ಹಾಸನ: ಕೆಎಸ್ಆರ್ಟಿಸಿ ಬಸ್ ಮತ್ತು ಮಾರುತಿ ಓಮ್ನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದೆ. ಮೃತರನ್ನು ಮುಜೀಬ್(53), ಮಹಮದ್ ಸಾದಿಕ್ (22) ಹಾಗೂ ಮುಸ್ಕಾನ್ (19) ಎಂದು ಗುರುತಿಸಲಾಗಿದೆ.
ಶಲೀನಾ ಬಾನು, ಇಮ್ರಾನ್ ಅಹಮದ್, ಶಲೀನಾ ತಾಜ್ ಮತ್ತು ಮೊಹಮದ್ ಶಲೀನಾರಿಗೆ ಗಾಯಾಳುಗಳಾಗಿದ್ದು, ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv