Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

Districts

ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

Public TV
Last updated: May 7, 2018 1:01 pm
Public TV
Share
5 Min Read
karwar 1 1
SHARE

ಗೋವಾ, ಬೆಳಗಾವಿ, ಧಾರವಾಡ, ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಯನ್ನ ಹಂಚಿಕೊಂಡಿದೆ ಉತ್ತರ ಕನ್ನಡ ಜಿಲ್ಲೆ. ಹಚ್ಚ ಹಸುರಿನ ಸೀರೆಯುಟ್ಟು ಸದಾ ಮದುವಣಗಿತ್ತಿಯಂತೆ ಕಂಗೊಳಿಸೋ ಈ ಜಿಲ್ಲೆಗೆ ಅರಬ್ಬೀ ಸಮುದ್ರ ಕಿರೀಟಕ್ಕೊಂದು ಗರಿ ಇಟ್ಟಂತೆ. ರವೀಂದ್ರ ನಾಥರಿಗೆ ಗೀತಾಂಜಲಿ ಬರೆಯೋದಕ್ಕೆ ಸ್ಪೂರ್ತಿ ನೀಡಿದ್ದು ಕಾರವಾರದ ಕಡಲ ತೀರವಂತೆ. ಆದ್ರೆ, ಅಭಿವೃದ್ಧಿ ಅನ್ನೋ ವಿಚಾರ ಬಂದಾಗ ಮಾತ್ರ ಉತ್ತರ ಕನ್ನಡ ಜಿಲ್ಲೆ ನಿರುತ್ತರವಾಗಿ ಬಿಡುತ್ತದೆ. ಸಮೃದ್ಧವಾದ ನೈಸರ್ಗಿಕ ಸಂಪನ್ಮೂಲ ಜಿಲ್ಲೆಯ ಪ್ಲಸ್ ಪಾಯಿಂಟ್ ಆಗಿದ್ರೂ ಕೈಗೆಟುಕದೇ ಇರೋ ಅಭಿವೃದ್ಧಿಯೇ ಈ ಜಿಲ್ಲೆಗೆ ತಟ್ಟಿದ ಮಹಾನ್ ಶಾಪ. ಇಂತಿಪ್ಪ ಉತ್ತರ ಕನ್ನಡ ಜಿಲ್ಲೆಯಲ್ಲೀಗ ಚುನಾವಣೆ ರಂಗು ರಂಗೇರಿದೆ.

ಹಸಿರ ಕಾನನದ ನಡುವೆ ರಮ್ಯ ತಾಣಗಳ ವೈಭವ
ಉತ್ತರ ಕರ್ನಾಟಕಕ್ಕೆ ಹೋಗೋರು ಬನವಾಸಿಗೆ ಹೋಗಿಲ್ಲ ಅಂದ್ರೆ ನಿಮ್ಮ ಪ್ರವಾಸ ಪರಿಪೂರ್ಣವಾಗೋಕೆ ಸಾಧ್ಯಾನೇ ಇಲ್ಲ. ಮಹಾಕವಿ ಪಂಪನೇ ವರ್ಣಿಸಿರುವಂತೆ ಆರಂಕುಶ ವಿಟ್ಟೊಡಂ ನೆನೆವುದೆನ್ನ ಮನ ಬನವಾಸಿ ದೇಶಮಂ ಅಂತಾ ಈ ಸ್ಥಳವನ್ನು ಮನಬಿಚ್ಚಿ ವರ್ಣಿಸಿದ್ದಾನೆ.

ಇನ್ನು ಬೇಲೆಕೇರಿಯ ಅದಿರು ನಾಪತ್ತೆ ಪ್ರಕರಣವನ್ನು ಯಾರಾದ್ರೂ ಮರೆಯೋದುಂಟೇ..? ಬೇಲೆಕೇರಿ ಅತ್ಯಂತ ಹಳೆಯ ಹಾಗೂ ಸುಂದರ ಬಂದರು. ಉತ್ತರ ಕನ್ನಡದ ಭಟ್ಕಳ ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಹೆಬ್ಬಾಗಿಲಾಗಿತ್ತಂತೆ. ಭಯೋತ್ಪಾದಕ ಚಟುವಟಿಕೆಗಳು ಈ ಊರಿಗೆ ಕಪ್ಪು ಮಸಿ ಬಳೀತಾದ್ರೂ ಇಂದಿಗೂ ಭಟ್ಕಳ ಶಾಂತ ಸಮುದ್ರದಂತೆ ಕಂಗೊಳಿಸುತ್ತದೆ.

karwar 3 1

ಕಾರವಾರದಿಂದ ಕೇವಲ 40 ಕಿಲೋಮೀಟರ್ ದೂರದಲ್ಲಿದೆ ದಾಂಡೇಲಿ. ಸಿಂಥೇರಿ ರಾಕ್ಸ್, ನಾಗಝರಿ ವ್ಯಾಲಿ, ಕಾವಲಾ ಕೇವ್ಸ್ ಹಗೆ ದಾಂಡೇಲಿಯಲ್ಲಿ ನೋಡೋದಕ್ಕೆ ಅನೇಕ ಸ್ಥಳಗಳಿವೆ. ಅರಣ್ಯದಲ್ಲಿರೋ ವಸತಿ ಗೃಹದಲ್ಲಿ ಉಳಿದುಕೊಂಡು ಪ್ರವಾಸವನ್ನ ಕೂಲಾಗಿ ಅನುಭವಿಸಬಹುದು.

ಕಾರವಾರದಿಂದ ಸರಿ ಸುಮಾರು 60 ಕಿಲೋಮೀಟರ್ ದೂರದಲ್ಲಿರೋ ಪುಣ್ಯ ಕ್ಷೇತ್ರವೇ ಗೋಕರ್ಣ. ಶಿವನ ಆತ್ಮಲಿಂಗದ ಒಂದು ತುಣುಕು ಇಲ್ಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಈ ಕ್ಷೇತ್ರ ವಾರಣಾಸಿಯಷ್ಟೇ ಪವಿತ್ರ ಅನ್ನೋದು ಭಕ್ತರ ಅಂಬೋಣ. ಇನ್ನುಳಿದಂತೆ ಕಾರವಾರ ಸಮುದ್ರ ತೀರ, ಶಿರಸಿಯ ಮಾರಿಕಾಂಬ ದೇವಾಲಯ, ಶ್ಯಾಮಲೆಯ ತಟದಲ್ಲಿರೋ ಸೊಂದಾ ಮಠ, ಹಾಗೆಯೇ ಪ್ರಸಿದ್ಧ ಪ್ರವಾಸೀ ತಾಣವಾಗಿರೋ ಯಾಣ ಕೂಡಾ ನೋಡುಗರನ್ನ ಸೂಜಿಗಲ್ಲಿನಂತೆ ಸೆಳೆಯುತ್ತೆ.

ದಕ್ಷಿಣ ಕನ್ನಡದಲ್ಲಿ ತೆಂಕು ತಿಟ್ಟು, ಉತ್ತರ ಕನ್ನಡದಲ್ಲಿ ಬಡಾ ಬಡಗುತಿಟ್ಟಿನ ತಾಳ ಮೇಳ..!
ಯಕ್ಷಗಾನದಲ್ಲಿ ತೆಂಕು ತಿಟ್ಟು, ಬಡಗು ತಿಟ್ಟು ಹಾಗೂ ಬಡಾ ಬಡಗುತಿಟ್ಟು ಅನ್ನೋ ಪ್ರಬೇಧಗಳಿವೆ. ಇದ್ರಲ್ಲಿ ಉತ್ತರ ಕನ್ನಡದವರು ಬಡಾ ಬಡಗು ತಿಟ್ಟನ್ನಾಡುತ್ತಾರೆ. ಕೆರೆಮನೆ ಶಿವರಾಮ ಹೆಗಡೆ, ಕೆರೆಮನೆ ಮಹಾಬಲ ಹೆಗಡೆ, ಕೆರೆಮನೆ ಶಂಭು ಹೆಗಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ, ಶೇಣಿ ಗೋಪಾಲಕೃಷ್ಣ ಭಟ್ ಹೀಗೆ ಉತ್ತರಕನ್ನಡ ಘಟಾನುಘಟಿ ಯಕ್ಷಕರ್ಮಿಗಳ ತವರೂರು. ಇಂದಿಗೂ ಮನೋರಂಜನೆಗಾಗಿ ಸಿನಿಮಾ, ಟಿವಿ ಮಾಧ್ಯಮಗಳಿದ್ರೂನೂ ಉತ್ತರ ಕನ್ನಡದ ಮಂದಿ ಮಾತ್ರ ಯಕ್ಷಗಾನವನ್ನ ತಮ್ಮ ಉಸಿರಲ್ಲಿ ಉಸಿರಾಗಿಸ್ಕೊಂಡಿದ್ದಾರೆ.

ಉತ್ತರ ಕನ್ನಡದಲ್ಲಿ ಉತ್ತರವೇ ಇಲ್ಲದ ಪ್ರಶ್ನೆಗಳು ಹಲವಾರು..!
ಇಷ್ಟೆಲ್ಲಾ ವೈಶಿಷ್ಟ್ಯತೆಗಳ ನಡುವೆ ಉತ್ತರ ಕನ್ನಡದಲ್ಲಿ ಈ ಬಾರಿ ಅತೀ ಹೆಚ್ಚು ಸದ್ದು ಮಾಡಿದ್ದು ಪರೇಶ್ ಮೇಸ್ತಾ ಸಾವು. ಇದು ದೊಡ್ಡ ಮಟ್ಟದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಪರಿಣಾಮ ಬೀರೋ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇನ್ನು, ಅಭಿವೃದ್ಧಿ ಹಾಗೂ ಉತ್ತರ ಕನ್ನಡ ಒಂದು ರೀತಿಯಲ್ಲಿ ಎಣ್ಣೆ ಸೀಗೆ ಇದ್ದಂತೆ. ಅಭಿವೃದ್ಧಿ ಅನ್ನೋದನ್ನ ನೋಡಿಯೇ ಕಾಲವಾಗಿದೆ. ಹಾಗಾದ್ರೆ, ಕ್ಷೇತ್ರವಾರು ಲೆಕ್ಕಾಚಾರಗಳು, ಕಳೆದ ಬಾರಿಯ ಫಲಿತಾಂಶ ಹಾಗೂ ಈ ಬಾರಿಯ ಕ್ಯಾಂಡಿಡೇಟ್ ಗಳ ವಿವರಗಳನ್ನು ನೋಡೋಣ ಬನ್ನಿ.

karwar 2 1

ಕಾರವಾರ ಈ ಬಾರಿ ಯಾರ ಪಾಲಿನ ವರ..?

ಕರ್ನಾಟಕದ ಏಕೈಕ ಅಣು ವಿದ್ಯುತ್ ಸ್ಥಾವರ ಕೈಗಾ ಕಾರವಾರದಲ್ಲಿದೆ. ಕರ್ನಾಟಕದ ಎರಡನೇ ಅತೀ ಪ್ರಮುಖ ಬಂದರೂ ಕೂಡಾ ಹೌದು. ಇಲ್ಲಿನ ಜನ ಪಕ್ಷ ನೋಡೋರೇ ಅಲ್ಲ. ಯಾವ ವ್ಯಕ್ತಿ ಸೂಕ್ತ, ಯಾರ ವರ್ಚಸ್ಸು ಇಲ್ಲಿ ವರ್ಕೌಟ್ ಆಗುತ್ತೋ ಅವರಿಗೇ ಇಲ್ಲಿನ ಮತದಾರ ಜೈ ಅಂತಾನೆ. 2013ರಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಜಂಪ್ ಆಗಿದ್ದ ಆನಂದ್ ಅಸ್ನೋಟಿಕರ್ ಇಲ್ಲಿ ಮಕಾಡೆ ಮಲಗಿದ್ರು. ಈ ಬಾರಿ ಆಸ್ನೋಟಿಕರ್ ಜೆಡಿಎಸ್ ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಜೆಡಿಎಸ್ ಇಲ್ಲಿ ಇದ್ದೂ ಇಲ್ಲದಂತಿದ್ರೂ ಆಸ್ನೋಟಿಕರ್ ಹೆಸರು ಸ್ವಲ್ಪ ಮಟ್ಟಿಗೆ ಪರಿಗಣಿತಗೊಳ್ಬೋದು. ಇನ್ನುಳಿದಂತೆ ಬಿಜೆಪಿಯಿಂದ ರೂಪಾಲಿ ನಾಯ್ಕ್, ಕಾಂಗ್ರೆಸ್ ನಿಂದ ಸತೀಶ್ ಸೈಲ್ ಕೃಷ್ಣ ಕಣದಲ್ಲಿದ್ದಾರೆ. ಸೋ ಇಲ್ಲಿ ಮತದಾರ ಯಾರಿಗೆ ಜೈ ಅಂತಾನೆ ಅನ್ನೋದೇ ಸದ್ಯದ ಕುತೂಹಲ.

ಕುಮಟಾದಲ್ಲಿ ಗೆಲುವಿನ ತಮಟೆ ಹೊಡೆಯೋರು ಯಾರು..?
ಕುಮಟಾ ಹೊನ್ನವರ ಕ್ಷೇತ್ರದ ಹಾಲಿ ಶಾಸಕಿ ಶಾರದಾ ಮೋಹನ ಶೆಟ್ಟಿ. ಈ ಬಾರಿಯೂ ಇವರೇ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ. ಜೆಡಿಎಸ್ ನಿಂದ ಜಿಲ್ಲಾ ಪಂಚಾಯತ್ ಸದಸ್ಯ ಪ್ರದೀಪ್ ನಾಯ್ಕ್ ಬಿರುಸಿನ ಪ್ರಚಾರ ನಡೆಸ್ತಾ ಇದ್ದಾರೆ. 2013ರಲ್ಲಿ ಜೆಡಿಎಸ್ ನಿಂದ ಕಂಟೆಸ್ಟ್ ಮಾಡಿ ಕೇವಲ 420 ಮತಗಳಿಂದ ಸೋಲು ಕಂಡಿದ್ದ ದಿನಕರ್ ಶೆಟ್ಟಿ ಈ ಬಾರಿ ಭಾಜಪಾದ ಹುರಿಯಾಳು. ಕಳೆದ ಬಾರಿ ಶಾರದ ಮೋಹನ್ ಶೆಟ್ಟಿ 36,756 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ರು. ಜೆಡಿಎಸ್ ನ ದಿನಕರ್ ಕೇಶವ್ ಶೆಟ್ಟಿ 36,336 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತರಾಗ್ಬೇಕಾಯ್ತು.

ಭಟ್ಕಳದಲ್ಲಿ ಗೆಲುವಿನ ಅಟ್ಟಕ್ಕೇರೋರು ಯಾರು..?
ಕಳೆದ ಬಾರಿ ಪಕ್ಷೇತರವಾಗಿ ನಿಂತು ಗೆದ್ದು ಬೀಗಿದ್ದ ಮಂಕಾಳ ವೈದ್ಯ ಈ ಬಾರಿ ಕಾಂಗ್ರೆಸ್ ನಿಂದ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸುನಿಲ್ ನಾಯ್ಕ್ ಈ ಬಾರಿ ಬಿಜೆಪಿಯ ಕಟ್ಟಾಳು. ಜೆಡಿಎಸ್ ಇನಾಯಿತುಲ್ಲಾ ಷಾ ಬಂದ್ರಿಯವರಿಗೆ ಟಿಕೆಟ್ ಕೊಡೋದಕ್ಕೆ ಬಯಸಿದ್ರೂ ಕೊನೆಗೆ ಯಾರನ್ನೂ ಕಣಕ್ಕಿಳಿಸದೆ ಸೈಲೆಂಟಾಗಿದೆ.

ಹಳಿಯಾಳದಲ್ಲಿ ಗೆಲುವಿನ ಹಳಿಯಲ್ಲಿ ಓಡೋರು ಯಾರು..?
ಹಳಿಯಾಳ ಕ್ಷೇತ್ರ ಸಚಿವ ಆರ್.ವಿ ದೇಶಪಾಂಡೆಯವ್ರ ಸಾಮ್ರಾಜ್ಯ. 1983ರಿಂದ ಸತತ ಆರು ಎಲೆಕ್ಷನ್ ಗೆದ್ದಿರೋ ದೇಶಪಾಂಡೆಗೆ ಇಲ್ಲಿ ಸೋಲಿನ ರುಚಿ ತೋರಿಸೋರು ಯಾರು ಇಲ್ಲ ಅನ್ನೋ ಪರಿಸ್ಥಿತಿ ಇತ್ತು. ಆದ್ರೆ, 2008ರಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸುನಿಲ್ ಹೆಗಡೆ ದೇಶಪಾಂಡೆಯವ್ರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ರು. ಆದ್ರೆ, 2013ರಲ್ಲಿ ಮತ್ತೆ ದೇಶಪಾಂಡೆ ಗೆಲುವಿನ ನಗೆ ಬೀರಿದ್ರು. ಈಗ ಇಬ್ಬರೂ ಮತ್ತೆ ಮುಖಾಮುಖಿಯಾಗ್ತಿದ್ದಾರೆ. ಜೆಡಿಎಸ್ ನಿಂದ ಕೆ. ರಮೇಶ್ ಈ ಬಾರಿ ಕಣದಲ್ಲಿದ್ದಾರೆ.

ಶಿರಸಿಯಲ್ಲಿ ಯಾರ ಶಿರಕ್ಕೆ ಗೆಲುವಿನ ಮುಕುಟ..?
ಬಿಜೆಪಿಯಿಂದ ಶಿರಸಿಯನ್ನು ಹೇಗಾದ್ರೂ ಮಾಡಿ ಕಸಿಯಲೇಬೇಕು ಅನ್ನೋ ಪಣಕ್ಕೆ ಬಿದ್ದಿವೆ ಕಾಂಗ್ರೆಸ್ ಹಾಗೂ ಜೆಡಿಎಸ್. 1999ರಿಂದಲೂ ಇಲ್ಲಿ ಬಿಜೆಪಿಯದ್ದೇ ಅಬ್ಬರ. ವಿಶ್ವೇಶ್ವರ ಹೆಗಡೆ ಕಾಗೇರಿ ಇಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ. ದಿ.ರಾಮಕೃಷ್ಣ ಹೆಗಡೆ ಕುಟುಂಬದ ಶಶಿಭೂಷಣ ಹೆಗಡೆ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದು ಕದನ ಕಣ ಕುತೂಹಲ ಮೂಡಿಸಿದೆ. ಹೀಗಾಗಿ, ಶಿರಸಿ ಹವ್ಯಕರ ಮತ ಬ್ಯಾಂಕ್ ಒಡೆದು ಹೋಗುವ ಸಾಧ್ಯತೆ ದಟ್ಟವಾಗಿದೆ. ದಿ.ಎಸ್ ಬಂಗಾರಪ್ಪ ಅವ್ರ ದೂರದ ಸಂಬಂಧಿ ಭೀಮಣ್ಣ ನಾಯ್ಕ್ ಕೂಡಾ ಕಣದಲ್ಲಿದ್ದು ಈ ಬಾರಿ ಘಟಾನುಘಟಿ ನಾಯಕ್ರ ಸಂಬಂಧಿಕರದ್ದೇ ಚರ್ಚೆ ಶಿರಸಿಯಲ್ಲಿ ಜೋರಾಗಿದೆ.

ಯಲ್ಲಾಪುರದ ಅರಸ ಯಾರಾಗ್ತಾರೆ..?
ಯಲ್ಲಾಪುರದ ಜನರಿಗೆ ಬಿಜೆಪಿ ಫೆವರೇಟ್ ಅನ್ನೋದು ಸದ್ಯಕ್ಕಿರೋ ಟ್ರೆಂಡ್. ಯಾಕಂದ್ರೆ ಇಲ್ಲಿ ಜನಪ್ರತಿನಿಧಿಗಳು ಯಾರಾಗ್ಬೇಕು ಅನ್ನೋದನ್ನ ನಿರ್ಧರಿಸೋರೇ ಹವ್ಯಕ ಬ್ರಾಹ್ಮಣ, ಲಿಂಗಾಯತ ಹಾಗೂ ನಾಮಧಾರಿಗಳು. ಆದ್ರೆ, 2013ರಲ್ಲಿ ಈ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಹೋಗಿತ್ತು. ಹಾಲಿ ಶಾಸ್ ಕಾಂಗ್ರೆಸ್ ನ ಶಿವರಾಮ ಹೆಬ್ಬಾರ್ ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ತೆನೆ ಹೊತ್ತಿದ್ದ ರವೀಂದ್ರನಾಥ್ ಈ ಬಾರಿ ಜೆಡಿಎಸ್ ನಿಂದ ಪೈಪೋಟಿ ಕೊಡೋಕೆ ನಿಂತಿದ್ದಾರೆ. ಇನ್ನು ಬಿಜೆಪಿಯಿಂದ ವಿಎಸ್ ಪಾಟೀಲ್ ರಣಕಣಕ್ಕೆ ಧುಮುಕಿದ್ದಾರೆ. ಆದ್ರೆ, ಮತದಾರ ಈ ಬಾರಿ ಯಾರಿಗೆ ಕೃಪಾಕಟಾಕ್ಷ ತೋರ್ತಾನೆ ಅನ್ನೋದಕ್ಕೆ ಮೇ 15ರವರೆಗೆ ಕಾಯ್ಲೇಬೇಕು.

TAGGED:2018 karnataka assembly election2018 ಕರ್ನಾಟಕ ವಿಧಾನಸಭೆ ಚುನಾವಣೆBanavasibhatkalabjpcongressHaliyalKarawaraKumataPublic TVSirsiUttara KannadaYakshaganaYellapurಉತ್ತರ ಕನ್ನಡಕಾಂಗ್ರೆಸ್ಕಾರವಾರಕುಮಟಾಜೆಡಿಎಸ್ಪಬ್ಲಿಕ್ ಟಿವಿಬನವಾಸಿಬಿಜೆಪಿಭಟ್ಕಳಯಕ್ಷಗಾನಯಲ್ಲಾಪುರಶಿರಸಿಹಳಿಯಾಳ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

GBA
Bengaluru City

ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು

Public TV
By Public TV
4 minutes ago
Mysuru Fire Accident Nursing College
Districts

ಮೈಸೂರು | ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಧಗಧಗ ಹೊತ್ತಿ ಉರಿದ ಕಟ್ಟಡ

Public TV
By Public TV
32 minutes ago
pratap simha siddaramaiah
Districts

ಸಿದ್ದರಾಮಯ್ಯಗೆ ತಾಖತ್ ಇದ್ರೆ ಮೈಸೂರು ಸಿಟಿಯಲ್ಲಿ ಸ್ಪರ್ಧೆ ಮಾಡೋಕೆ ಹೇಳಿ ನೋಡೋಣ: ಯತೀಂದ್ರಗೆ ಪ್ರತಾಪ್ ಸಿಂಹ ಸವಾಲ್‌

Public TV
By Public TV
38 minutes ago
Bengaluru Mahadevapura Child Death Protest
Bengaluru City

ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR

Public TV
By Public TV
45 minutes ago
Accident
Crime

ವ್ಯಾನ್‌ಗೆ ಬಸ್ ಡಿಕ್ಕಿ – ಐವರು ಸಾವು, 6 ಮಂದಿಗೆ ಗಾಯ

Public TV
By Public TV
1 hour ago
Chikkaballapura 3
Chikkaballapur

ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?