ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 224 ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಐದು ಜಿಲ್ಲೆಗಳಲ್ಲಿ ತಲಾ ಒಂದೊಂದರಂತೆ ಒಟ್ಟು 5 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 379 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,707 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,94,001 ಮಂದಿಗೆ ಕೊರೊನಾ ಬಂದಿದೆ. 29,49,083 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.23 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.43 ರಷ್ಟಿದೆ. ಇಂದು ದಾಖಲಾದ ಐದು ಮರಣ ಪ್ರಕರಣ ಬೆಳಗಾವಿ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಕೊಪ್ಪಳ, ತುಮಕೂರಿನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಪದೇಗುಲಕ್ಕೆ ಬಂದ ಭಿಕ್ಷುಕಿಯನ್ನು ಬೈದು ಹೊರಗೆ ಕಳುಹಿಸಿದ್ರೂ ಆಕೆ ಕೊಟ್ಳು 10 ಸಾವಿರ ರೂ.!
ಇಂದು ರಾಜ್ಯದಲ್ಲಿ ಒಟ್ಟು 2,70,770 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 51,618 ಸ್ಯಾಂಪಲ್ (ಆರ್ಟಿ ಪಿಸಿಆರ್ 38,336 + 13,282 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪಕ್ಷಕ್ಕೆ ಬರುವಂತೆ ಪುನೀತ್ಗೆ ಹಲವು ಬಾರಿ ಗಾಳ ಹಾಕಿದ್ದೆ: ಡಿಕೆಶಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 122, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 17, ದಾವಣಗೆರೆ 1, ಧಾರವಾಡ 4, ಗದಗ 1, ಹಾಸನ 5, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 4, ಕೊಪ್ಪಳ 0, ಮಂಡ್ಯ 2, ಮೈಸೂರು 22, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 12, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.