ಕೋಟಿ, ಕೋಟಿ ನಮಸ್ಕಾರಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯಕ್ಷಮತೆ ಅತ್ಯುತ್ತಮವಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಮಾರ್ಗದರ್ಶನದಲ್ಲಿ‌ ಪ್ರಿಯಾಂಕ್ ಖರ್ಗೆ ಉತ್ತಮ‌ ಕೆಲಸ ಮಾಡುತ್ತಿದ್ದಾರೆ. ಯಾವುದೇ ಇಲಾಖೆಯ ಜವಾಬ್ದಾರಿ ನೀಡಿದರು ಅಷ್ಟೇ ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಪಕ್ಷ, ರಾಜ್ಯದ ಅಭಿವೃದ್ಧಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಸರ್ವ ಸಮುದಾಯಗಳ ಏಳಿಗೆಗೆ ದುಡಿಯುತ್ತಿದ್ದಾರೆ ಎಂದು ಹೇಳಿದರು.

ಅವರು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕನಕಪುರದ ಜನತೆ ನನಗೆ ಆಶೀರ್ವಾದ ಮಾಡಿದಂತೆ ನೀವು ಕೂಡಾ ಪ್ರಿಯಾಂಕ್ ಖರ್ಗೆ, ರಾಧಾಕೃಷ್ಣ ದೊಡ್ಡಮನಿ ಅವರಿಗೆ ಆಶೀರ್ವಾದ ಮಾಡಬೇಕು ಹಾಗೂ ಅವರ ಕುಟುಂಬದ ಜೊತೆಗೆ ಸದಾ ಇರಬೇಕು ಎಂದು ಮನವಿ ಮಾಡಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದಾಗ ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಿ ಕೆರೆಗಳನ್ನು ತುಂಬಿಸಿದವರು. ಅನೇಕ ಕಡೆ ಅಂತರ್ಜಲ ಸಾವಿರಾರು ಅಡಿ ತಲುಪಿತ್ತು. ಈಗ 300- 400 ಅಡಿಗಳಿಗೆ ನೀರು ದೊರೆಯುತ್ತಿದೆ ಎಂದು ತಿಳಿಸಿದರು.

 

ಚಿತ್ತಾಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಮುನ್ನುಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ ಅವರೊಂದಿಗೆ ಭಾಗವಹಿಸಿ… pic.twitter.com/QGRaGvISV2

— DK Shivakumar (@DKShivakumar) March 8, 2026

ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಕೊಡುಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶತಮಾನಗಳ ಕಾಲ ಚಿರಸ್ಥಾಯಿಯಾಗಿ ಉಳಿಯಲಿದೆ‌. ಮರಕ್ಕೆ ಬೇರು ಮುಖ್ಯ ಅದೇ ರೀತಿ ಈ ಭಾಗದ ಜನರಿಗೆ ಖರ್ಗೆ ಅವರ ಮೇಲೆ ನಂಬಿಕೆ. ಕಲ್ಯಾಣ ಕರ್ನಾಟಕದ ಜನರ ಬದುಕಿಗೆ ಅವರು ಕೊಟ್ಟಂತ ಕೆಲಸಗಳು ಇಡೀ ದೇಶದ ಜನರಿಗೆ ಗೊತ್ತು ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ 3 ರ ಅನುಷ್ಠಾನಕ್ಕೆ ಭೂಸ್ವಾಧೀನ ನಡೆಸಲು ಮುಂದಾಗಿದ್ದೇವೆ. ಒಂದು ಎಕರೆಗೆ 35- 40 ಲಕ್ಷ ರೂ. ಪರಿಹಾರ ನಿಗದಿ ಮಾಡಲಾಗಿದೆ. ನಮ್ಮ ನೀರು ನಮ್ಮ ಹಕ್ಕು. ಆಂಧ್ರ ಹಾಗೂ ಮಹಾರಾಷ್ಟ್ರದವರು ಯೋಜನೆ ಅನುಷ್ಠಾನಕ್ಕೆ ಅಡ್ಡಗಾಲು ಹಾಕಿದ್ದಾರೆ ಎಂದು ಹೇಳಿದರು.

ಈ ರಾಜ್ಯದ ರೈತರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಜನಸಾಮಾನ್ಯರ ಪರವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಅವರ ಜೀವನಕ್ಕೆ ನೆರವಾಗಿದೆ. ಐದು ಗ್ಯಾರಂಟಿ ಯೋಜನೆಗಳು ಬದುಕನ್ನು ಹಸನಾಗಿಸಿದೆ. 20 ಸಾವಿರ ಕೋಟಿಯನ್ನ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಬಳಸುತ್ತಿದ್ದೇವೆ ಎಂದರು.

ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯನ್ನು 60 ರೂಪಾಯಿ ಏರಿಕೆ ಮಾಡಿದೆ. ಇದರ ಬಗ್ಗೆ ಒಬ್ಬನೇ ಒಬ್ಬ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ತಿಳಿಸಿದರು.

TAGGED:congressDK ShivakumarKalaburagiPriyank Khargeಕಲಬುರಗಿಕಾಂಗ್ರೆಸ್ಡಿಕೆ ಶಿವಕುಮಾರ್ಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
16 minutes ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
19 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
45 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?