Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2000 ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪ, ತನಿಖೆ ಯಾಕಿಲ್ಲ? ಸರ್ಕಾರಕ್ಕೆ ಹೆಚ್‍ಡಿಕೆ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2000 ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪ, ತನಿಖೆ ಯಾಕಿಲ್ಲ? ಸರ್ಕಾರಕ್ಕೆ ಹೆಚ್‍ಡಿಕೆ ಪ್ರಶ್ನೆ

Bengaluru City

2000 ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪ, ತನಿಖೆ ಯಾಕಿಲ್ಲ? ಸರ್ಕಾರಕ್ಕೆ ಹೆಚ್‍ಡಿಕೆ ಪ್ರಶ್ನೆ

Public TV
Last updated: June 19, 2021 12:41 pm
Public TV
Share
3 Min Read
HDK 1
SHARE

– ನಿರ್ಲಕ್ಷ್ಯ ತೋರಿಸದೇ ಮೇಕೆದಾಟು ಯೋಜನೆ ಪೂರ್ಣಗೊಳಿಸಿ

ಬೆಂಗಳೂರು: ಸರ್ಕಾರದ ವಿರುದ್ಧವೇ ಸ್ವಪಕ್ಷೀಯರು ಮಾಡಿರುವ 2 ಸಾವಿರ ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಯಾಕಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ರೂ 150 ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ರೂ 2000 ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ?

MND HDK 2 medium

ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ ಯಡಿಯೂರಪ್ಪ 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ

ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು.

MYS HDK

ಮೇಕೆದಾಟು ಯೋಜನೆ ಶೀಘ್ರ ಪೂರ್ಣಗೊಳಿಸಿ:
ಮೇಕೆದಾಟು ಯೋಜನೆ ವಿಚಾರವಾಗಿ ಎನ್‍ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು. ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು.

ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆ ಪ್ರಮುಖವಾಗಿ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂಥದ್ದು. ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ಇಂದು ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು.

— B.S.Yediyurappa (@BSYBJP) June 18, 2021

ಕೇಂದ್ರ-ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು.

mekedatu 1 1

ಕೇಂದ್ರದ ಅನುಮತಿ ಸಿಕ್ಕ ಕೂಡಲೇ ಯೋಜನೆ ಆರಂಭಿಸುವ ಯಡಿಯೂರಪ್ಪ ಹೇಳಿಕೆಯನ್ನು ಸೋದರ ಎಂ.ಕೆ.ಸ್ಟಾಲಿನ್ ವಿರೋಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿರುವ ಪ್ರಕರಣವೊಂದರಲ್ಲಿ ಕರ್ನಾಟಕ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ ಎಂಬುದು ಅವರ ಆರೋಪ. ವಿಚಾರಣೆಯಾಗುತ್ತಿರುವ ಯೋಜನೆಯೊಂದಕ್ಕೆ ತಡೆ ತರಲು ಪ್ರಧಾನಿಯನ್ನು ಭೇಟಿಯಾಗಿದ್ದೂ ತಪ್ಪಲ್ಲವೇ?

ಹೊಗೇನಕಲ್ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ತಮಿಳುನಾಡು ಯಾವ ರೀತಿ ನಡೆದುಕೊಂಡಿತು ಎಂದು ನಾನು ಹೇಳಬೇಕಿಲ್ಲ. ಆ ಯೋಜನೆ ಆಗಿದ್ದು
ಎಂ. ಕೆ. ಸ್ಟಾಲಿನ್ ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲೇ. ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡು ಕರ್ನಾಟಕದ ಗಡಿ ದಾಟಿ ಬಂದಿತ್ತು. ಸಮರ್ಥನೆಯನ್ನೂ ಮಾಡಿಕೊಂಡಿತ್ತು. ಮೇಕೆದಾಟು ಕೂಡ ಕುಡಿಯುವ ನೀರಿನ ಯೋಜನೆಯೇ.

Mekedatu project 5

ಮೇಕೆದಾಟು ಯೋಜನೆಯನ್ನು ಯಾವ ಕೋನದಲ್ಲಿ ನೋಡಿದರೂ ಅದು ನ್ಯಾಯವಾಗೇ ಕಾಣುತ್ತದೆ. ಹೀಗಾಗಿ ವಿವಾದ ಅನಗತ್ಯ. ಕಾವೇರಿಗಾಗಿ ಕಲಹ ನಡೆದದ್ದು ಸಾಕು. ಈಗ ನಾವು ಸೋದರತೆ ಮೆರೆಯಬೇಕಾದ ಅನಿವಾರ್ಯತೆ ಇದೆ ಎಂಬುದನ್ನು ಸೋದರ ಎಂ.ಕೆ.ಸ್ಟಾಲಿನ್ ಅವರಿಗೆ ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ಅನಗತ್ಯ ಕಲಹದಲ್ಲಿ, ಅದೂ ಈ ಹೊತ್ತಲ್ಲಿ ನಾವು ಒಡೆದುಹೋಗಬಾರದು.

ಡಿಸಿಎಂ ಸ್ಪಷ್ಟನೆ ಸಮಾಧಾನ ತಂದಿದೆ:
ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಆರಂಭವಾಗಲಿರುವ 4 ವರ್ಷಗಳ ಪದವಿಯಲ್ಲಿ ಕನ್ನಡ ಭಾಷಾ ಕಲಿಕೆಯನ್ನು 1 ವರ್ಷಕ್ಕೆ ಸೀಮಿತಗೊಳಿಸುವ ಉನ್ನತ ಶಿಕ್ಷಣ ಸಮಿತಿಯ ಪ್ರಸ್ತಾವ ನಿರಾಸೆ ತಂದಿದೆ. ಕನ್ನಡ ಭಾಷಾ ಕಲಿಕೆ ಅದೊಂದು ವಿಷಯ ಮಾತ್ರವಲ್ಲ, ಯುವ ಸಮುದಾಯದಲ್ಲಿ ಸಾಕ್ಷಿಪ್ರಜ್ಞೆ ಬಿತ್ತುವ, ಅವರನ್ನು ಸೂಕ್ಷ್ಮಮತಿಗಳನ್ನಾಗಿ ಮಾಡುವ ಯಶಸ್ವಿ ಪ್ರಯತ್ನ. ಇದನ್ನೂ ಓದಿ: ಪದವಿ ಶಿಕ್ಷಣದಲ್ಲಿ ಭಾಷಾ ವಿಷಯದಲ್ಲಿ ಕನ್ನಡಿಗರಿಗೆ ದ್ರೋಹ -ಸಿದ್ದರಾಮಯ್ಯ

Ashwath Narayana medium

ರಕ್ತಕ್ಕೆ ಅಂಟಿದ ಭಾಷೆ ಕಲಿಕೆಯನ್ನು 1 ವರ್ಷಕ್ಕೆ ಮಿತಿಗೊಳಿಸುವುದು ಅವೈಜ್ಞಾನಿಕ. ಈ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಈಗಿನ ವ್ಯವಸ್ಥೆಯಂತೆ 2 ವರ್ಷದ ಕನ್ನಡ ಕಲಿಕೆಗೆ ತೊಂದರೆ ಇಲ್ಲ ಎಂದು ಹೇಳಿರುವುದು ಸ್ವಲ್ಪ ಸಮಾಧಾನ ತಂದಿದೆ. ಅದರೆ, 1 ವರ್ಷಕ್ಕೆ ಮಿತಿಗೊಳಿಸುವ ಪ್ರಯತ್ನಗಳು ನಡೆದರೆ ಪರಿಣಾಮ ಕೆಟ್ಟದಾಗುತ್ತದೆ. ಇದನ್ನೂ ಓದಿ: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಅಶ್ವತ್ಥ ನಾರಾಯಣ

TAGGED:bjph d kumaraswamymekedatu projectPublic TVಪಬ್ಲಿಕ್ ಟಿವಿಬಿಜೆಪಿಮೇಕೆದಾಟುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

devendra fadnavis
Karnataka

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
11 minutes ago
Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
48 minutes ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
1 hour ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
1 hour ago
India AI Impact Summit PM Narendra Modi meets Google CEO discusses AI collaborations
Latest

AI ಸಹಯೋಗದ ಬಗ್ಗೆ ಸುಂದರ್‌ ಪಿಚೈ ಜೊತೆ ಮೋದಿ ಮಾತುಕತೆ

Public TV
By Public TV
1 hour ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?