ಚೆನ್ನೈ: ಮನೆಯಲ್ಲಿದ್ದ ವಿಷಪೂರಿತ ಆಹಾರ (Food) ಸೇವಿಸಿ ಮೂವರು ಮಕ್ಕಳು (Children) ಸಾವನ್ನಪ್ಪಿದ್ದು, 11 ಮಂದಿ ಮಕ್ಕಳು ಅಸ್ವಸ್ಥರಾದ ಘಟನೆ ತಮಿಳುನಾಡಿನ (Tamil Nadu) ತಿರುಪ್ಪೂರಿನಲ್ಲಿ ನಡೆದಿದೆ.
ಮಕ್ಕಳೆಲ್ಲರೂ ರಾತ್ರಿ ಊಟಕ್ಕೆ ಅನ್ನ, ರಸಂ ಹಾಗೂ ಲಡ್ಡುವನ್ನು ಸೇವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವರಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದೆ.
ಗುರುವಾರ ಬೆಳಿಗ್ಗೆ ಅವರೆಲ್ಲರೂ ಉಪಹಾರ ಸೇವಿಸಿದ್ದರು. ಇದಾದ ಬಳಿಕ ಅವರ ಸ್ಥಿತಿ ಹದಗೆಟ್ಟಿದೆ. ಅವರಲ್ಲಿದ್ದ ಕೆಲವರು ಪ್ರಜ್ಞಾಹೀನರಾದರು. ಕೂಡಲೇ ಅವರೆಲ್ಲರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನಾಳೆ ಇಡಿ ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡ್ತೀವಿ – ಡಿಕೆಶಿ
ಆಸ್ಪತ್ರೆಗೆ ಭೇಟಿ ನೀಡಿದ್ದ ತಿರುಪುರ್ ಜಿಲ್ಲಾಧಿಕಾರಿ ಎಸ್. ವಿನೀತ್ ಅವರು, ಆಹಾರದಲ್ಲಿ ವಿಷ ಹೇಗೆ ಬಂತು ಎನ್ನುವುದರ ಕುರಿತು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇರಳ ದುರಂತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ