ಚಿಕ್ಕಮಗಳೂರು: ಪೋಷಕರ ಇಂಗ್ಲೀಷ್ ವ್ಯಾಮೋಹವೋ, ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನಿಡೋದಕ್ಕೆ ಸಾಧ್ಯವಾಗ್ತಿಲ್ವೋ ಅಥವಾ ಸರ್ಕಾರ ಕೇಳಿದವರಿಗೆಲ್ಲ ಖಾಸಗಿ ಶಾಲೆಗಳಿಗೆ ಅನುಮತಿ ನೀಡ್ತಿರೋದ್ರಿಂದ್ಲೋ ಗೊತ್ತಿಲ್ಲ. ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಾನೆ ಇದೆ. ಮಕ್ಕಳಿಗೆ ಬಿಸಿಯೂಟ, ಹಾಲು, ಮೊಟ್ಟೆ, ಸೈಕಲ್ ಅಂತೆಲ್ಲಾ ವಿವಿಧ ಯೋಜನೆಗಳನ್ನ ಜಾರಿಗೆ ತಂದರೂ ಕನ್ನಡ ಶಾಲೆಗಳನ್ನ ಮಾತ್ರ ಉಳಿಸಿಕೊಳ್ಳೋದಕ್ಕೆ ಆಗ್ತಿಲ್ಲ.
- Advertisement 2
ಹೌದು. ಚಿಕ್ಕಮಗಳೂರು (Chikkamagaluru) ಜಿಲ್ಲೆಯೊಂದರಲ್ಲೇ 21 ಕನ್ನಡ ಶಾಲೆಗಳು (Kannada School) ಬಂದ್ ಆಗಿವೆ. ಸರ್ಕಾರ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನ ಜಾರಿಗೆ ತಂದರೂ ಹೆತ್ತವರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸೋಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಿರೋ ಪ್ರಮಾಣ ಕೂಡ ಹೆಚ್ಚಿದೆ. ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡುತ್ತಿರುವುದರಿಂದಲೇ ಈ ಸ್ಥಿತಿ ಬಂದಿದೆ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಇದನ್ನೂ ಓದಿ: ನನ್ನ ಸಿ.ಡಿ ಮಾಡಿಸಿದ್ದೇ ಡಿಕೆಶಿ, ಪ್ರಕರಣ ಸಿಬಿಐಗೆ ವಹಿಸಿ: ಜಾರಕಿಹೊಳಿ ಆಗ್ರಹ
- Advertisement 3
- Advertisement 4
ಸರ್ಕಾರಿ ಶಾಲೆಗಳನ್ನ ಉಳಿಸೋಕೆ ಸರ್ಕಾರ ನಾನಾ ಯೋಜನೆಗಳನ್ನ ಜಾರಿಗೆ ತಂದ್ರೂ ಪೋಷಕರು ಮಾತ್ರ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸ್ತಿಲ್ಲ. ಜೊತೆಗೆ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡ್ತಿರೋದ್ರಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಕಳೆದ ಏಳೆಂಟು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿದೆ. ನೂರಾರು ಮಕ್ಕಳಿಗೆ ವಿದ್ಯಾಧಾನ ಮಾಡಿದ ಸರ್ಕಾರಿ ಶಾಲೆಗಳಿಂದು ಲೂಟಿಯೊಡೆದ ಕೋಟೆಯಂತಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ನಾನಾ ಸೌಲಭ್ಯ ನೀಡ್ತಿದೆ. ಆದರೆ ಈ ಬೆನ್ನಲ್ಲೇ ಖಾಸಗಿ ಶಾಲೆಗಳಿಗೆ ಎಗ್ಗಿಲ್ಲದೆ ಅನುಮತಿ ನೀಡ್ತಿರೋದ್ರಿಂದ ಪೋಷಕರಿಗೆ ಇಂಗ್ಲಿಷ್ ಮೇಲಿರೋ ವ್ಯಾಮೋಹದಿಂದ ಮಕ್ಕಳನ್ನ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಈ ಮಧ್ಯೆ ವಸತಿ ಶಾಲೆಗಳ ಆರಂಭ ಕೂಡ ಸರ್ಕಾರಿ ಶಾಲೆಗೆ ಮರಣಶಾಸನ ಬರೆದಿದೆ.
ಒಟ್ಟಾರೆ ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಗಳ ನಡುವೆ ಕಣ್ಣಾಮುಚ್ಚಾಲೆ ಆಟವಾಡುತ್ತಿರೋ ಸರ್ಕಾರಗಳ ನಡೆಯಿಂದಲೇ ಸರ್ಕಾರಿ ಶಾಲೆಗಳು ಬೀಗ ಕಾಣ್ತಿವೆಯಾ ಅನ್ನೋ ಅನುಮಾನ ಮೂಡುತ್ತಿದೆ.
Web Stories