ಕರ್ನಾಟಕದ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

Public TV
1 Min Read
Vidhana Soudha

ಬೆಂಗಳೂರು: ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಡಿಸಿಗಳು ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾದಿ ಗೌತಮ್ ಅವರನ್ನು ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಚಾಮರಾಜನಗರದ ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ ರಮೇಶ್ ಡಿ.ಎಸ್ ಅವರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: 4ರ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕನಿಂದ ಅತ್ಯಾಚಾರ – ಶಾಲೆಯನ್ನೇ ಮುಚ್ಚಿಸಿದ ಸರ್ಕಾರ

ias

ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ ಎಸ್ ಅವರನ್ನು ಬೆಂಗಳೂರಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಗೆ ಆಯುಕ್ತರಾಗಿ ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಹಿಲನ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಹಾವೇರಿ ಜಿಲ್ಲಾಧಿಕಾರಿಯಾಗಿ ರಘುನಂದನ್ ಮೂರ್ತಿ ಅವರನ್ನು ವರ್ಗಾಯಿಸಲಾಗಿದೆ. ಹೀಗೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ನಿಮ್ಮ ಬಳಿ ಬಟ್ಟೆ ಹಾವಿದ್ರೆ, ನನ್ನ ಬಳಿ ನಿಜವಾದ ಹಾವಿದೆ: ಬಿಜೆಪಿ ನಾಯಕರಿಗೇ ಯತ್ನಾಳ್ ಟಾಂಗ್

Live Tv
[brid partner=56869869 player=32851 video=960834 autoplay=true]

Share This Article