ಬೆಂಗಳೂರು: ಕಾರು ಹಾಗು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತ ಪಟ್ಟಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿರುವಂತ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಸಂಭವಿಸಿದೆ.
ಬನ್ನೇರುಘಟ್ಟದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎದುರು ದಿಕ್ಕಿನಿಂದ ಬರುತ್ತಿದ್ದ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಒಂದು ಬೈಕ್ ನಲ್ಲಿದ್ದ ಇಬ್ಬರು ಸವಾರರಲ್ಲಿ ಓರ್ವ ಸವಾರ ಮೃತ ಪಟ್ಟಿದರೆ, ಇನ್ನುಳಿದ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮೃತ ವ್ಯಕ್ತಿ ಎಲ್ಲಿಯವರು ಎಂಬ ಗುರುತು ಪತ್ತೆಯಾಗಿಲ್ಲ. ಈ ಅಪಘಾತಕ್ಕೆ ಕಾರ್ ಚಾಲಕನ ಅತೀ ವೇಗವೇ ಕಾರಣವಾಗಿದ್ದು ಡಿಕ್ಕಿಯ ರಭಸಕ್ಕೆ ಆಕ್ಸಿಸ್ ಬೈಕ್ ಎರಡು ತುಂಡಾಗಿದೆ.
ಈ ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv