Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿಗಳಂತೆ ನಮ್ಮ ಸಮಾಜಕ್ಕೆ ಮೋಸ ಮಾಡುವುದಿಲ್ಲ: ಯತ್ನಾಳ್

Public TV
Last updated: September 4, 2021 3:24 pm
Public TV
Share
3 Min Read
BASANAGOWDA PATIL YATHNAL
SHARE

-ಇಬ್ಬರು ಮಾಜಿ ಸಿಎಂಗಳು ಮೋಸ ಮಾಡಿದ್ದಾರೆ

ಹಾವೇರಿ: ನಮ್ಮ ಸಮಾಜಕ್ಕೆ ಮೋಸ ಮಾಡಿದವರು ಇಬ್ಬರು ಮಾಜಿ ಸಿಎಂ ಆಗಿದ್ದಾರೆ. ಅವರು ಖಾಯಂ ಮಾಜಿ ಆಗಿರುತ್ತಾರೆ. ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿಗಳಂತೆ ನಮ್ಮ ಸಮಾಜಕ್ಕೆ ಮೋಸ ಮಾಡುವುದಿಲ್ಲ. ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡುತ್ತಾರೆ ಎಂಬ ಭರವಸೆ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

BASAVARAJ BOMMAI 2

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಮಾತನಾಡಿದ ಅವರು, ಮೀಸಲಾತಿ ಪರಿಷ್ಕರಣೆ ಬೇಡಿಕೆಯನ್ನು ವಿಧಾನಸೌಧದಲ್ಲಿ ಕೇಳಿದ್ದೆ. ಬಸವರಾಜ ಬೊಮ್ಮಾಯಿ ಅವರು ಗೃಹ ಮಂತ್ರಿ ಆಗಿದ್ದಾಗ ನಮ್ಮ ಬೇಡಿಕೆಗೆ ದೀರ್ಘ ಉತ್ತರ ನೀಡಿದ್ದರು. ಆರು ತಿಂಗಳೊಳಗೆ ಬೇಡಿಕೆ ಈಡೇರಿಸೋದಾಗಿ ಅಂದಿನ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಅದು ಯಾವುದು ಈವರೆಗೆ ಆಗಿಲ್ಲ. ಸೆಪ್ಟೆಂಬರ್ 15ಕ್ಕೆ ಆರು ತಿಂಗಳ ಗಡುವು ಮುಗಿಯುತ್ತಿದೆ. ಕೂಡಲಸಂಗಮ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಸಮುದಾಯದ ಶಕ್ತಿ ಒಗ್ಗೂಡಿಸಲು ಪ್ರಯತ್ನ ನಡೆಯುತ್ತಿದೆ. ನಾವೆಲ್ಲರೂ ಸ್ವಾಮೀಜಿಗಳ ಬೆಂಬಲಕ್ಕೆ ನಿಂತುಕೊಂಡಿದ್ದೇವೆ ಎಂದರು. ಇದನ್ನೂ ಓದಿ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

bsy 1 medium

ನಾವು ರಾಜಕೀಯ ಮೀಸಲಾತಿ ಕೇಳುತ್ತಿಲ್ಲ, ಶೈಕ್ಷಣಿಕ ಮೀಸಲಾತಿ ಕೇಳುತ್ತಿದ್ದೇವೆ. ನಮ್ಮ ಸಮಾಜಕ್ಕೆ ಯಾರ್ಯಾರು ಮೋಸ ಮಾಡಿದ್ದಾರೆ ಅನ್ನೋದು ಜನರಿಗೆ ಗೊತ್ತಿದೆ. ಸಮಾಜ ಒಡೆಯಬೇಕು ಅಂತಾ ಕೆಲವರು ರಾಜ್ಯದಲ್ಲಿ ಪಿತೂರಿ ನಡೆಸುತ್ತಿದ್ದಾರೆ. ಎರಡು, ಮೂರು ಪೀಠ ಮಾಡ್ಕೊಂಡು ಕೆಲವರು ಪಂಚಮಸಾಲಿ ಸಮಾಜವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಮ್ಮಲ್ಲೆ ಕೆಲವರು ಮಂತ್ರಿ, ಮುಖ್ಯಮಂತ್ರಿ ಆಗಬೇಕು ಎಂದು ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ. ನಾನು ಮಂತ್ರಿ, ಮುಖ್ಯಮಂತ್ರಿ ಆಗಬೇಕು ಎಂದು ಹೋರಾಟ ಮಾಡುತ್ತಿಲ್ಲ. ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಬಹಳ ದೊಡ್ಡ ಪರಿಣಾಮ ಆಗುತ್ತದೆ. ಹಿಂದಿನ ಇಬ್ಬರು ಮುಖ್ಯಮಂತ್ರಿಗಳು ನಮ್ಮ ಸಮಾಜವನ್ನು 2 ಎಗೆ ಸೇರಿಸಬಹುದಿತ್ತು, ಆದರೆ ಸೇರಿಸಲಿಲ್ಲ. ಸಿ.ಎಂ.ಉದಾಸಿ ನೇತೃತ್ವದ ಸಮಿತಿ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಬಹುದು ಎಂದು ವರದಿ ಕೊಟ್ಟಿದೆ. ಒಂದೆರಡು ನಮ್ಮ ಸಮಾಜದ ನಾಯಕರು ದೆಹಲಿಯಲ್ಲಿ ನಾನು ಲಿಂಗಾಯತ ಲೀಡರ್ ಎಂದು ಹೇಳಿಕೊಂಡು ಹೋಗಿದ್ದಾರೆ. ಯಾರೇ ತಂತ್ರ, ಕುತಂತ್ರ ಮಾಡಿ ಸಮಾಜ ಒಡೆಯೋ ಕೆಲಸಕ್ಕೆ ಮುಂದಾದ್ರೆ ಅದು ನಡಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Murugesh Nirani medium

ಯಾರೇ ಮುಖ್ಯಮಂತ್ರಿ ಇದ್ದರೂ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎಂಬ ಕೇಂದ್ರ ಗೃಹ ಸಚಿವ ಅಮೀತ್ ಶಾರ ಹೇಳಿಕೆ ಸ್ವಾಗತಾರ್ಹ. ನಾನು ಹಿಂದೆ ಹೇಳಿದ್ದ ಭವಿಷ್ಯ ತಡವಾಗಿ ನಿಜ ಆಗಿದೆ ಎಂದರು.

MB PATIL 2

ನಮ್ಮ ಮಿಸಲಾತಿ ಹೋರಾಟ ಯಾವುದೇ ಸ್ವಾಮೀಜಿ, ನಾಯಕರನ್ನು ಕರೆಯುವ ಅಗತ್ಯವಿಲ್ಲ. ಕುಂಕುಮ ಹಚ್ಚಿ, ತಾಂಬೂಲ ಕೊಟ್ಟು ಕರೆಕೊಡುವ ಅಗತ್ಯವಿಲ್ಲ. ನಿರಾಣಿ 2ಎ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರು. ವೀರಶೈವ ಲಿಂಗಾಯತರು ಎಲ್ಲ ಒಂದೇ. ವೀರಶೈವ ಮತ್ತು ಲಿಂಗಾಯತ ಎರಡು ಒಂದೇ. ಎಂ.ಬಿ.ಪಾಟೀಲ್‍ರಿಗೆ ಪ್ರಾಯಶ್ಚಿತ ಆಗಿದೆ. ಗಣೇಶ ಚತುರ್ಥಿ ಆಚರಣೆ ಮಾಡಬೇಡಿ ಎನ್ನುತ್ತಾರೆ. ದೊಡ್ಡ, ದೊಡ್ಡ ಕಾರ್ಯಕ್ರಮ ಮಾಡುತ್ತಾರೆ. ಮೊಹರಂನಲ್ಲಿ ಕುಣಿದು ಕುಪ್ಪಳಿಸಿದ್ದಾರೆ, ಗಣೇಶ ಚತುರ್ಥಿ ಬಂದಾಗ ಕೊರೊನಾ ಅಂತಾರೆ. ಹಿಂದೂಗಳಿಗೆ ಇರುವುದು ಒಂದೆ ಭಾರತ. ಈಗಾಗಲೇ ಅವರು ಕಾಶ್ಮೀರಕ್ಕೆ ಬಂದಿದ್ದಾರೆ. ಜಾತ್ಯಾತೀತರು ಅಂತಾ ಹೊರಟರೆ ನಾಳೆ ನಾವು ಉಳಿಯುವುದಿಲ್ಲ, ನೀವು ಉಳಿಯೋದಿಲ್ಲ. ಡಾ.ಅಂಬೇಡ್ಕರರು ದೇಶ ಒಡೆಯೋ ಕೆಲಸ ಮಾಡಬೇಡಿ ಅಂತಾ ಹೇಳಿದ್ರು. ಅಂಬೇಡ್ಕರ್ ನಿಜವಾದ ಸತ್ಯಗಳನ್ನೆ ಹೇಳಿದ್ರು. ಎಲ್ಲ ಕಳ್ಳರು ಸೇರಿಕೊಂಡು ಅಂಬೇಡ್ಕರ್‍ನ್ನೆ ದೂರವಿಟ್ಟರು. ಲಿಂಗಾಯತ, ವೀರಶೈವ ಎಂದು ಹೇಳಿಕೊಂಡು ಹೊರಟರೆ ನಮ್ಮ ದೇಶ ಉಳಿಯುವುದಿಲ್ಲ ಎಂದು ಯತ್ನಾಳ್ ಕಿಡಿಕಾರಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್

TAGGED:AmbedkarBasanagowda Patil YatnalBasavaraj BommaicmGanesha ChathurthiPublic TVreservationಅಂಬೇಡ್ಕರ್ಗಣೇಶ್ ಚತುರ್ಥಿಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಮೀಸಲಾತಿಸಿಎಂ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
23 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 days ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
3 days ago

You Might Also Like

DK SHIVAKUMAR
Bengaluru City

ಪೊಲೀಸರಿಂದ ಸರ್ಕಾರಕ್ಕೆ ಪತ್ರ – ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡದೇ ತೆರಳಿದ ಡಿಕೆಶಿ

Public TV
By Public TV
9 minutes ago
operation sindoor India intercepts Pakistans Fatah ballistic missile fired at Delhi
Latest

ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

Public TV
By Public TV
10 minutes ago
Chinnaswamy Stampede
Bengaluru City

Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

Public TV
By Public TV
35 minutes ago
Explainer Chinas rare earth export curbs hit the auto industry india worldwide Electric Vehicle
Automobile

Explainer| ಅಪರೂಪದ ಭೂ ಖನಿಜ ರಫ್ತಿಗೆ ಚೀನಾ ನಿಷೇಧ: ಭಾರತದ ಮೇಲೆ ಪರಿಣಾಮ ಏನು?

Public TV
By Public TV
2 hours ago
Crime Odisha Police
Crime

ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಅಪ್ರಾಪ್ತೆಯರ ಕಿಡ್ನ್ಯಾಪ್‌ – ನಾಲ್ವರಿಂದ ಗ್ಯಾಂಗ್‌ರೇಪ್‌

Public TV
By Public TV
2 hours ago
Rajasthan Live In Relation Couple Marriage
Latest

70 ವರ್ಷ ಲಿವ್ ಇನ್ ರಿಲೇಶನ್ – 95ನೇ ವಯಸ್ಸಿನಲ್ಲಿ ಹಸೆಮಣೆ ಏರಿದ ರಾಜಸ್ಥಾನ ಜೋಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?