ಮೋಸ್ಟ್ ವಾಂಟೆಡ್ ಉಗ್ರ ದೊಡ್ಡಬಳ್ಳಾಪುರದಲ್ಲಿ ಅರೆಸ್ಟ್

Public TV
1 Min Read
terrorist arrest

ಬೆಂಗಳೂರು: ದೊಡ್ಡಬಳ್ಳಾಪುರ ಮಸೀದಿಯೊಂದರಲ್ಲಿ ತಂಗಿದ್ದ ಮೋಸ್ಟ್ ವಾಂಟೆಡ್ ಶಂಕಿತ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

ಬಾಂಗ್ಲಾದೇಶದ ಜಮತ್-ಉಲ್ಲಾ-ಮುಜ್ಜಾಹೀದಿನ್ ಎಂಬ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಬೀಬರ್ ರೆಹಮಾನ್ ಎಂಬ ಉಗ್ರನನ್ನು ಇಂದು ಮಧ್ಯಾಹ್ನ ಬೆಂಗಳೂರು ಹಾಗೂ ಕೊಲ್ಕತ್ತಾ ಎನ್‍ಐಎ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ಮಸೀದಿಯೊಂದರ ಬಳಿ ಬಂಧಿಸಿದ್ದಾರೆ.

ಬಂಧಿತ ಉಗ್ರ ಹಬೀಬರ್ 2013ರ ಭೋದಗಯಾ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತು ಪಶ್ಚಿಮ ಬಂಗಾಳದ ಬುದ್ರ್ವಾನ್ ಸ್ಫೋಟದಲ್ಲಿ ಆರೋಪಿಯಾಗಿದ್ದಾನೆ. ಈ ಪ್ರಕರಣದಲ್ಲಿ 8 ಜನ ಭಾಗಿಯಾಗಿದ್ದು ಮೂವರ ಬಂಧನವಾಗಿತ್ತು. ಉಳಿದ 5 ಜನಕ್ಕೆ ಎನ್‍ಐಎ ಅಧಿಕಾರಿಗಳು ಶೋಧ ನಡೆಸಿದ್ದರು. ಕಳೆದ ಐದು ದಿನಗಳಿಂದ ಬೆಂಗಳೂರು ಹೊರ ವಲಯದ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಉಗ್ರ ತಂಗಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಸಲಿಗೆ ಬೆಂಗಳೂರಿನಲ್ಲಿ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ ಅನ್ವರ್ ಎಂಬಾತನೊಂದಿಗೆ ಈತ ನಂಟು ಹೊಂದಿದ್ದು ಮಸೀದಿಗೆ ಬಂದು ಹೋಗುತ್ತಿದ್ದ. ಕೆಲ ಸಮಯದ ಬಳಿಕ ಮೌಲ್ವಿ ಅನ್ವರ್ ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಮಸೀದಿಯಲ್ಲಿ ಮೌಲ್ವಿಯಾಗಿ ನೇಮಕಗೊಂಡಿದ್ದ. ಹೀಗಾಗಿ ಆಗಾಗ ಮೌಲ್ವಿ ಅನ್ವರ್ ಭೇಟಿ ಮಾಡಲು ಎಂದು ದೊಡ್ಡಬಳ್ಳಾಪುರದ ಮಸೀದಿಗೆ ಬರುತ್ತಿದ್ದ. ಇದೇ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರದಲ್ಲಿ ಬಾಡಿಗೆ ಮನೆ ಮಾಡಲು ಉಗ್ರ ಪ್ಲಾನ್ ಮಾಡಿದ್ದನು ಮತ್ತು ಮನೆಯನ್ನು ಸಹ ನೋಡಿಕೊಂಡು ಬಂದಿದ್ದ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ.

Blast

ಸದ್ಯ ಬಂಧಿತ ಉಗ್ರ ಹಬೀಬುಲ್ ರೆಹಮಾನ್ ನನ್ನ ಪಶ್ಚಿಮ ಬಂಗಾಳಕ್ಕೆ ಕರೆದೊಯ್ಯಲಾಗುತ್ತಿದ್ದು, ಮತ್ತೊಂದೆಡೆ ಮಸೀದಿಯ ಮೌಲ್ವಿ ಅನ್ವರ್ ನನ್ನ ದೊಡ್ಡಬಳ್ಳಾಪುರ ಪೊಲೀಸರ ವಶಕ್ಕೆ ನೀಡಲಾಗಿದೆ. ಉಗ್ರನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‍ಐಎ ಈ ಹಿಂದೆ ತಿಳಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *