ಭಾರತದಲ್ಲಿ ಕೊರೊನಾ ರಣಕೇಕೆ – ದೇಶಾದ್ಯಂತ 2,301 ಮಂದಿಗೆ ಸೋಂಕು, 56 ಬಲಿ

Public TV
2 Min Read
Coronavirus in India

ನವದೆಹಲಿ: ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್‍ಗೆ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಇತ್ತ ಭಾರತದಲ್ಲೂ ಕೊರೊನಾ ವೈರಸ್ ಹರಡುವಿಕೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಈವರೆಗೆ ಕೋವಿಡ್-19 ಸೋಂಕಿಗೆ 2,301 ಮಂದಿ ತುತ್ತಾಗಿದ್ದಾರೆ. ಅಲ್ಲದೇ 56 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ವಿಶ್ವಾದ್ಯಂತ ರಣಕೇಕೆ ಹಾಕುತ್ತಿರುವ ಸೋಂಕಿಗೆ ಈವರೆಗೆ ಸುಮಾರು 10,16,330 ಮಂದಿ ತುತ್ತಾಗಿದ್ದಾರೆ. ಕೊರೊನಾ ವೈರಸ್‍ನಿಂದ 53,238 ಮಂದಿ ಸಾವನ್ನಪ್ಪಿದ್ದರೆ, 2,13,132 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

coronavirus

ಗುರುವಾರದವರೆಗಿನ ವರದಿ ಪ್ರಕಾರ, ಮಹಾರಾಷ್ಟ್ರವನ್ನು ಭಾರತದಲ್ಲಿಯೇ ಅತಿ ಹೆಚ್ಚು ಕೊರೊನಾ ಸೋಂಕು ವರದಿಯಾದ ರಾಜ್ಯ ಎನ್ನಲಾಗಿದೆ. ಯಾಕೆಂದರೆ ಇಲ್ಲಿ 335 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ 30 ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್-19 ಚಿಕಿತ್ಸೆಗಾಗಿಯೇ ಮೀಸಲಿಟ್ಟಿದ್ದು, ಈ ಎಲ್ಲಾ ಆಸ್ಪತ್ರೆಗಳು ಸೇರಿ ಸುಮಾರು 2,305 ಬೆಡ್‍ಗಳ ಸೌಲಭ್ಯ ಲಭ್ಯವಿದೆ.

corona 14

ಹೆಚ್ಚು ಕೊರೊನಾ ಸೋಂಕು ವರದಿಯಾಗಿರುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಎರಡನೇ ಸ್ಥಾನದಲ್ಲಿದೆ. ಕೇರಳದಲ್ಲಿ 265 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಆ ಬಳಿಕ ತಮಿಳುನಾಡಿನಲ್ಲಿ 234 ಸೋಂಕಿತ ಪ್ರಕರಣ ವರದಿಯಾಗಿದ್ದು, ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಇತ್ತ ದೆಹಲಿಯಲ್ಲಿ 219 ಮಂದಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 125 ಮಂದಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ.

coronavirus 1

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‍ನಲ್ಲಿ(ಐಸಿಎಂಆರ್) ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸಾಂಕ್ರಾಮಿಕ ರೋಗಗಳ ವಿಭಾಗದ ಮುಖ್ಯಸ್ಥ ರಾಮನ್ ಆರ್.ಜಿ ಅವರು ಪ್ರತಿಕ್ರಿಯಿಸಿ, ಭಾರತದಲ್ಲಿ ಬುಧವಾರದವರೆಗೆ ಸುಮಾರು 47,951 ಮಂದಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದ್ದರು.

coronavirus 1

ಭಾರತದಲ್ಲಿ ಕೆಲ ಸ್ಥಳಗಳನ್ನು ಕೊರೊನಾ ವೈರಸ್ ಸೋಂಕಿನ ಹಾಟ್‍ಸ್ಪಾಟ್ ಎಂದು ಗುರುತಿಸಲಾಗಿದೆ. ದೆಹಲಿಯ ದಿಲ್ಶಾದ್ ಗಾರ್ಡನ್ ಹಾಗೂ ನಿಜಾಮುದ್ದೀನ್, ಉತ್ತರ ಪ್ರದೇಶದ ಮೀರತ್ ಹಾಗೂ ನೋಯ್ಡಾ, ರಾಜಸ್ಥಾನದ ಭಿಲ್ವಾರ, ಅಹಮದಾಬಾದ್, ಕೇರಳದ ಕಾಸರಗೋಡು ಹಾಗೂ ಪಥನಂತಿಟ್ಟ, ಮುಂಬೈ ಹಾಗೂ ಪುಣೆ ನಗರಗಳಲ್ಲಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ.

Nizamuddin Tablighi Jamaat

ಜಮಾತ್‍ನಲ್ಲಿ ನಡೆದ ತಬ್ಲಿಘಿ ಸಮಾವೇಶದಲ್ಲಿ ಭಾಗಿಯಾಗಿದ್ದ 9 ಸಾವಿರ ಕಾರ್ಯಕರ್ತರನ್ನು ನಾವು ಗುರುತಿಸಿ, ಅವರ ವಿವರಗಳನ್ನು ಪಡೆದಿದ್ದೇವೆ. ಅವರಲ್ಲಿ 1,306 ಮಂದಿ ವಿದೇಶಿಗರಿದ್ದಾರೆ. ಎಲ್ಲರನ್ನೂ ಹೋಂ ಕ್ವಾರಂಟೈನ್ ಆಗಿರಲು ಸೂಚಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *