ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 214 ಹೊಸ ಕೊರೊನಾ ಕೇಸ್ ದಾಖಲಾಗುವ ಮೂಲಕ ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಕೊರೊನಾ ಸಾವಿನ ಸಂಖ್ಯೆ ಏರಿಕೆ ಕಂಡಿದ್ದು, ರಾಜ್ಯಾದ್ಯಂತ 12 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, 83 ಮಂದಿಗೆ ಪಾಸಿಟಿವ್ ವರದಿಯಾಗಿದೆ. 151 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,164 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,83,673 ಮಂದಿಗೆ ಕೊರೊನಾ ಬಂದಿದೆ. 29,36,527 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.5.61 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!
ಇಂದು ರಾಜ್ಯದಲ್ಲಿ ಇಂದು ಒಟ್ಟು 2,32,168 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 77,901 ಸ್ಯಾಂಪಲ್ (ಆರ್ಟಿ ಪಿಸಿಆರ್ 65,756 + 12,145 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರವಾಹದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ- ಪಾತ್ರೆಯಲ್ಲಿ ಕುಳಿತು ಮಂಟಪಕ್ಕೆ ತೆರಳಿದ್ರು!
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 83, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 2, ಕೊಡಗು 7, ಕೋಲಾರ 5, ಕೊಪ್ಪಳ 0, ಮಂಡ್ಯ 6, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 13, ತುಮಕೂರು 14, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.