ಶಿವಮೊಗ್ಗ: ಮಂಗನ ಕಾಯಿಲೆ (KFD) ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ (Thirthahalli) ತಾಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ಸಸಿ ತೋಟದ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜ.20 ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರದ ತೀವ್ರತೆ ಹೆಚ್ಚಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ
ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ, ಜ.25 ರಂದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತ ಪ್ರಯತ್ನ ನಡೆಸಿದರೂ, ಸೋಂಕಿನ ತೀವ್ರತೆಯಿಂದಾಗಿ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಎನ್ಆರ್ಪುರ | ಇಬ್ಬರಿಗೆ ಕೆಎಫ್ಡಿ ದೃಢ – ಜನರಲ್ಲಿ ಹೆಚ್ಚಿದ ಆತಂಕ

