Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

Crime

ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

Public TV
Last updated: April 30, 2025 6:03 pm
Public TV
Share
3 Min Read
Mangaluru Mohammad Ashraf copy
ಗುಂಪು ದಾಳಿಯಲ್ಲಿ ಮೃತಪಟ್ಟ ಅಶ್ರಫ್‌
SHARE

– ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ನನ್ನದ್ದಲ್ಲ ಎಂದ ಪರಮೇಶ್ವರ್
– ಆರೋಪಿಗಳ ಹೇಳಿಕೆಯನ್ನು ಹೇಳಿದ್ದೆ ಎಂದ ಸಚಿವ

ಮಂಗಳೂರು/ ಬೆಂಗಳೂರು: ಕುಡುಪು (Kudupu) ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ (Manglauru) ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

ಅಪರಿಚಿತ ಮೃತದೇಹ ಅನುಮಾನಾಸ್ಪದವಾಗಿ ಸಿಕ್ಕಿದ ಹಿನ್ನಲೆಯಲ್ಲಿ ಬಿಸಿ ಬಿಸಿ ಚರ್ಚೆಗಳು ಅದಾಗಲೇ ಆರಂಭವಾಗಿತ್ತು. ಹಿಂದೂ ಯುವಕರು ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಅಂತಾ ಸಿಪಿಐಎಂ, ಎಸ್‌ಡಿಪಿಐ ಪಕ್ಷಗಳು ಆರೋಪ ಮಾಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ನೈಜ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ

ಕೊಲೆಯಾಗಿದ್ದು ಯಾಕೆ?
ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: 5 ತಿಂಗಳ ಬಳಿಕ ಇಸ್ಕಾನ್‌ನ ಚಿನ್ಮಯ್ ಕೃಷ್ಣದಾಸ್‌ಗೆ ಬಾಂಗ್ಲಾ ಹೈಕೋರ್ಟ್ ಜಾಮೀನು

ಗುಂಪು ಹತ್ಯೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇದೇ ಮೊದಲ ಬಾರಿಗೆ 2023 (BNS 2023) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಕೃತ್ಯದಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಭಾಗವಹಿಸಿರುವ ಸಂಶಯವಿದೆ. ಮೊದಲಿಗೆ 15 ಮಂದಿ ಹಾಗೂ ಮತ್ತೆ ಐವರು ಸೇರಿ ಒಟ್ಟು 20 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪತಿಯ ಹೆಸರು ಥಳಕು ಹಾಕಿಕೊಂಡಿದೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಗದಿಯಾಗಿದ್ದ ಮೋದಿ ರಷ್ಯಾ ಪ್ರವಾಸ ದಿಢೀರ್‌ ರದ್ದು!

ಯಾವುದೇ ದಾಖಲೆ, ವಿಳಾಸ ಇಲ್ಲದ ಮೃತ ವ್ಯಕ್ತಿಯ ಗುರುತು ಪತ್ತೆ ಬಗ್ಗೆ ಪೊಲೀಸರು ಸಾಕಷ್ಟು ಪರಿಶ್ರಮವಹಿಸಿ 2 ದಿನದ ಬಳಿಕ ಗುರುತು ಪತ್ತೆಯಾಗಿದೆ. ಮಂಗಳೂರಿಗೆ ವಲಸೆ ಕಾರ್ಮಿಕನಾಗಿ ಬಂದಿದ್ದ ಕೇರಳದ ವಯನಾಡಿನ ಮನವಂತವಾಡಿಯ ಪುಲ್ಪಲ್ಲಿ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.

ಇದೀಗ ಆತನ ಸಂಬಂಧಿಕರು ಮಂಗಳೂರಿಗೆ ಬಂದು ಮೃತದೇಹ ಅಶ್ರಫ್‌ನದ್ದೇ ಎಂದು ಗುರುತಿಸಿದ್ದಾರೆ. ಮೃತದೇಹವನ್ನು ಅಶ್ರಫ್ ಕುಟುಂಬಸ್ಥರಿಗೆ ಇಂದು ಹಸ್ತಾಂತರ ಮಾಡಲಾಗಿದ್ದು, ಸಂಬಂಧಿಕರು ಮೃತದೇಹವನ್ನು ಕೊಂಡು ಹೋಗಿದ್ದಾರೆ. ಕೊಲೆಯಾದ ಅಶ್ರಫ್ ಪಾನಮತ್ತನಾಗಿ ಪಾಕಿಸ್ಥಾನಕ್ಕೆ ಜೈಕಾರ ಕೂಗಿದ್ದಕ್ಕೆ ಗುಂಪು ಆತನ ಮೇಲೆ ಬಿದ್ದಿರುವ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಒಟ್ಟಿನಲ್ಲಿ ಯುವಕರ ಬಲವಾದ ಏಟಿಗೆ ಅಮಾಯಕ ಪ್ರಾಣ ಚೆಲ್ಲಿರೋದು ನಿಜಕ್ಕೂ ಖಂಡನೀಯವಾಗಿದೆ. ಇದನ್ನೂ ಓದಿ: LKG-UKG ದಾಖಲಾತಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಹೇಳಿಕೆ ನನ್ನದ್ದಲ್ಲ:
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾರಣ ಎಂದು ಮಂಗಳವಾರ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್ (G.Parameshwar), ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ದಕ್ಷಿಣ ಕನ್ನಡ ಜಿಪಂ ಸಿಇಒ

ಗುಂಪು ಹಲ್ಲೆ ನಡೆಸಿದ್ದವರ ಪೈಕಿ ಈವರೆಗೆ 20 ಮಂದಿಯನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ಮಾಡುವಾಗ ಮೃತಪಟ್ಟ ಯುವಕ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಎಂದು ಹೇಳಿದರು.

TAGGED:cricket matchcrimedakshina kannadaKudupumagaluruಕುಡುಪುಕ್ರಿಕೆಟ್ ಪಂದ್ಯಕ್ರೈಂದಕ್ಷಿಣ ಕನ್ನಡಮಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
1 minute ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
42 minutes ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
49 minutes ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
55 minutes ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
2 hours ago
Dunia Vijay
Bengaluru City

Video Viral | ಬೆಂಗಳೂರಲ್ಲಿ `ಜೊಂಬಿ ಡ್ರಗ್’ ನಶೆಯಲ್ಲಿ ತೇಲಾಡಿದ ಆರೋಪ – ನಟ ದುನಿಯಾ ವಿಜಯ್‌ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?