Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2022ರಿಂದ 3 ದಿನ ‘ಬೆಂಗಳೂರು ಹಬ್ಬ’ವಾಗಿ ಕೆಂಪೇಗೌಡ ಜಯಂತಿ ಆಚರಣೆ: ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2022ರಿಂದ 3 ದಿನ ‘ಬೆಂಗಳೂರು ಹಬ್ಬ’ವಾಗಿ ಕೆಂಪೇಗೌಡ ಜಯಂತಿ ಆಚರಣೆ: ಡಿಸಿಎಂ

Bengaluru City

2022ರಿಂದ 3 ದಿನ ‘ಬೆಂಗಳೂರು ಹಬ್ಬ’ವಾಗಿ ಕೆಂಪೇಗೌಡ ಜಯಂತಿ ಆಚರಣೆ: ಡಿಸಿಎಂ

Public TV
Last updated: June 27, 2021 3:57 pm
Public TV
Share
3 Min Read
Ashwath narayan 7
SHARE

ಬೆಂಗಳೂರು: ಮುಂದಿನ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮೂರು ದಿನಗಳ ಕಾಲ ‘ಬೆಂಗಳೂರು ಹಬ್ಬ’ವನ್ನಾಗಿ ಆಚರಿಸಲಾಗುವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಜಯಂತಿ ಆಚರಣೆಯಲ್ಲಿ ಅಂಚೆ ಲಕೋಟೆ ಲೋಕಾರ್ಪಣೆ ಹಾಗೂ ಅಧ್ಯಯನ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿ ವರ್ಷ ಜೂನ್ 27ರಂದು ನಾಡಪ್ರಭುಗಳ ಜಯಂತಿಯನ್ನು ಆಚರಿಸಲಾಗುತ್ತದೆ. ಜೂನ್ 26, 27 ಮತ್ತು 28ರಂದು, ಅಂದರೆ 3 ದಿನಗಳ ಕಾಲ ಅವರ ಜಯಂತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ದ ಹೆಸರಿನಲ್ಲಿ ಆಚರಿಸಲಾಗುವುದು. ಆ ಮೂರೂ ದಿನಗಳ ಕಾಲ ಬೆಂಗಳೂರು ನಗರದಲ್ಲಿನ ಎಲ್ಲ ಪಾರಂಪರಿಕ ತಾಣ, ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ವಿಶ್ವವಿಖ್ಯಾತ ಹಬ್ಬದ ಮಾದರಿಯಲ್ಲಿ ಆಚರಿಸಲಾಗುವುದು ಎಂದು ಡಿಸಿಎಂ ಹೇಳಿದರು.

Ashwath narayan 3 1 medium

ಮುಂದಿನ ವರ್ಷ ಲೋಕಾರ್ಪಣೆ
ಬೆಂಗಳೂರು ಆಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದಿನ 23 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಪಾರ್ಕ್ ನಡುವೆ ಸ್ಥಾಪನೆಯಾಗುತ್ತಿರುವ 108 ಎಡಿ ಎತ್ತರದ ಲೋಹ ಪ್ರತಿಮೆ ಲೋಕಾರ್ಪಣೆ ಮುಂದಿನ ವರ್ಷದ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಪ್ರಕಟಿಸಿದರು.

ಈ ವರ್ಷದ ಜಯಂತಿ ದಿನವೇ ಪ್ರತಿಮೆ ಲೋಕಾರ್ಪಣೆ ಆಗಬೇಕಿತ್ತು. ಕೋವಿಡ್ ಕಾರಣದಿಂದ ತಡವಾಯಿತು. ಈಗಾಗಲೇ ನೋಯಿಡಾದಲ್ಲಿ ಪ್ರತಿಮೆ ಭರದಿಂದ ತಯಾರಾಗುತ್ತಿದೆ. ಏರ್‍ಪೋರ್ಟ್ ನಲ್ಲೂ ಕಾಮಗಾರಿ ಪುನಾ ಆರಂಭವಾಗಿದೆ. ಈ ಯೋಜನೆ ಕಾರ್ಯಗತವಾದ ಮೇಲೆ ಅದು ಬೆಂಗಳೂರಿನ ದೊಡ್ಡ ಹೆಗ್ಗುರುತಾಗಿ ಕಾಣಲಿದೆ ಎಂದು ಅವರು ವಿವರಿಸಿದರು.

Ashwath narayan 1 2 medium

ಕೆಂಪೇಗೌಡ ಪ್ರವಾಸೋದ್ಯಮ ಸರ್ಕ್ಯೂಟ್
ಬೃಹತ್ತಾಗಿ ಬೆಂಗಳೂರು ನಗರದ ಸುತ್ತಮುತ್ತ ಈಗಲೂ 15,000 ಹೆಕ್ಟೇರ್ ದಟ್ಟ ಅರಣ್ಯವಿದೆ. ಅದರ ಜತೆಗೆ ರಾಜಧಾನಿಯ ಸುತ್ತಮುತ್ತಲಿನಲ್ಲಿ ಕೆಂಪೇಗೌಡರಿಗೆ ಸಂಬಂಧಿಸಿದ 46 ಪಾರಂಪರಿಕ ತಾಣಗಳಿವೆ. ಇವೆಲ್ಲವನ್ನೂ ಅನುಸಂಧಾನಗೊಳಿಸಿ ಒಂದು ಬೃಹತ್ತಾದ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಮಾಡಲು ಉದ್ದೇಶಿಸಲಾಗಿದೆ. ಈ ಮೂಲಕ ಕೆಂಪೇಗೌಡರ ಬಗ್ಗೆ ಇಡೀ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇನ್ನೆರಡು ವರ್ಷದೊಳಗೆ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಉಳಿದಂತೆ ಕೆಂಪೇಗೌಡರು ಐಕ್ಯರಾಗಿರುವ, ಅವರ ವೀರ ಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದು ಭೂಸ್ವಾಧೀನ ನಡೆಯುತ್ತಿದೆ. ಮುಂದಿನ ವರ್ಷದ ಜಯಂತಿ ಕಾರ್ಯಕ್ರಮವನ್ನು ನಾಡಪ್ರಭುಗಳ ವೀರ ಸಮಾಧಿ ಮುಂದೆ ಆಚರಿಸುವ ಸಂಕಲ್ಪ ಸರ್ಕಾರದ್ದಾಗಿದೆ ಎಂದು ಅವರು ನುಡಿದರು.

Ashwath narayan 2 1 medium

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜ್ಞಾನಭಾರತಿಯಲ್ಲಿ ನಿರ್ಮಾಣ ಆಗುತ್ತಿರುವ ಕೆಂಪೇಗೌಡ ಅಧ್ಯಯನ ಕೇಂದ್ರದ ನಿರ್ಮಾಣ ಕಾಮಗಾರಿಗೆ ವರ್ಚುಯಲ್ ಮೂಲಕ ಚಾಲನೆ ನೀಡಿ, ನಾಡಪ್ರಭುಗಳ ಅಂಚೆ ಲಕೋಟೆಯನ್ನು ಲೋಕಾರ್ಪಣೆ ಮಾಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಡೆಯುತ್ತಿರುವ ಸೆಂಟ್ರಲ್ ಪಾರ್ಕ್-ಕೆಂಪೇಗೌಡ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಗತಿಯ ವಿಡಿಯೋ ಹಾಗೂ ಅಧ್ಯಯನ ಕೇಂದ್ರದ ಪ್ರಾತ್ಯಕ್ಷಿಕೆಯನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. ಇದನ್ನೂ ಓದಿ: ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ: ಡಿಸಿಎಂ

ಆದಿಚುಂನಗಿರಿ ಮಠದ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಬ್ರಹ್ಮಗುಂಡ ಸ್ಫಟಿಕಪುರಿ ಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಇದನ್ನೂ ಓದಿ: ಬಿಜೆಪಿಯವರು ಕಾಂಗ್ರೆಸ್‍ಗೆ ಸಪೋರ್ಟ್ ಮಾಡ್ತೀವಿ ಸಿಎಂ ಆಗಿ ಎಂದಿದ್ದಾರೆ: ಎಸ್.ಎಸ್ ಮಲ್ಲಿಕಾರ್ಜುನ್

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯ ಸ್ಥಾಪನೆ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ. ಮುಂದಿನ ವರ್ಷ ಲೋಕಾರ್ಪಣೆಗೊಳ್ಳಲಿದೆ.

ಬೆಂಗಳೂರನ್ನು ಸಾಂಸ್ಕೃತಿಕ ನಗರವಾಗಿ ಪರಿವರ್ತಿಸುವ ಗುರಿ ಹೊಂದಿದ್ದೇವೆ.

ಕೆಂಪೇಗೌಡರ ಜಯಂತಿ ಸಂದರ್ಭದಲ್ಲಿ 3 ದಿನಗಳ ಮಟ್ಟಿಗೆ ಬೆಂಗಳೂರು ಉತ್ಸವ ಆಚರಿಸಲು ಚಿಂತಿಸಲಾಗಿದೆ.

2/2 pic.twitter.com/gQ0ZE79Naw

— Dr. C.N. Ashwath Narayan (@drashwathcn) June 27, 2021

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಸಿ.ನಾರಾಯಣ ಗೌಡ, ಗೋಪಾಲಯ್ಯ, ಶಾಸಕರಾದ ಎಸ್.ಆರ್.ವಿಶ್ವನಾಥ್, ಮಂಜುನಾಥ್, ರಿಜ್ವಾನ್ ಅರ್ಷದ್, ವೈ.ಎ.ನಾರಾಯಣ ಸ್ವಾಮಿ, ಸಂಸದ ಪಿ.ಸಿ.ಮೋಹನ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾಗಡಿಯ ಕೃಷ್ಣಮೂರ್ತಿ ಅವರು ಇದೇ ಸಂದರ್ಭದಲ್ಲಿ ಕೆಂಪಾಪುರದಿಂದ ತಂದ ಆತ್ಮಜ್ಯೋತಿಯನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರ ಮಾಡಿದರು.

TAGGED:Bengaluru HabbaDCM Ashwaththa NarayanaKempegowda JayantiPublic TVಕೆಂಪೇಗೌಡ ಜಯಂತಿಡಿಸಿಎಂ ಅಶ್ವತ್ಥ ನಾರಾಯಾಣಪಬ್ಲಿಕ್ ಟಿವಿಬೆಂಗಳೂರು ಹಬ್ಬ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
3 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
4 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 hours ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
5 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?