Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2011ರ ವಿಶ್ವಕಪ್ ಫೈನಲ್‍ನಲ್ಲಿ ಯುವಿಗಿಂತ ಧೋನಿ ಕೀರ್ತಿ ಹೆಚ್ಚಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2011ರ ವಿಶ್ವಕಪ್ ಫೈನಲ್‍ನಲ್ಲಿ ಯುವಿಗಿಂತ ಧೋನಿ ಕೀರ್ತಿ ಹೆಚ್ಚಿದ್ದು ಹೇಗೆ?

Cricket

2011ರ ವಿಶ್ವಕಪ್ ಫೈನಲ್‍ನಲ್ಲಿ ಯುವಿಗಿಂತ ಧೋನಿ ಕೀರ್ತಿ ಹೆಚ್ಚಿದ್ದು ಹೇಗೆ?

Public TV
Last updated: April 5, 2020 6:54 pm
Public TV
Share
3 Min Read
Dhoni Yuvi
SHARE

– ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?
– ಎಲ್ಲವನ್ನೂ ರಿವಿಲ್ ಮಾಡಿದ ಭಾರತ ಕ್ರಿಕೆಟ್ ದಂತಕಥೆ

ಮುಂಬೈ: ಟೀಂ ಇಂಡಿಯಾ 9 ವರ್ಷಗಳ ಹಿಂದೆ ಎರಡನೇ ಬಾರಿಗೆ ವಿಶ್ವಕಪ್ ಚಾಂಪಿಯನ್ ಆಗಿತ್ತು. ಏಪ್ರಿಲ್ 2ರಿಂದ ಈ ಬಗ್ಗೆ ಅನೇಕ ಚರ್ಚೆಗಳಾಗಿದ್ದವು. ಈ ವಾರವೂ ಮತ್ತೊಮ್ಮೆ ಫೈನಲ್ ಪಂದ್ಯದ ಬಗ್ಗೆ ಚರ್ಚೆ ನಡೆಯುತ್ತಿದೆ.

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿ ಏಕದಿನ ವಿಶ್ವಕಪ್ ಗೆದ್ದಿತ್ತು. ಅಂದಿನ ನಾಯಕ ಎಂ.ಎಸ್.ಧೋನಿ ಅಜೇಯ 91 ರನ್, ಅದರಲ್ಲೂ ವಿಶೇಷವಾಗಿ ಫಿನಿಶಿಂಗ್ ಶಾಟ್ ಸಿಕ್ಸರ್ ಅನ್ನು ಸಿಡಿಸಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚಳಿಯದಂತೆ ಉಳಿದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದ್ದರು. ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಉತ್ತಮ ಆಲ್‍ರೌಂಡರ್ ಪ್ರದರ್ಶನ ನೀಡುತ್ತಲೇ ಬಂದಿದ್ದರೂ ಧೋನಿ ಯುವರಾಜ್ ಸಿಂಗ್ ಅವರಿಗಿಂತ ಹೆಚ್ಚು ಕೀರ್ತಿಯನ್ನು ಪಡೆದಿದ್ದು ಯಾಕೆ ಎಂಬ ಚರ್ಚೆ ಭಾರೀ ಸದ್ದು ಮಾಡುತ್ತಿದೆ.

Gambhir MS Dhoni

ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಮಾಧ್ಯಮವೊಂದರ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಸಚಿನ್, ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಅವರು ಕ್ವಾರ್ಟರ್ ಫೈನಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದ್ದರಿಂದ ಅವರು 5ನೇ ಕ್ರಮಾಂಕ, ನಾಯಕ ಧೋನಿ 6ನೇ ಕ್ರಮಾಂಕ ಮತ್ತು ಸುರೇಶ್ ರೈನಾ 7ನೇ ಕ್ರಮಾಂಕದಲ್ಲಿ ಬ್ಯಾಂಟಿಗ್ ಮಾಡಿದ್ದರು ಎಂದು ತಿಳಿಸಿದ್ದಾರೆ.

ಟೀಂ ಇಂಡಿಯಾ ವೇಗದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಫೈನಲ್ ಪಂದ್ಯದಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದ್ದರು. ವಿರೇಂದ್ರ ಸೆಹ್ವಾಗ್ ಉಪುಲ್ ತರಂಗ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಮೂಲಕ ನಾವು ಶ್ರೀಲಂಕಾವನ್ನು 274 ರನ್‍ಗಳಿಗೆ ಕಟ್ಟಿ ಹಾಕಿದ್ದೆವು. ಆದರೆ ಏಕಾಂಗಿ ಹೋರಾಟ ನಡೆಸಿದ್ದ ಮಹೇಲಾ ಜಯವರ್ಧನೆ 103 ರನ್ ಚಚ್ಚಿದ್ದರು ಎಂದು ನೆನೆದ್ದಾರೆ.

Sachin Tendulkar 1

ಕ್ವಾರ್ಟರ್-ಫೈನಲ್ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ನನ್ನ ಮತ್ತು ವೀರು ಜೊತೆಯಾಟದ ನಂತರ ನಾನು ಡ್ರೆಸ್ಸಿಂಗ್ ಕೋಣೆಗೆ ಮರಳಿದೆ. ಆಗ ಫಿಸಿಯೋ ಟೇಬಲ್‍ನಲ್ಲಿ ಮಲಗಿದೆ. ವೀರು ನನ್ನ ಪಕ್ಕದಲ್ಲಿದ್ದರು. ಆಸೀಸ್ ವಿರುದ್ಧ ಗೆಲವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಾಗ ಸಂತೋಷ ಇಮ್ಮಡಿಯಾಗಿತ್ತು. ಆಗ ನೀವು ನನ್ನ ಪಕ್ಕದಲ್ಲಿ ಕುಳಿತುಕೊಳ್ಳಿ ಎಲ್ಲೂ ಹೋಗಬೇಡಿ ಅಂತ ಸೆಹ್ವಾಗ್ ಅವರಿಗೆ ನಾನು ಹೇಳಿದ್ದೆ ಎಂದು ಸಚಿನ್ ನೆನಪನ್ನು ಬಿಚ್ಚಿಟ್ಟರು.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೌತಮ್ ಮತ್ತು ವಿರಾಟ್ ಉತ್ತಮ ಜೊತೆಯಾಟ ನಡೆದಿತ್ತು. ಎದುರಾಳಿ ತಂಡಕ್ಕಿಂತ ಕೆಲವು ಹೆಜ್ಜೆ ಮುಂದಿಡಲು ನಾವು ಬಯಸಿದ್ದೇವೆ. ಈ ವೇಳೆ ನಾನು ವೀರೂಗೆ, ‘ಎಡಗೈ ಬ್ಯಾಟ್ಸ್‌ಮನ್ ಗೌತಮ್ ವಿಕೆಟ್ ಒಪ್ಪಿಸಿ ಹೊರ ಬಂದರೆ ಎಡಗೈ ಬ್ಯಾಟ್ಸ್‌ಮನ್ ಯುವಿ ಒಳಗೆ ಹೋಗಬೇಕು. ಒಂದು ವೇಳೆ ಬಲಗೈ ಬ್ಯಾಟ್ಸ್‌ಮನ್ ವಿರಾಟ್ ಹೊರಬಂದರೆ ಬಲಗೈ ಬ್ಯಾಟ್ಸ್‌ಮನ್ ಧೋನಿ ಬ್ಯಾಟಿಂಗ್‍ಗೆ ಇಳಿಯಬೇಕು’ ಎಂದು ಸಲಹೆ ನೀಡಿದ್ದೆ. ಹೀಗಾಗಿ ವಿರಾಟ್ ವಿಕೆಟ್ ಒಪ್ಪಿಸಿ ಹೊರ ಬಂದಿದ್ದರಿಂದ ಯುವಿಯನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಡ್ರಾಫ್ಟ್ ಮಾಡಲಾಯಿತು. ಏಕೆಂದರೆ ಬಲಗೈ, ಎಡಗೈ ಬ್ಯಾಟಿಂಗ್ ಸಂಯೋಜನೆ ಇರುವುದು ಮುಖ್ಯವಾಗಿತ್ತು. ಯುವಿ ಪ್ರಚಂಡ ರೂಪದಲ್ಲಿದ್ದರು. ಆದರೆ ಶ್ರೀಲಂಕಾದಲ್ಲಿ ಇಬ್ಬರು ಆಫ್ ಸ್ಪಿನ್ನರ್‌ಗಳು ಇದ್ದರು. ಆದ್ದರಿಂದ ಕಾರ್ಯತಂತ್ರದಲ್ಲಿ ಬದಲಾವಣೆ ಇರುತ್ತದೆ ಎಂದು ನಾನು ಭಾವಿಸಿದ್ದೆ ಎಂದು ಸಚಿನ್ ತಂತ್ರಗಾರಿಕೆ ರಿವೀಲ್ ಮಾಡಿದ್ದಾರೆ.

sehwaggrab 660 010713013718

ಈ ತಂತ್ರವನ್ನು ಅನುಸರಿಸುವಂತೆ ಸಲಹೆ ನೀಡಲು ಗ್ಯಾರಿ ಹೊರಗೆ ಕುಳಿತಿದ್ದ ಎಂ.ಎಸ್.ಧೋನಿ ಕಡೆಗೆ ತಿರುಗಿ ನೋಡಿದೆ. ಆಗ ಧೋನಿ ನನ್ನ ಬಳಿಗೆ ಬಂದಾಗ ವೀರು, ಕೋಚ್ ಗ್ಯಾರಿ ಕಸ್ಟರ್ನ್ ಹಾಗೂ ನಾನು ಅದರ ಬಗ್ಗೆ ಮಾತನಾಡಿದ್ದೆವು. ಗ್ಯಾರಿ ಸಹ ಒಪ್ಪಿದ್ದರು. ಆಗ ಮೈದಾನಕ್ಕಿಳಿಯಲು ಧೋನಿ ಸಿದ್ಧರಾದರು ಎಂದು ತಿಳಿಸಿದ್ದಾರೆ.

ಇದೇ ವೇಳೆ ವಿರೇಂದ್ರ ಸೆಹ್ವಾಗ್ ಮಾತನಾಡಿ, ನಮ್ಮ ಮೂಲಭೂತ ಅಂಶಗಳನ್ನು ಸರಿಯಾಗಿ ಪಡೆದರೆ, ನಾವು ಯಾವಾಗಲೂ ನಿಯಂತ್ರಣದಲ್ಲಿರುತ್ತೇವೆ ಎಂದು ನಮಗೆ ತಿಳಿದಿತ್ತು. ನಾನು ಆರಂಭದಲ್ಲಿ ತುಂಬಾ ನಿರಾಶೆಗೊಂಡಿದ್ದೆ. ಸಚಿನ್ ಯಾವಾಗ ವಿಕೆಟ್ ಒಪ್ಪಿಸಿ ಹೊರ ಬಂದರೋ ನಾನು ಮೌನಕ್ಕೆ ಜಾರಿಬಿಟ್ಟಿದ್ದೆ ಎಂದು ನೆನೆದರು.

‘ಗೌತಮ್ ಗಂಭೀರ್ ಅವರ 97 ರನ್‍ಗಳ ಅಮೂಲ್ಯವಾದ ಇನ್ನಿಂಗ್ಸ್ ಗುರಿಯನ್ನು ಬೆನ್ನಟ್ಟುವಲ್ಲಿ ಅಡಿಪಾಯ ಹಾಕಿತು. ಜೊತೆಗೆ ಧೋನಿ ಅಜೇಯ 91 ರನ್ ಗಳಿಸಿ ಗುರಿ ತಲುಪಿದ್ದರು. ಧೋನಿ ಫಿನಿಶಿಂಗ್ ಸಿಕ್ಸರ್ ಸಿಡಿಸಿದ್ದು ಸ್ಮರಣೀಯವಾಗಿಸಿದೆ ಎಂದು ಸಚಿನ್ ಹೇಳಿದ್ದಾರೆ.

TAGGED:2011 World Cupms dhoniPublic TVsachin tendulkarVirender SehwagYuvraj Singhಎಂ ಎಸ್ ಧೋನಿಗೌತಮ್ ಗಂಭೀರ್ಪಬ್ಲಿಕ್ ಟಿವಿಯುವರಾಜ್ ಸಿಂಗ್ವಿರೇಂದ್ರ ಸೆಹ್ವಾಗ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
21 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
39 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
1 hour ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
1 hour ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?