Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2019; ಮೋದಿ ಅಲೆಯಲ್ಲಿ ಮತ್ತೆ ಅರಳಿದ ಕಮಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | 2019; ಮೋದಿ ಅಲೆಯಲ್ಲಿ ಮತ್ತೆ ಅರಳಿದ ಕಮಲ

Election News

2019; ಮೋದಿ ಅಲೆಯಲ್ಲಿ ಮತ್ತೆ ಅರಳಿದ ಕಮಲ

Public TV
Last updated: May 21, 2024 12:27 pm
Public TV
Share
4 Min Read
Lok Sabha Elections 2019
SHARE

– ಸಿಎಂ ಪುತ್ರನ ವಿರುದ್ಧ ಗೆದ್ದು ಬೀಗಿದ್ದ ಸುಮಲತಾ
– ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡಗೆ ಸೋಲು

– ಪಬ್ಲಿಕ್‌ ಟಿವಿ
2019 ಮೋದಿ (Narendra Modi) ನೇತೃತ್ವದ ಸರ್ಕಾರಕ್ಕೆ ಅತ್ಯಂತ ಮಹತ್ವದ ವರ್ಷವಾಗಿತ್ತು. ದೇಶದಲ್ಲಿ ಮೋದಿ ಅಲೆ ಹೇಗಿತ್ತು ಎಂಬುದು 17ನೇ ಸಾರ್ವತ್ರಿಕ ಚುನಾವಣಾ ಫಲಿತಾಂಶದಿಂದ ತಿಳಿಯಿತು. ಚುನಾವಣೆಗೂ ಮೊದಲು ಮೋದಿ ನೇತೃತ್ವದ ಐದು ವರ್ಷಗಳ ಆಡಳಿತದ ಬಗ್ಗೆ ಹಲವಾರು ಟೀಕೆಗಳೂ ಕೇಳಿಬಂದಿದ್ದವು. ನೋಟು ರದ್ದತಿ, ತನಿಖಾ ಸಂಸ್ಥೆಗಳ ದುರ್ಬಳಕೆ, ಸರ್ವಾಧಿಕಾರ ಆಡಳಿತ ಆರೋಪಗಳು ಕೇಳಿಬಂದಿದ್ದವು. ಇದರ ನಡುವೆ ಸ್ವಚ್ಛಭಾರತ ಅಭಿಯಾನ, ಸಿಎಎ ಜಾರಿ ಭರವಸೆ, ಆಯುಷ್ಮಾನ್ ಭಾರತದಂತಹ ಕ್ರಮಗಳು ಬಿಜೆಪಿ ಕೈಹಿಡಿದವು. ಇದೆಲ್ಲದಕ್ಕಿಂತ ಮುಖ್ಯವಾಗಿ ಚುನಾವಣಾ ಹೊತ್ತಲ್ಲಿ ಆದ ಪುಲ್ವಾಮಾ ದಾಳಿ ದೇಶದ ರಾಜಕೀಯ ದಿಕ್ಕನ್ನೇ ಬದಲಿಸಿತು.

ಸ್ವಚ್ಛಭಾರತ
2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದರು. ಅವರ ಪ್ರಮುಖ ಯೋಜನೆಗಳಲ್ಲಿ ಸ್ವಚ್ಛಭಾರತ ಕೂಡ ಒಂದು. ಈ ಕಾರ್ಯಕ್ರಮದಡಿ ಭಾರತವು ಶೌಚ ಮುಕ್ತ ದೇಶವಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿತು. ಆದರೂ ಶೌಚಾಲಯ ಹೊಂದಿರುವ ಮನೆಗಳ ಪ್ರಮಾಣ ಶೇ.100 ಇಲ್ಲ. ಆದರೂ ಯೋಜನೆಯಿಂದಾಗಿ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಸಿಕ್ಕಿತು. ಇದನ್ನೂ ಓದಿ: 2014; ಪಾತಾಳಕ್ಕೆ ಕುಸಿದ ಕಾಂಗ್ರೆಸ್ – ದಿಲ್ಲಿ ಗದ್ದುಗೆಯೇರಿದ ನರೇಂದ್ರ ಮೋದಿ

pm modi during swachh bharat abhiyan

ನೋಟು ರದ್ದತಿ
2016 ರ ನವೆಂಬರ್ 8 ರಂದು ಮಧ್ಯರಾತ್ರಿಯಿಂದಲೇ ಜಾರಿಯಾಗುವಂತೆ 500 ರೂ. ಮತ್ತು 1000 ರೂ. ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಪ್ರಧಾನಿ ಮೋದಿ ಆದೇಶ ಹೊರಡಿಸಿದ್ದರು. ಹೆಚ್ಚು ಮುಖಬೆಲೆಯ ನೋಟುಗಳಿಂದ ದೇಶದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಜೊತೆಗೆ ಭಯೋತ್ಪಾದನೆ ನಿಗ್ರಹಕ್ಕೆ ಈ ಕ್ರಮ ಅಗತ್ಯ ಎಂದು ಕೇಂದ್ರ ಸರ್ಕಾರ ನೋಟು ರದ್ದತಿ ಕ್ರಮವನ್ನು ಸಮರ್ಥಿಸಿಕೊಂಡಿತ್ತು. ನೋಟು ರದ್ದತಿ ಕಾರಣದಿಂದಾಗಿ ಸುಮಾರು 100 ಜನ ತಮ್ಮ ಪ್ರಾಣ ಕಳೆದುಕೊಂಡರು. ಕೇಂದ್ರ ಕ್ರಮವನ್ನು ವಿಪಕ್ಷಗಳು ಟೀಕಿಸಿದ್ದವು. ಇದೊಂದು ಆರ್ಥಿಕ ನರಮೇಧ ಮತ್ತು ವ್ಯವಸ್ಥಿತ ಲೂಟಿ ಎಂದು ಕೇಂದ್ರ ಸರ್ಕಾರವನ್ನು ದೂರಿದ್ದವು.

ಒಂದು ದೇಶ ಒಂದು ತೆರಿಗೆ
2017 ರಲ್ಲಿ ಸರಕು ಮತ್ತು ಸೇವಾ ತೆರಿಗೆ-ಜಿಎಸ್‌ಟಿಯನ್ನು (GST) ಕೇಂದ್ರ ಸರ್ಕಾರ ಜಾರಿಗೆ ತಂದಿತು. ಒಂದು ದೇಶ ಒಂದು ತೆರಿಗೆ ಪರಿಕಲ್ಪನೆಯಲ್ಲಿ ಯೋಜನೆ ಜಾರಿಗೊಳಿಸಿತು. ಆದರೂ ಜಿಎಸ್‌ಟಿ ಜಾರಿಯಿಂದ ರಾಜ್ಯ ಸರ್ಕಾರಗಳು ನಷ್ಟ ಅನುಭವಿಸಿದವು. ಇದನ್ನು ಕೇಂದ್ರ ಸರ್ಕಾರವೇ ಭರಿಸುವುದಾಗಿ ಒಪ್ಪಿಕೊಂಡರೂ, ಪರಿಹಾರವನ್ನು ಪೂರ್ಣ ಪ್ರಮಾಣದಲ್ಲಿ ರಾಜ್ಯ ಸರ್ಕಾರಗಳಿಗೆ ನೀಡಿಲ್ಲ. ಇದನ್ನೂ ಓದಿ: 2009, 2014, 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? ಗೆದ್ದ ಕಲಿಗಳು ಯಾರು? – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌!

pulwama attack 5

ಪುಲ್ವಾಮಾ ದಾಳಿ
ಚುನಾವಣೆ ಇನ್ನೇನು ಹತ್ತಿರದಲ್ಲಿದೆ ಎನ್ನುವಾಗಲೇ ಜಮ್ಮುವಿನ ಪುಲ್ವಾಮಾದಲ್ಲಿ (Pulwama Attack) ಸಿಆರ್‌ಪಿಎಫ್ ಯೋಧರ ವಾಹನಗಳ ಮೇಲೆ ಉಗ್ರರ ದಾಳಿ ನಡೆಯಿತು. ಸಿಆರ್‌ಪಿಎಫ್‌ನ 40 ಯೋಧರು ದಾಳಿಯಲ್ಲಿ ಮೃತಪಟ್ಟರು. ಪುಲ್ವಾಮಾ ದಾಳಿ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ತಾಣಗಳ ಮೇಲೆ ದಾಳಿ ನಡೆಸಿತು. ಬಾಲಾಕೋಟ್ ವೈಮಾನಿಕ ದಾಳಿ ಮತ್ತು ಸೇನಾ ಕಾರ್ಯಾಚರಣೆಗಳು ಹೆಚ್ಚು ಸದ್ದು ಮಾಡಿದವು. ನಂತರ ನಡೆದ ಚುನಾವಣೆಯಲ್ಲಿ ಮೋದಿ ಸರ್ಕಾರ ಅಭೂತಪೂರ್ವ ಜಯ ಸಾಧಿಸಿತು.

39 ದಿನ ಚುನಾವಣೆ
ಏ.11 ರಿಂದ ಮೇ 19 ರ ವರೆಗೆ ಚುನಾವಣೆ ನಡೆಯಿತು. ಒಟ್ಟು 543 ಕ್ಷೇತ್ರಗಳಿಗೆ 39 ದಿನ ಮತದಾನ ನಡೆಯಿತು.

ಒಟ್ಟು ಮತದಾರರು: 91.2 ಕೋಟಿ
ಮತ ಚಲಾಯಿಸಿದವರ ಸಂಖ್ಯೆ: 61,20,81,902
ಮತ ಪ್ರಮಾಣ: 69.05%

ರಾಜ್ಯಗಳು: 36

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಬಿಜೆಪಿ – 303
ಕಾಂಗ್ರೆಸ್ – 52
ಡಿಎಂಕೆ – 23
ಎಐಟಿಸಿ – 22
ವೈಎಸ್‌ಆರ್‌ಸಿಪಿ – 22
ಪಕ್ಷೇತರ – 4
ಇತರೆ – 116

narendra modi

ಮತ್ತೆ ಗೆದ್ದ ಮೋದಿ
ಚುನಾವಣೆಯಲ್ಲಿ ಬಿಜೆಪಿ 37.36% ಮತಗಳನ್ನು ಪಡೆಯಿತು. ಇದು 1989 ರ ಸಾರ್ವತ್ರಿಕ ಚುನಾವಣೆಯ ನಂತರ ರಾಜಕೀಯ ಪಕ್ಷವೊಂದು ಪಡೆದ ಅತ್ಯಧಿಕ ಮತ ಪ್ರಮಾಣವಾಗಿದೆ. 303 ಸ್ಥಾನಗಳನ್ನು ಗೆದ್ದ ಬಿಜೆಪಿ ಕಳೆದ ಚುನಾವಣೆಗಿಂತ ಬಹುಮತವನ್ನು ಹೆಚ್ಚಿಸಿಕೊಂಡಿತು. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 353 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತು. ವಿರೋಧ ಪಕ್ಷವಾಗಲು ಬೇಕಾದ ಸ್ಥಾನಗಳನ್ನು ಪಡೆಯುವಲ್ಲೂ ವಿಫಲವಾಯಿತು. ಇದರ ಜೊತೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಯನ್ಸ್ (ಯುಪಿಎ) 91 ಸ್ಥಾನಗಳನ್ನು ಗೆದ್ದಿತು.

ಕರ್ನಾಟಕದಲ್ಲಿ ಏನಾಗಿತ್ತು?
ಬಿಜೆಪಿ – 25
ಕಾಂಗ್ರೆಸ್ – 1
ಜೆಡಿಎಸ್ – 1
ಪಕ್ಷೇತರ – 1

sumalatha

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೊಡೆತ
ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಲೋಕಸಭಾ ಚುನಾವಣೆಯಲ್ಲಿ (2019 Lok Sabha Elections) ಬಿಜೆಪಿ ವಿರುದ್ಧ ಮೈತ್ರಿ ಪಕ್ಷಗಳು ಸ್ಪರ್ಧೆ ಮಾಡಿದ್ದವು. ಆದರೆ ಮೋದಿ ಅಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹೀನಾಯ ಸ್ಥಿತಿ ತಲುಪಿದವು. ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಮೈತ್ರಿ ಪಕ್ಷಗಳು ತಲಾ 1 ಸ್ಥಾನಗಳನ್ನು ಮಾತ್ರ ಗೆದ್ದವು. ಇದನ್ನೂ ಓದಿ: 1999: ಮತ್ತೆ ಪ್ರಧಾನಿಯಾದ ‘ಅಜಾತಶತ್ರು’ – 5 ವರ್ಷ ಪೂರ್ಣ ಆಡಳಿತ ನಡೆಸಿದ ಮೊದಲ ಬಿಜೆಪಿ ನಾಯಕ

h.d.devegowda

ಗೆದ್ದು ಬೀಗಿದ ಮಂಡ್ಯ ಸೊಸೆ
2019 ರ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದ ಗಮನ ಸೆಳೆದ ಕ್ಷೇತ್ರ ಮಂಡ್ಯ. ನಟ ಅಂಬರೀಶ್‌ ನಿಧನದ ಬಳಿಕ ಆಪ್ತರ ಸಲಹೆಯಂತೆ ಅನಿರೀಕ್ಷಿತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಚುನಾವಣಾ ಕಣಕ್ಕಿಳಿದರು. ರಾಜಕೀಯವಾಗಿ ಅನುಭವ ಇಲ್ಲದ ಸುಮಲತಾ ಅವರು ಗೆಲ್ಲುತ್ತಾರೆಯೇ ಎಂಬ ಪ್ರಶ್ನೆ ಮೂಡಿತ್ತು. ಇತ್ತ ಮೈತ್ರಿ ಅಭ್ಯರ್ಥಿಯಾಗಿ ಆಗಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡ್ಯದಲ್ಲಿ ತನ್ನ ಅಭ್ಯರ್ಥಿಯನ್ನು ಹಾಕಲಿಲ್ಲ. ಸುಮಲತಾ ಅವರಿಗೆ ಬೆಂಬಲ ಘೋಷಿಸಿತು. ಜಿದ್ದಾಜಿದ್ದಿನ ಕಣದಲ್ಲಿ ಸುಮಲತಾ ಗೆದ್ದು ಬೀಗಿದರು. ಈ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದ ಏಕೈಕ ಅಭ್ಯರ್ಥಿಯಾದರು.

ಮಾಜಿ ಪ್ರಧಾನಿಗೆ ಸೋಲು
ಹಲವು ವರ್ಷಗಳ ಬಳಿಕ ಕಾರ್ಯಕರ್ತರ ಒತ್ತಾಯದ ಮೇರೆಗೆ ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೋಲಿನ ರುಚಿ ಕಂಡರು. ಅವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ಗೆದ್ದು ಬೀಗಿದರು. ಮಾಜಿ ಪ್ರಧಾನಿ ಸ್ಪರ್ಧೆ ಕಾರಣಕ್ಕೆ ಈ ಕ್ಷೇತ್ರವೂ ಗಮನ ಸೆಳೆದಿತ್ತು.

TAGGED:2019 Lok Sabha elections2019 ಲೋಕಸಭಾ ಚುನಾವಣೆbjpcongressLok Sabha elections 2024narendra modiRahul Gandhiಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
48 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
49 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?