ಹುಬ್ಬಳ್ಳಿ: ನಗರ ವಿಕಾಸ ಯೋಜನೆಯ 3 ಕೋಟಿ ಅನುದಾನದಲ್ಲಿ ಚನ್ನಪೇಟೆ, ಅರವಿಂದ ನಗರ ಹಾಗೂ ಹಳೆ ಹುಬ್ಬಳ್ಳಿ ಮುಖ್ಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ವಾರ್ಡ್ ನಂ.55ರ ವ್ಯಾಪ್ತಿಯಲ್ಲಿ ಯುಜಿಡಿ ಹಾಗೂ ಒಳಚರಂಡಿ ನಿರ್ಮಿಸಲು ಸರ್ಕಾರ 1 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಶೀಘ್ರವೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ಹಳೇ ಹುಬ್ಬಳ್ಳಿ ದಿಡ್ಡಿ ಓಣಿ ಉದ್ಯಾನವನದಲ್ಲಿ ಜರುಗಿದ ಜನಸಂಪರ್ಕ ಸಭೆಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ಇದೇ ವೇಳೆ ಗ್ರಾಮಸ್ಥರಿಗೆ ನೆರವಿನ ಭರವಸೆ ನೀಡಿದ್ದಾರೆ.
ಒಳಚರಂಡಿ ಕಾಮಗಾರಿಗೂ ಮುನ್ನ ಸರ್ವೇ:
ದಾಳಿಂಬರಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಗಾಲದಲ್ಲಿ ನಾಲೆಗಳು ತುಂಬಿ, ಚಂರಡಿ ನೀರು ರಸ್ತೆ ಹಾಗೂ ಮನೆಗಳಿಗೆ ಹರಿಯುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಯುಜಿಡಿ ಹಾಗೂ ಒಳಚರಂಡಿ ಕಾಮಗಾರಿ ಆರಂಭವಾಗುವ ಮುನ್ನವೇ ಈ ಭಾಗದಲ್ಲಿನ ಸಮಸ್ಯೆ ಕುರಿತು ಸರ್ವೇ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಶೆಟ್ಟರ್ ಸೂಚಿಸಿದರು. ಇದನ್ನೂ ಓದಿ: ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ
ಕಳ್ಳರ ಹಾವಳಿಗೆ ಸಿಸಿಟಿವಿ:
ಸಭೆಯಲ್ಲಿ ಹಳೆ ಹುಬ್ಬಳ್ಳಿ ಭಾಗದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸಾರ್ವಜನಿಕರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶೆಟ್ಟರ್, ಕಳ್ಳತನ ಹಾಗೂ ಕಳ್ಳರ ಹಾವಳಿ ಕುರಿತು ಪೆÇಲೀಸ್ ಕಮಿಷನರ್ ಜೊತೆ ಚರ್ಚೆಸುತ್ತೇನೆ. ಕೇಂದ್ರ ಸರ್ಕಾರದ ಹಲವಾರು ಯೋಜನಯಡಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಅವಕಾಶವಿದೆ. ಈ ಕುರಿತು ಕೇಂದ್ರ ಸಚಿವರು ಹಾಗೂ ಸಂಸದರಾದ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.
ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶೆಟ್ಟರ್:
ಸಂಗೀತಾ ಕಾಟವೆ ಎಂಬ ಮೃತರ ಮರಣ ಪ್ರಮಾಣ ಪತ್ರ ನೀಡುವಲ್ಲಿ ಉಂಟಾದ ವಿಳಂಬದ ಬಗ್ಗೆ ಸಂಬಂಧಿಯೊಬ್ಬರು ಸಭೆಯಲ್ಲಿ ಅಳಲು ತೋಡಿಕೊಂಡರು. ಅಳಲು ಆಲಿಸಿದ ಜಗದೀಶ್ ಶೆಟ್ಟರ್, ಸರ್ಕಾರ ಮನೆ ಮನೆಗೆ ತೆರಳಿ ಜನನ ಹಾಗೂ ಮರಣ ಪತ್ರ ವಿತರಿಸಲು ಯೋಚಿಸುತ್ತಿದೆ. ಆದರೆ ಪಾಲಿಕೆ ಅಧಿಕಾರಿಗಳು ಮರಣಿಸಿದ ವ್ಯಕ್ತಿಗಳ ಪಂಚನಾಮೆ ಮಾಡಲು ಅಸಡ್ಡೆ ತೋರುವುದು ಸಲ್ಲದು. ಕೆಲಸ ಮಾಡಲು ಅಧಿಕಾರಿಗಳು ಸಿದ್ದವಿಲ್ಲ ಎಂದರೆ ಹೇಗೆ? ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮ ಕಸಿದ ಕೋವಿಡ್ ಹೆಮ್ಮಾರಿ- ಬೆಂಗ್ಳೂರಿನ ಪ್ರಮುಖ ರಸ್ತೆಗಳೆಲ್ಲವೂ ನಿರ್ಜನ
ಗುರುತಿನ ಚೀಟಿ ಹಾಗೂ ಶ್ರಮ್ ಕಾರ್ಡ್ ವಿತರಣೆ:
ಮೊಚಿಗಾರ ಸಂಘದಿಂದ ಸಮುದಾಯ ಭವನ ನಿರ್ಮಿಸಲು ಅನುದಾನ ಒದಗಿಸಲು ಸಭೆಯಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ
ಅಸಂಘಟಿತ ಕಾರ್ಮಿರಿಗೆ ಗುರುತಿನ ಚೀಟಿ ಹಾಗೂ ಈ ಶ್ರಮ್ ಕಾರ್ಡ್ ವಿತರಣೆ ಮಾಡಲಾಯಿತು.
ಜಿ+2 ಮಾದರಿಯ ಮನೆಗೆ ನಿವಾಸಿಗಳ ಮನವಿ:
ಆಸಾರ್ ಓಣಿಯ ಸಿಕ್ಕಿಲಿಗರ ತಂಡಾ ಆಸಾರ್ ಓಣಿ ಹೊಂಡದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ಕೊಳಚೆ ಮಂಡಳಿ ವತಿಯಿಂದ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡುವಂತೆ ನಿವಾಸಿಗಳು ಮನವಿ ಸಲ್ಲಿಸಿದರು. ಇದನ್ನೂ ಓದಿ: ಕುಮಾರಸ್ವಾಮಿಯವರು ಯಡಿಯೂರಪ್ಪನವರ ಬಳಿ ಹೋಗಿದ್ದರು: ಹೆಚ್.ಸಿ ಬಾಲಕೃಷ್ಣ
ಸಭೆಯಲ್ಲಿ ಕರ್ನಾಟಕ ಮಾರ್ಜಕ ನಿಯಮಿತದ ನಿರ್ದೇಶಕ ಮಲ್ಲಿಕಾರ್ಜುನ ಸವಕಾರ, ಪಾಲಿಕೆ ಸದಸ್ಯ ಸಂತೋಷ್ ಚವ್ಹಾಣ್, ಮಾಜಿ ಮೇಯರ್ಗಳಾದ ಪಾಂಡುರಂಗ ಪಾಟೀಲ ಹಾಗೂ ಡಿ.ಕೆ.ಚವ್ಹಾಣ್ ಸೇರಿದಂತೆ ಪಾಲಿಕೆ ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.