Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅ.21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅ.21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

Belgaum

ಅ.21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

Public TV
Last updated: October 18, 2022 3:59 pm
Public TV
Share
3 Min Read
Panchamasali 3
SHARE

ಬೆಳಗಾವಿ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿಗೆ(2A reservation)ಆಗ್ರಹಿಸಿ ಅಕ್ಟೋಬರ್ 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ(Jaya Mrtunjaya Swamiji) ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅ.21ರಂದು ನಡೆಯುವ ಸಮಾವೇಶದಲ್ಲಿ ಕಿತ್ತೂರು ಕರ್ನಾಟಕದ ಪ್ರಥಮ ರಾಷ್ಟ್ರಮಾತೆ ಚನ್ನಮ್ಮರವರ 244ನೇ ಜಯಂತಿ, 199ನೇ ವಿಜಯೋತ್ಸವ ಮಾಡಲಾಗುವುದು. ಅಕ್ಟೋಬರ್ 21ರೊಳಗೆ ಮೀಸಲಾತಿ ಘೋಷಿಸದಿದ್ದರೆ ಅಂತಿಮ ಹಂತದ ಹೋರಾಟದ ದಿನಾಂಕ ನಿಗದಿ ಮಾಡುತ್ತೇವೆ. 25 ಲಕ್ಷ ಜನ ಸೇರಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ದಿನಾಂಕ ನಿಗದಿ ಮಾಡುತ್ತೇವೆ ಎಂದರು‌.

ಮೀಸಲಾತಿ ಘೋಷಣೆ ವಿನಾಕಾರಣ ವಿಳಂಬ ಮಾಡಿ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿಯಾದರೆ ನಮ್ಮ ಹೋರಾಟಕ್ಕೆ ಹಿನ್ನಡೆ ಆಗಬಾರದು. ಹೀಗಾಗಿ ಉಗ್ರವಾದ ಹೋರಾಟಕ್ಕೆ ನಾವು ತಯಾರಿ ಮಾಡಿದ್ದೇವೆ. ಅ. 21ರವರೆಗೆ ಹಿಂದುಳಿದ ವರ್ಗದ ಆಯೋಗದ ವರದಿ ಪಡೆಯಬೇಕು. ಅಂದು ವಿಧಾನಸೌಧಕ್ಕೆ 25 ಲಕ್ಷ ಜನ ಮುತ್ತಿಗೆ ಹಾಕುವ ಹೋರಾಟದ ದಿನಾಂಕ ನಿಗದಿ ಮಾಡಲಾಗುತ್ತದೆ‌. ನಮ್ಮ ಸಮಾಜದ ಇಬ್ಬರು ಸಚಿವರು, 20 ಶಾಸಕರು ಬೆಂಬಲ ಕೊಟ್ಟಿದ್ದಾರೆ. ಅಧಿವೇಶನದಲ್ಲಿ ಹೋರಾಟ ಮಾಡಿದಾಗ ಖಡಕ್ ಸಂದೇಶ ನೀಡಿದ್ದೆವು. ಬಸನಗೌಡ ಪಾಟೀಲ್ ಯತ್ನಾಳ್ ಹೋರಾಟ ನಡೆಸಿದಾಗ ಬೆಂಬಲ ನೀಡದಿದ್ದರೆ 2023ರ ಚುನಾವಣೆಯಲ್ಲಿ ನಮ್ಮ ಜನ ಅಸಮಾಧಾನಗೊಳ್ಳುತ್ತಾರೆ. ಹೀಗಾಗಿ ಮೊನ್ನೆ ನಡೆದ ಅಧಿವೇಶನದಲ್ಲಿ ಪಂಚಮಸಾಲಿ ಸಮುದಾಯದ ಶಾಸಕರು ಪಕ್ಷಬೇಧ ಮರೆತು ಸದನದಲ್ಲಿ ಹೋರಾಟ ಮಾಡಿದ್ದಾರೆ ಎಂದು ತಿಳಿಸಿದರು.

Panchamasali 1 1

ಕೆಲವರು ಯತ್ನಾಳ್‌ರ ಹಾಗೇ ಓಪನ್ ಆಗಿ ಬರಲು ಆಗದೇ ಇರಬಹುದು. ಕೆಲವರು ಹಿಂಭಾಗದಲ್ಲಿ ಇದ್ದು ಹೋರಾಟಕ್ಕೆ ಬೆಂಬಲ ಕೊಡುತ್ತಿದ್ದಾರೆ. ಸಚಿವರಾದ ಸಿ.ಸಿ.ಪಾಟೀಲ್, ಶಂಕರ್ ಪಾಟೀಲ್ ಮುನೇನಕೊಪ್ಪ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಒಳಗೆ ಇದ್ದು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅದರ ಬಗ್ಗೆ ನಾನು ಸ್ಪಷ್ಟವಾಗಿ ಹೇಳುತ್ತೇನೆ. ಸಿಎಂಗೆ ಒತ್ತಡ ಹಾಕುವ, ಸಮಾಜಕ್ಕೆ ಗೌರವ ತರುವಂತಹ ಕೆಲಸ ಮಾಡುತ್ತಿದ್ದಾರೆ ಅವರ ಸ್ನೇಹಿತರು ಸಿಎಂ ಆಗಿರುವುದರಿಂದ ಓಪನ್ ಆಗಿ ಬರಲು ಆಗದೇ ಇರಬಹುದು. ನಮ್ಮ ಸಮಾಜದ ಎಲ್ಲಾ ಶಾಸಕರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಚಿವ ಮುರುಗೇಶ್ ನಿರಾಣಿ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಅವರ ಬಗ್ಗೆ ಹೇಳುವುದಕ್ಕೆ ಹೋಗುವುದಿಲ್ಲ. ಅವರು ಏನು ಮಾಡ್ತಿದ್ದಾರೆ ಏನಿಲ್ಲ ನಿಮಗೆಲ್ಲಾ ಗೊತ್ತೆ ಇದೆ. ನಾನು ಅವರ ಬಗ್ಗೆ ಏನೂ ಹೇಳಲು ಹೋಗಲ್ಲ. ಅವರು ನಮ್ಮ ಸಮುದಾಯದವರು ಇರೋದ್ರಿಂದ ದೇವರು ಅವರಿಗೆ ಯಾವಾಗ ಬುದ್ದಿ ಕೊಡ್ತಾನೆ ಕೊಟ್ಟು ನಮ್ಮ ಹೋರಾಟಕ್ಕೆ ಬೆಂಬಲ ನೀಡುವ ಪ್ರಯತ್ನ ಆಗಬೇಕು. ಅವರ ಬಗ್ಗೆ ನಾನು ಏನೂ ಹೇಳಲ್ಲ, ಅವರೇನು ಮಾಡ್ತಿದ್ದಾರೆ ನಿಮಗೆಲ್ಲ ಗೊತ್ತಿದೆ. ನಮ್ಮ ಸಮಾಜದ ಇಬ್ಬರು ಸಚಿವರು, ಶಾಸಕರು ನಮ್ಮ ಹೋರಾಟಕ್ಕೆ ಪ್ರಾಮಾಣಿಕ ಬೆಂಬಲ ಕೊಡ್ತಿದ್ದಾರೆ. ವಿರೋಧ ಮಾಡ್ತಿದ್ದಾರೋ ಬೆಂಬಲ ನೀಡ್ತಿದ್ದಾರೋ ಹೇಳೋಕೆ ಹೋಗಲ್ಲ. ಸಚಿವ ನಿರಾಣಿ ಸಹ ಆರಂಭದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಕೊಟ್ಟಿದ್ದರು. ಈಗ ಎಲ್ಲೋ ಒಂದು ಕಡೆ ಅವರು ತಟಸ್ಥರಿದ್ದಾರೆ ಎಂಬ ಕಾರಣಕ್ಕೆ ನಮ್ಮ ಮನಸ್ಸಿಗೆ ನೋವಾಗಿದೆ. ಮುಂದಿನ ದಿನಗಳಲ್ಲಿ ಬೆಂಬಲ ನೀಡಲಿ ಎಂದು ನಾನು ಆಶಿಸುತ್ತೇನೆ ಎಂದರು.

Panchamasali 2

 

ಯಾರಿಗೆ ನೋವಿರುತ್ತೋ, ಹಸಿವಿರುತ್ತೋ ಅವರಿಗೆ ಹಸಿವಿನ ಬೆಲೆ ಗೊತ್ತಿರುತ್ತದೆ. ಸುಖವಾಗಿ, ಅರಾಮವಾಗಿ ಇದ್ದವರಿಗೆ ಹತ್ತು ವರ್ಷ ಬಿಟ್ಟು ಕೊಟ್ಟರೂ ನಡೆಯುತ್ತದೆ. ಹೀಗಾಗಿ ನಮಗೆ ಹಸಿವಿದೆ. ನಮ್ಮ ಸಮಾಜದ ಕಟ್ಟಕಡೇ ಬಡವನಿಗೆ ಮೀಸಲಾತಿ ಹಸಿವಿದೆ. ಚುನಾವಣೆ ಇನ್ನೂ ಮೂರ್ನಾಲ್ಕು ವರ್ಷ ಇದ್ರೆ ನಾನು ಎಲ್ಲರ ಹಾಗೇ ಶಾಂತಿಯಾಗಿ ಇರಬಹುದಾಗಿತ್ತು. ಆದರೆ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿ ಇದೆ. ಅಕ್ಟೋಬರ್ 21ರಂದು ಎಲ್ಲಾ ನಾಯಕರು ಮಾತನಾಡುತ್ತಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:2A ReservationhukkeriJaya Mrtunjaya Swamijipanchamasaliಜಯಮೃತ್ಯುಂಜಯ ಸ್ವಾಮೀಜಿಪಂಚಮಸಾಲಿಮೀಸಲಾತಿಹುಕ್ಕೇರಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
5 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
43 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
46 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?