ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 214 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 15 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಒಂದಂಕಿ ಪ್ರಕರಣ ದಾಖಲಾದರೆ, 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 286 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,188 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,89,489 ಮಂದಿಗೆ ಕೊರೊನಾ ಬಂದಿದೆ. 29,43,170 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.27 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ರಾತ್ರಿ ಮಳೆಗೆ ಬೆಂಗ್ಳೂರಲ್ಲಿ ಅವಾಂತರ – ಸಿಎಂ ಮಳೆ ಹಾನಿ ಸಭೆ ಹೊತ್ತಲ್ಲೇ ಕ್ರಿಕೆಟ್ನಲ್ಲಿ ಅಶೋಕ್ ಬ್ಯುಸಿ
ಇಂದು ರಾಜ್ಯದಲ್ಲಿ ಒಟ್ಟು 24,075 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 80,145 ಸ್ಯಾಂಪಲ್ (ಆರ್ಟಿ ಪಿಸಿಆರ್ 63,295 + 16,850 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ 118 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 117 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 1 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಟಾಕಿ ಸ್ಫೋಟಗೊಂಡು ಅಪ್ಪ, ಮಗನ ದೇಹ ಛಿದ್ರ ಛಿದ್ರ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 0, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 118, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2, ಚಿತ್ರದುರ್ಗ 3, ದಕ್ಷಿಣ ಕನ್ನಡ 10, ದಾವಣಗೆರೆ 0, ಧಾರವಾಡ 3, ಗದಗ 0, ಹಾಸನ 3, ಹಾವೇರಿ 1, ಕಲಬುರಗಿ 0, ಕೊಡಗು 5, ಕೋಲಾರ 3, ಕೊಪ್ಪಳ 0, ಮಂಡ್ಯ 5, ಮೈಸೂರು 25, ರಾಯಚೂರು 1, ರಾಮನಗರ 0, ಶಿವಮೊಗ್ಗ 1, ತುಮಕೂರು 5, ಉಡುಪಿ 7, ಉತ್ತರ ಕನ್ನಡ 11, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ.