Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2025ಕ್ಕೆ ಬೆಂಗಳೂರು ಜಿಲ್ಲೆ ಕ್ಷಯರೋಗ ಮುಕ್ತವಾಗಬೇಕು: ಜೆ ಮಂಜುನಾಥ್

Public TV
Last updated: March 24, 2021 3:36 pm
Public TV
Share
3 Min Read
BNG MANJUNATH
SHARE

ಬೆಂಗಳೂರು: ಜಿಲ್ಲೆಯನ್ನು 2025ರ ವೇಳೆಗೆ ಕ್ಷಯ ರೋಗ ಮುಕ್ತ ಜಿಲ್ಲೆಯಾಗಿಸುವುದು ನಮ್ಮ, ನಿಮ್ಮೆಲ್ಲರ ಮುಖ್ಯ ಗುರಿಯಾಗಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

BNG MANJUNATH 2 medium

ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಬೆಂಗಳೂರು ಪೂರ್ವ ತಾಲೂಕಿನ ಕಣ್ಣೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆ.ಮಂಜುನಾಥ್, ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಂಡಿದ್ದು ಇದರ ಮೂಲ ಉದ್ದೇಶ ಕ್ಷಯ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ ಈ ರೋಗದ ಬಗ್ಗೆ ಜನರಿಗೆ ಮಾಹಿತಿ ಕೊಡುವುದರ ಜೊತೆಗೆ ವಾಸ್ತವದ ಸ್ಥಿತಿಗತಿಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತಹ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.

BENGALURU 1

ಪ್ರಪಂಚದ ರೋಗಿಗಳಲ್ಲಿ ಕಾಲು ಭಾಗದಷ್ಟು ರೋಗಿಗಳು ಭಾರತದ ದೇಶದಲ್ಲಿ ಕಂಡುಬರುತ್ತಾರೆ. 2020 ರ ಟಿಬಿ ವರದಿ ಪ್ರಕಾರ ಭಾರತದಲ್ಲಿ 24.04 ಲಕ್ಷ ರೋಗಿಗಳು ನಿಕ್ಷಯ್ ನಲ್ಲಿ ನೋಂದಣಿ ಆಗಿದ್ದಾರೆ. ದೇಶದಲ್ಲಿ ಶೇಕಡಾ 40 ರಷ್ಟು ಜನರಲ್ಲಿ ಈ ರೋಗಾಣುಗಳಿರುತ್ತವೆ ಎಂದು ಅಂದಾಜಿಸಲಾಗಿದ್ದು, ಪ್ರತಿ ಐದು ನಿಮಷಕ್ಕೆ ಇಬ್ಬರು ಕ್ಷಯ ರೋಗದಿಂದ ಮರಣ ಹೊಂದುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಕ್ಷಯರೋಗ ಪತ್ತೆ ಪ್ರಮಾಣವು ನಮ್ಮ ನಗರ ಜಿಲ್ಲೆಯಲ್ಲಿ ಒಂದು ಲಕ್ಷ ಜನ ಸಂಖ್ಯೆಗೆ 136 ಸರಾಸರಿ ಇದೆ. ಕ್ಷಯ ರೋಗ ಗುಣಪಡಿಸುವಲ್ಲಿ ಶೇ.100 ರಷ್ಟು ಸಾಧನೆಯಾಗಬೇಕು, ಒಂದು ಲಕ್ಷ ಜನ ಸಂಖ್ಯೆಗೆ 10 ಕೇಸ್‍ಗಿಂತ ಕಡಿಮೆ ಪ್ರಮಾಣದಲ್ಲಿ ರೋಗ ಪತ್ತೆಯಾಗುವಂತೆ ಕ್ರಮವಹಿಸಲು ಎಲ್ಲರೂ ಶ್ರಮಿಸಬೇಕಿದೆ. ಅಲ್ಲದೇ, ಈ ರೋಗದಿಂದ ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸುವ ಅಗತ್ಯವಿದೆ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ರಾತ್ರಿ ವೇಳೆಯಲ್ಲಿ ಜ್ವರ, ಬೆವರುವುದು, ಕಫದಲ್ಲಿ ರಕ್ತ, ತೂಕ ಇಳಿಕೆ, ಹಸಿವಾಗದಿರುವುದು ಇಂತಹ ಯಾವುದೇ ಲಕ್ಷಣಗಳು ಕಂಡುಬಂದರೂ, ಸಾರ್ವಜನಿಕರು ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಜಿಲ್ಲೆಯು 2025 ರೊಳಗೆ ಕ್ಷಯ ರೋಗ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದ್ದು, ನಮ್ಮ ಮುಂದೆ ದೊಡ್ಡ ಸವಾಲು ಇದೆ. ಈಗಾಗಲೇ, ಬೆಂಗಳೂರು ನಗರ ಜಿಲ್ಲೆಯಲ್ಲಿ 343 ಜನರು ಕ್ಷಯರೋಗದಿಂದ ಬಳಲುತ್ತಿದ್ದಾರೆ ಎಂದು ಗುರುತಿಸಲಾಗಿದ್ದು. ಇಂತವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿ ರೋಗವನ್ನು ಗುಣಪಡಿಸುವುದಲ್ಲದೇ ರೋಗ ಬರುವುದನ್ನು ತಡೆಗಟ್ಟಲೂ ಸಹ ಸಾಧ್ಯವಿದೆ. ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆಗೆ ಹಲವಾರು ವ್ಯವಸ್ಥೆ ಇದ್ದು, ಜಿಲ್ಲಾ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ‘ಸಿಬಿನ್ಯಾಟ್’ ಯಂತ್ರಗಳು ಲಭ್ಯವಿದ್ದು, ಈಗಾಗಲೇ ಕ್ಷಯ ರೋಗಕ್ಕೆ ತುತ್ತಾಗಿರುವ ರೋಗಿಗಳಿಗೆ ಚಿಕಿತ್ಸೆ ಉಚಿತವಾಗಿದ್ದು, ಭಾರತ ಸರ್ಕಾರ ನಿಕ್ಷಯ ಪೋಷಣೆ ಯೋಜನೆಯಡಿಯಲ್ಲಿ ಕ್ಷಯ ರೋಗಕ್ಕೆ ತುತ್ತಾದವರಿಗೆ ಪ್ರತಿ ತಿಂಗಳು ರೂ 500 ಪ್ರೋತ್ಸಾಹ ಧನ ಕೂಡ ನೀಡಲಾಗುವುದು. ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಅವರು ಇಂತಹ ಪ್ರಕರಣವನ್ನು ಗುರುತಿಸಿ ವರದಿ ನೀಡಿದರೆ ಅವರಿಗೆ ಸಹ ಒಂದು ಸಾವಿರ ಪ್ರೋತ್ಸಾಹ ಧನ ನೀಡಲಾಗುವುದೆಂದು ಅವರು ತಿಳಿಸಿದರು.

kshayaroga medium

ಜಿಲ್ಲಾ ಮತ್ತು ಪ್ರಾಥಮಿಕ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಜಾಗೃತಿ ನೀಡುವ ಮೂಲಕ ಬೆಂಗಳೂರು ನಗರ ಮಾತ್ರವಲ್ಲದೆ ಒಟ್ಟಾರೆ ಕರ್ನಾಟಕವನ್ನು ಕ್ಷಯ ರೋಗ ಮುಕ್ತ ಮಾಡಲು ಕೈಜೋಡಿಸಬೇಕು. ದೇಶದಲ್ಲಿ ಕರೋನಾ ಸೋಂಕಿನ ಎರಡನೇ ಅಲೆ ತಲೆದೋರುತ್ತಿದ್ದು, ಸೋಂಕು ತಡೆಯುವಲ್ಲಿ ಸಾರ್ವಜನಿಕ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿಕೊಂಡರು.
ನಂತರ ಮಾತನಾಡಿದ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಮಹೇಶ್ ಕುಮಾರ್, ಕ್ಷಯ ರೋಗವನ್ನು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದಾದ ರೋಗವಾಗಿದ್ದು, ಕ್ಷಯ ರೋಗ ಹರಡುವುದನ್ನು ತಡೆಗಟ್ಟಲು, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಅಗತ್ಯವಿದೆ ಎಂದರು.

ಕ್ಷಯ ರೋಗ ಪತ್ತೆ ಕುರಿತು ಆರೋಗ್ಯ ಇಲಾಖೆಯೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳುವ ಖಾಸಗಿ ವೈದ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕ್ಷಯ ರೋಗದ ಕುರಿತು ಜಾಗೃತಿ ಮೂಡಿಸುವ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪೂರ್ವ ತಾಲೂಕಿನ ಆರೋಗ್ಯಾಧಿಕಾರಿಗಳಾದ ಡಾ. ಚಂದ್ರಶೇಖರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶ್ರೀನಿವಾಸ ಜಿ.ಎ, ಕಣ್ಣೂರಿನ ಪ್ರಾಥಮಿಕ ಆರೋಗ್ಯಾಧಿಕಾರಿಯಾ ಉಮಾ ರಾಕೇಶ್, ಗ್ರಾ ಪಂ. ಅಧ್ಯಕ್ಷರಾದ ಅಕ್ಕಯ್ಯಮ್ಮ, ಮತ್ತು ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಕಣ್ಣೂರಿನ ಪ್ರಾಥಮಿಕ ಆರೋಗ್ಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

TAGGED:2025BangaloreJ ManjunathTuberculosisಆಸ್ಪತ್ರೆಕ್ಷಯಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
9 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
10 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
14 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
15 hours ago

You Might Also Like

tilak varma suryakumar yadav
Cricket

ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

Public TV
By Public TV
7 hours ago
devimane ghat road
Latest

ಕಾರವಾರ-ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

Public TV
By Public TV
7 hours ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
7 hours ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
7 hours ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
7 hours ago
Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?