ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..?

Public TV
1 Min Read
ygr student death collage copy

ಯಾದಗಿರಿ: ಜಿಲ್ಲೆಯ ಸುರಪುರ ನಗರದ ಬಸ್ ನಿಲ್ದಾಣದ ಸಮೀಪದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ನೇಣು ಬಿಗಿದುಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು, ಇದೀಗ ತೀವ್ರ ಅನುಮಾನಕ್ಕೀಡು ಮಾಡಿದೆ.

ಬಸವರಾಜ್ ಪೂಜಾರಿ (19) ಮೃತ ಕಾಲೇಜು ವಿದ್ಯಾರ್ಥಿ. ಈತ ಸುರಪುರ ತಾಲೂಕಿನ ಮಾಸಗುಂಡಾಳ ಗ್ರಾಮದ ನಿವಾಸಿಯಾಗಿದ್ದು, ಅರುಂಧತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದನು ಎಂದು ಹೇಳಲಾಗಿದೆ.

ಬಸವರಾಜ್ ಕಳೆದ ಆರು ತಿಂಗಳಿಂದ ಸ್ನೇಹಿತರೊಂದಿಗೆ ಬಾಡಿಗೆ ರೂಮಿನಲ್ಲಿ ವಾಸವಿದ್ದನು. ಸ್ನೇಹಿತರು ಊರಿಗೆ ತೆರಳಿದ ವೇಳೆ ಬಸವರಾಜ್ ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದ್ರೆ ಬಸವರಾಜ್ ಸಾವಿನ ಅಧಿಕೃತ ಕಾರಣ ತಿಳಿದು ಬಂದಿಲ್ಲ.

ಸದ್ಯ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *