ಶಾಸಕ ಮುನಿರತ್ನಗೆ ಬಿಗ್ ರಿಲೀಫ್

Public TV
1 Min Read
munirathna

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮವೆಸಗಿದ್ದ ಪ್ರಕರಣದಿಂದ ಮುನಿರತ್ನ ಖುಲಾಸೆಗೊಂಡಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಸ್ ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದೆ.

2013ರಲ್ಲಿ ಚುನಾವಣಾ ಅಕ್ರಮ ಎಸಗಿ ಅಧಿಕಾರಿ ರವಿಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಮುನಿರತ್ನ ಅವರ ಮೇಲೆ ಕೇಳಿ ಬಂದಿತ್ತು. ಆರೋಪ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಪ್ರಕರಣದಿಂದ ಮುನಿರತ್ನ ಅವರು ಖುಲಾಸೆಗೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *