Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು

Public TV
Last updated: February 3, 2022 1:03 pm
Public TV
Share
3 Min Read
india china ladakh border conflict
SHARE

– ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು
– ರಾತ್ರಿ ವೇಳೆ ಗಲ್ವಾನ್‌ ನದಿಗೆ ಬಿದ್ದು ಸಾವು

ನವದೆಹಲಿ: ಗಲ್ವಾನ್‌ ಕಣಿವೆಯಲ್ಲಿ ಭಾರತದೊಂದಿಗಿನ ಘರ್ಷಣೆಯ ವೇಳೆ ಚೀನಾ ಕಡೆಯಲ್ಲಿ ಭಾರೀ ಪ್ರಮಾಣದ ಸಾವು ನೋವು ಸಂಭವಿಸಿದೆ ಎಂದು ಆಸ್ಟ್ರೇಲಿಯಾದ ಪತ್ರಿಕೆಯೊಂದು ತನಿಖಾ ವರದಿ ಮಾಡಿದೆ.

ಚೀನಾದಲ್ಲಿನ ಮೂಲಗಳನ್ನು ಆಧಾರಿಸಿ ಆಸ್ಟ್ರೇಲಿಯಾದ ದಿ ಕ್ಲಾಕ್ಸನ್‌ನ ಪತ್ರಿಕೆ, 2020ರ ಜೂನ್ 15-16 ರ ಘರ್ಷಣೆಯ ಆರಂಭದ ಸಮಯದಲ್ಲಿ ಭಾರತೀಯ ಸೇನೆಯಿಂದ ಪಾರಾಗಲು ಗಾಲ್ವಾನ್ ನದಿಯನ್ನು ರಾತ್ರಿ ದಾಟುವ ವೇಳೆ ಕನಿಷ್ಠ 38 ಚೀನಿ ಸೈನಿಕರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರಕಟಿಸಿದೆ.

LADAKH INDIAN CHINA

ಚೀನಾ ಬ್ಲಾಗರ್‌ಗಳು, ಚೀನಿ ನಾಗರಿಕರಿಂದ ಪಡೆದ ಮಾಹಿತಿಯನ್ನು ಆಧರಿಸಿ ಈ ಸುದ್ದಿ ಪ್ರಕಟಿಸಲಾಗಿದೆ. ಭದ್ರತಾ ಕಾರಣದಿಂದ ಚೀನಿ ಮೂಲಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಪತ್ರಿಕೆ ಹೇಳಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ – ಕಂಪನಿಗಳಿಗೆ ಬಿಸಿ ಮುಟ್ಟಿಸಿದ ಕೇಂದ್ರ

ಘರ್ಷಣೆಯಲ್ಲಿ ಮಡಿದ ತನ್ನ ನಾಲ್ಕು ಸೈನಿಕರಿಗೆ ಫೆಬ್ರವರಿ 2021 ರಲ್ಲಿ ಚೀನಾ ಪದಕಗಳನ್ನು ಘೋಷಿಸಿತ್ತು. ಈ ಮೂಲಕ ಘಟನೆಯಲ್ಲಿ ನಮ್ಮ ಕಡೆಯಲ್ಲೂ ಸಾವು ನೋವು ಸಂಭವಿಸಿದೆ ಎನ್ನುವುದನ್ನು ಮೊದಲ ಬಾರಿಗೆ ಖಚಿತ ಪಡಿಸಿತ್ತು. ಹೀಗಿದ್ದರೂ ಅಧಿಕೃತವಾಗಿ ಚೀನಾ ವರದಿ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸಿದೆ ಎಂದು ವರದಿ ಹೇಳಿದೆ.

Ladakh road Galwan

ಅಂದು ಏನಾಯ್ತು?
ವರದಿಯ ಪ್ರಕಾರ ಭಾರತೀಯ ಸೈನಿಕರು ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯ ಎಲ್‌ಎಸಿ(ವಾಸ್ತವಿಕ ಗಡಿ ರೇಖೆ) ಜಾಗಕ್ಕೆ ತೆರಳಿ ಚೀನಾ ಅಕ್ರಮವಾಗಿ ನಿರ್ಮಿಸಿದ್ದ ಟೆಂಟ್‌ ಕಿತ್ತು ಎಸೆದಿದ್ದಾರೆ. ಈ ವೇಳೆ ಚೀನಾದ ಕರ್ನಲ್ ಕಿ ಫಾಬಾವೊ ಮತ್ತು 150 ಚೀನೀ ಸೈನಿಕರು ಭಾರತೀಯ ಸೈನಿಕರೊಂದಿಗೆ ಸಮಸ್ಯೆಯನ್ನು ಚರ್ಚಿಸುವ ಬದಲು ಘರ್ಷಣೆಗೆ ಇಳಿದಿದ್ದಾರೆ. ಇದನ್ನೂ ಓದಿ: ಗಲ್ವಾನ್ ಘರ್ಷಣೆಯಲ್ಲಿ ಐವರು ಬಲಿ – ಕೊನೆಗೂ ಸತ್ಯ ಒಪ್ಪಿಕೊಂಡ ಚೀನಾ

ಕರ್ನಲ್ ಫಾಬಾವೊ ದಾಳಿ ಮಾಡಿದ ಕೂಡಲೇ ಭಾರತೀಯ ಸೈನಿಕರು ಪಿಎಲ್‌ಎ ಯೋಧರನ್ನು ಮುತ್ತಿಗೆ ಹಾಕಿದ್ದಾರೆ. ಅನಿರೀಕ್ಷಿತ ಬೆಳವಣಿಗೆ ಕಂಡು ಬೆಟಾಲಿಯನ್ ಕಮಾಂಡರ್ ಚೆನ್ ಹಾಂಗ್‌ಜುನ್ ಮತ್ತು ಸೈನಿಕ ಚೆನ್ ಕ್ಸಿಯಾಂಗ್ರಾನ್ ಉಕ್ಕಿನ ಪೈಪ್‌ಗಳು, ಸ್ಟಿಕ್‌ಗಳು ಮತ್ತು ಕಲ್ಲುಗಳನ್ನು ಬಳಸಿ ಭಾರತೀಯ ಸೈನಿಕರೊಂದಿಗೆ ಘರ್ಷಣೆ ನಡೆಸಿದ್ದಾರೆ. ಭಾರತದ ಪ್ರತಿದಾಳಿಗೆ ಮೂವರು ಪಿಎಲ್‌ಎ ಸೈನಿಕರು ಮೃತಪಟ್ಟಿದ್ದನ್ನು ನೋಡಿ ಚೀನಿ ಸೈನಿಕರು ಭಯಗೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ.

India China 1

ಈ ಸಂದರ್ಭದಲ್ಲಿ ಪಿಎಲ್‌ಎ ಸೈನಿಕರಿಗೆ ವಾಟರ್‌ ಪ್ಯಾಂಟ್‌ ಧರಿಸಲು ಸಮಯವಿರಲಿಲ್ಲ. ಸೈನಿಕ ವಾಂಗ್‌ ನೇತೃತ್ವದಲ್ಲಿ ರಾತ್ರಿಯೇ ನದಿಯ ಹಿಮಾವೃತ ನೀರನ್ನು ದಾಟಲು ಪಿಎಲ್‌ಎ ಯೋಧರು ನಿರ್ಧರಿಸಿದ್ದಾರೆ. ಈ ವೇಳೆ ನದಿಯ ನೀರಿನ ಮಟ್ಟ ಏರಿತ್ತು. ಹೀಗಾಗಿ ಕೆಲವರು ದಾಟುವ ವೇಳೆ ನೀರಿನಲ್ಲಿ ಕೊಚ್ಚಿಹೋಗಿದ್ದರೆ ಕೆಲವರು ಮೇಲಿನಿಂದ ನದಿಗೆ ಬಿದ್ದು ಮೃತಪಟ್ಟಿದ್ದಾರೆ.

ಆ ರಾತ್ರಿ ವಾಂಗ್ ಜೊತೆಗೆ ಕನಿಷ್ಠ 38 ಚೀನೀ ಸೈನಿಕರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಸಾಮಾಜಿಕ ಜಾಲತಾಣ ಖಾತೆ ವೈಬೋದಲ್ಲಿ ಹಲವು ಮಂದಿ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

india china army

ನಿಜವಾಗಿ ಏನಾಯಿತು? ಚಕಮಕಿಗೆ ಕಾರಣವೇನು ಎಂಬುದರ ಕುರಿತು ಬಹಳಷ್ಟು ಸಂಗತಿಗಳನ್ನು ಬೀಜಿಂಗ್ ಮರೆಮಾಡಿದೆ. ಅಷ್ಟೇ ಅಲ್ಲದೇ ಚೀನಾ ಹಲವು ಕಟ್ಟು ಕಥೆಗಳನ್ನು ಪ್ರಕಟಿಸಿದೆ ಎಂದು ಪತ್ರಿಕೆ ಹೇಳಿದೆ.

2020ರ ಜೂನ್‌ 16ರಂದೇ ಗ್ಲೋಬಲ್‌ ಟೈಮ್ಸ್‌ ಸಂಪಾದಕ ಹು ಕ್ಸಿಜಿನ್‌ ಚೀನಿ ಸೈನಿಕರು ಮೃತಪಟ್ಟ ವಿಚಾರವನ್ನು ದೃಢಪಡಿಸಿದ್ದರು. ನನಗೆ ತಿಳಿದ ಮಾಹಿತಿ ಪ್ರಕಾರ ಗಲ್ವಾನ್‌ ಕಣಿವೆಯಲ್ಲಿ ಘರ್ಷಣೆಯಲ್ಲಿ ಚೀನಾದ ಸೈನಿಕರು ಮೃತಪಟ್ಟಿದ್ದಾರೆ. ಹೀಗಾಗಿ ನಾನು ಭಾರತಕ್ಕೆ ಒಂದು ವಿಚಾರ ಹೇಳಲು ಇಚ್ಛಿಸುತ್ತೇನೆ. ಚೀನಾದ ಸಹನೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಭಾರತದ ಜೊತೆ ಘರ್ಷಣೆ ನಡೆಸಲು ಚೀನಾ ಬಯಸುತ್ತಿಲ್ಲ. ಆದರೆ ನಾವು ಯಾರಿಗೂ ಭಯ ಪಡುವುದಿಲ್ಲ ಎಂದು ಟ್ವೀಟ್‌ ಮಾಡಿದ್ದರು.

Based on what I know, Chinese side also suffered casualties in the Galwan Valley physical clash. I want to tell the Indian side, don’t be arrogant and misread China’s restraint as being weak. China doesn’t want to have a clash with India, but we don’t fear it.

— Hu Xijin 胡锡进 (@HuXijin_GT) June 16, 2020

ಲಡಾಖ್‌ ಗಡಿಯಲ್ಲಿ ಜೂನ್‌ 15 ರಂದು ನಡೆದ ಗರ್ಷಣೆಯಲ್ಲಿ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತ ಹೇಳಿತ್ತು. ಈ ವೇಳೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ ಸೇನೆ ಚೀನಾ ಕಡೆಯಲ್ಲೂ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ ಎಂದು ತಿಳಿಸಿತ್ತು. ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ಚೀನಾ ಅಧಿಕೃತವಾಗಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಸುದ್ದಿಯನ್ನು ಇಲ್ಲಿಯವರೆಗೆ ತಿಳಿಸಿಲ್ಲ.

TAGGED:chinaGalwan Clashindiaindian armyPLAಗಲ್ವಾನ್‌ ಘರ್ಷಣೆಚೀನಾಭಾರತಭಾರತೀಯ ಸೇನೆಲಡಾಖ್
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
4 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
8 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
8 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
13 hours ago

You Might Also Like

Virat Kohli joins in the celebration as Josh Hazlewood
Cricket

IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

Public TV
By Public TV
2 hours ago
King Kohli Anushka Sharma RCB IPL Entry
Cricket

ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

Public TV
By Public TV
2 hours ago
virat kohli 7
Cricket

‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

Public TV
By Public TV
2 hours ago
Vijaya Mallya
Cricket

ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

Public TV
By Public TV
2 hours ago
RCB Team
Cricket

IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

Public TV
By Public TV
3 hours ago
IPL 2025 RCB
Cricket

ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?