ನಾಮಪತ್ರ ಸಲ್ಲಿಕೆ ದಿನಾಂಕ ಮುಕ್ತಾಯ – ಹಾಸನದಲ್ಲಿ ಹೆಚ್‌.ಡಿ ರೇವಣ್ಣ, ಪ್ರಜ್ವಲ್‌ ರೇವಣ್ಣ ಸೇರಿ 29 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Public TV
1 Min Read
PRAJWAL REVANNA NOMINATION HASSAN

ಹಾಸನ: ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಗುರುವಾರ ಅಂತ್ಯಗೊಂಡಿದ್ದು, ಹಾಸನ ಕ್ಷೇತ್ರದಲ್ಲಿ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪ್ರಜ್ವಲ್ ಆರ್‌. (ಜೆಡಿಎಸ್‌), ಜೆಕೆ ಚಿಕ್ಕಯ್ಯ (ಪಕ್ಷೇತರ), ಬಿ.ಎನ್ ಸುರೇಶ್ (ಪಕ್ಷೇತರ), ಶ್ರೇಯಸ್ ಎಂ. ಪಟೇಲ್ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಬಿ.ಎನ್ ಹೇಮಂತ್ ಕುಮಾರ್ (ಪಕ್ಷೇತರ), ಜಿ.ಎನ್ ಆನಂದ್ (ಭಾರತೀಯ ಡಾ.ಬಿ.ಆರ್ ಅಂಬೇಡ್ಕರ್ ಜನತಾಪಕ್ಷ), ಎಸ್.ಕೆ ನಿಂಗರಾಜ (ಬಹುಜನ್ ಭಾರತ್ ಪಾರ್ಟಿ), ಪರಮೇಶ ಎನ್.ಎಂ. (ಪಕ್ಷೇತರ), ಸಿದ್ಧಾಭೋವಿ (ಪಕ್ಷೇತರ), ಶೇಖ್ ಅಹಮದ್ (ನವರಂಗ್ ಕಾಂಗ್ರೆಸ್) ಶಿವರಾಜ್ ಬಿ. (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಭಾರತ್) ಅವರು ಗುರುವಾರ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಸಿ. ಸತ್ಯಭಾಮಾ ಅವರಿಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇದುವರೆಗೆ ನಾಮಪತ್ರಗಳನ್ನು ಸಲ್ಲಿಸಿರುವ ಇತರೆ ಅಭ್ಯರ್ಥಿಗಳು:
ದೇವರಾಜಾಚಾರಿ ಎಂ.ವೈ. (ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ), ಆರ್.ಜಿ. ಸತೀಶ್ (ಪಕ್ಷೇತರ), ಎಚ್.ಡಿ. ರೇವಣ್ಣ (ಪೂರ್ವಾಂಚಲ ಮಹಾಪಂಚಾಯತ್ ಪಕ್ಷ), ಗಂಗಾಧರ ಡಿ.ಎಸ್. (ಬಹುಜನ ಸಮಾಜ ಪಕ್ಷ), ಹೊಳೆಯಪ್ಪ ಜಿ (ಲೋಕ್ ಶಕ್ತಿ), ಎಂ. ಮಹೇಶ್ ಉರ್ಫ್ ಹರ್ಷ(ಪಕ್ಷೇತರ), ಬಸವರಾಜು ಜೆ.ಡಿ. (ಪಕ್ಷೇತರ), ಸಂತೋಷ್ ಬಿ.ಎನ್. (ಅಖಿಲ ಭಾರತ ಹಿಂದೂ ಮಹಾಸಭಾ), ಪ್ರತಾಪ ಕೆ.ಎ. (ಉತ್ತಮ ಪ್ರಜಾಕೀಯ ಪಾರ್ಟಿ), ಕೆ.ಆರ್. ಗಂಗಾಧರ (ಪಕ್ಷೇತರ). ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.8 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏ.26 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಸಿ.ಸತ್ಯಭಾಮ ತಿಳಿಸಿದ್ದಾರೆ.

Share This Article