Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೀಪಾವಳಿ ಪ್ರಯುಕ್ತ 2,000 ವಿಶೇಷ ಬಸ್‌; ಎಲ್ಲಿಗೆ? ಯಾವಾಗ? – ಇಲ್ಲಿದೆ ಫುಲ್‌ ಡಿಟೇಲ್ಸ್‌

Public TV
Last updated: October 26, 2024 3:48 pm
Public TV
Share
3 Min Read
KSRTC 2
SHARE

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸುಮಾರು 2,000 ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಅಕ್ಟೋಬರ್‌ 31 ನರಕ ಚತುರ್ದಶಿ, ನವೆಂಬರ್‌ 1 ಕನ್ನಡ ರಾಜ್ಯೋತ್ಸವ (Kannada Rajyotsava) ಹಾಗೂ ನವೆಂಬರ್‌ 2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 30ರಿಂದ ನವೆಂಬರ್‌ 1ರ ವರೆಗೆ ಬೆಂಗಳೂರಿನಿಂದ (Bengaluru) ಈ ಕೆಳಕಂಡ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್‌ 3 ಹಾಗೂ ನವೆಂಬರ್‌ 4ರಂದು ವಿಶೇಷ ಬಸ್‌ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

KSRTC

ವಿಶೇಷ ಬಸ್‌ ಸೌಲಭ್ಯ ಎಲ್ಲಿಂದ – ಎಲ್ಲಿಗೆ? ಪ್ರಕಟಣೆಯಲ್ಲಿ ಏನಿದೆ?

* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಇರಲಿದೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ವಿಶೇಷ ಬಸ್‌ ಸೌಲಭ್ಯ ಇರಲಿದೆ. ಇದನ್ನೂ ಓದಿ: ಉತ್ತರ ಪ್ರದೇಶ| ರೈಲು ಹಳಿಗಳ ಮೇಲೆ 6 ಕೆಜಿ ಮರದ ತುಂಡು ಇರಿಸಿ ಹಳಿ ತಪ್ಪಿಸಲು ಯತ್ನ

KSRTC

* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ಕೋರಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಡಿ.6ಕ್ಕೆ ದಿಲ್ಜಿತ್ ಶೋ; ಅಕ್ರಮ ಟಿಕೆಟ್‌ ಮಾರಾಟ ಆರೋಪ – ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ED ದಾಳಿ

KSRTC electric bus

ಟಿಕೆಟ್‌ ಬುಕಿಂಗ್‌ ಹೇಗೆ?
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್‌ಸೈಟ್‌ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಹೇಳಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನ ಪಠಾಣ್ ರೌಡಿಶೀಟರ್ ಅಂದಿದ್ದು ಅವರ ಪಕ್ಷದವರೇ, ಅವ್ರೇ ಸ್ಪಷ್ಟೀಕರಣ ಕೊಡಲಿ- ಬೊಮ್ಮಾಯಿ

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಸಾರಿಗೆ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ. ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

TAGGED:DeepavaliDeepavali Special BusDiwaliKannada Rajyotsavaksrtcಕನ್ನಡ ರಾಜ್ಯೋತ್ಸವಕೆಎಸ್‍ಆರ್‍ಟಿಸಿದೀಪಾವಳಿದೀಪಾವಳಿ ವಿಶೇಷ ಬಸ್‌
Share This Article
Facebook Whatsapp Whatsapp Telegram

Cinema Updates

TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
6 hours ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
7 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
8 hours ago
shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
9 hours ago

You Might Also Like

TravisHead
Cricket

ಹೈದರಾಬಾದ್‌ಗೆ ಸನ್‌ ಸ್ಟ್ರೋಕ್‌ – ಟ್ರಾವಿಸ್‌ ಹೆಡ್‌ಗೆ ಕೊರೊನಾ ಪಾಸಿಟಿವ್‌!

Public TV
By Public TV
2 minutes ago
Justice Not Revenge Indian Army Shares New Operation Sindoor Video
Latest

ಪಾಕ್ ಉಗ್ರ ನೆಲೆ ಧ್ವಂಸದ ಮತ್ತೊಂದು ವಿಡಿಯೋ ವೈರಲ್ – ಪ್ರತೀಕಾರವಲ್ಲ ಇದು ನ್ಯಾಯ ಎಂದ ಸೇನೆ!

Public TV
By Public TV
5 minutes ago
jairam ramesh Rahul gandhi
Latest

ʻಆಪರೇಷನ್‌ ಸಿಂಧೂರʼವನ್ನ ಬಿಜೆಪಿ ರಾಜಕೀಯಗೊಳಿಸುತ್ತಿದೆ – ಕಾಂಗ್ರೆಸ್‌ ಆರೋಪ

Public TV
By Public TV
21 minutes ago
koppala couple parents boycotted for marrying a married woman
Crime

ವಿವಾಹಿತೆಯನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ 8 ವರ್ಷಗಳಿಂದ ಕುಟುಂಬಕ್ಕೆ ಬಹಿಷ್ಕಾರ

Public TV
By Public TV
29 minutes ago
Crime 3
Crime

ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

Public TV
By Public TV
2 hours ago
Jyoti Malhotra 1
Crime

ಪಾಕ್‌ಗೆ ಪುರಿ ಜಗನ್ನಾಥ ದೇವಾಲಯದ ಫೋಟೋ, ವಿಡಿಯೋ ಸೋರಿಕೆ ­- ಜ್ಯೋತಿ ಸಂಪರ್ಕದಲ್ಲಿದ್ದ ಮತ್ತೊಬ್ಬ ಯೂಟ್ಯೂಬರ್‌ಗೆ IB ಡ್ರಿಲ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?