ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ದಿಢೀರ್ ಏರಿಕೆ ಕಂಡಿದೆ. ನಿನ್ನೆ 886 ಇದ್ದ ಸೋಂಕು ಪ್ರಕರಣಗಳ ಸಂಖ್ಯೆ ಇಂದು 2,329ಕ್ಕೇರಿದೆ.
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,307ಕ್ಕೆ ಏರಿದೆ. ಇಂದು ಬೆಂಗಳೂರು ಗ್ರಾಮಾಂತರ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಈವರೆಗೆ ಒಟ್ಟು 40,159 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,782 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ. 7.78ಕ್ಕೆ ತಲುಪಿದೆ. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ಸಿಗರೇಟ್ನಿಂದ ಸುಟ್ಟ ವ್ಯಕ್ತಿಯ ಬಂಧನ
ಈವರೆಗೆ ರಾಜ್ಯದಲ್ಲಿ ಒಟ್ಟು 40,36,825 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,87,317 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 45,881 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 29,904 ಸ್ಯಾಂಪಲ್ (ಆರ್ಟಿಪಿಸಿಆರ್ 20,830 + 9,074 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 15, ಬಳ್ಳಾರಿ 44, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 1,606, ಬೀದರ್ 0, ಚಾಮರಾಜನಗರ 30, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 23, ಚಿತ್ರದುರ್ಗ 9, ದಕ್ಷಿಣ ಕನ್ನಡ 19, ದಾವಣಗೆರೆ 33, ಧಾರವಾಡ 48, ಗದಗ 1, ಹಾಸನ 47, ಹಾವೇರಿ 8, ಕಲಬುರಗಿ 16, ಕೊಡಗು 6, ಕೋಲಾರ 22, ಕೊಪ್ಪಳ 8, ಮಂಡ್ಯ 29, ಮೈಸೂರು 168, ರಾಯಚೂರು 52, ರಾಮನಗರ 48, ಶಿವಮೊಗ್ಗ 20, ತುಮಕೂರು 11, ಉಡುಪಿ 11, ಉತ್ತರ ಕನ್ನಡ 9, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು