ಟಿಟಿ ವಾಹನಕ್ಕೆ ಲಾರಿ ಡಿಕ್ಕಿ- ಬೆಂಗ್ಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ

Public TV
1 Min Read
accident

ಚಿತ್ರದುರ್ಗ: ನಗರದ ಜಿಎಂಟಿ ವೃತ್ತದ ಬಳಿ ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರು ಮೂಲದ ಕಾರ್ತಿಕ್ ಗೌಡ(20), ಹರ್ಷ(20), ಶ್ರೀನಿಧಿ(20) ಮೃತ ದುರ್ದೈವಿಗಳು. ಘಟನೆಯಲ್ಲಿ 6 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ctd 2

ಬೆಂಗಳೂರಿನ ಬಸವನಗುಡಿಯ ವಿಜಯ ಕಾಲೇಜಿನ ಅಂತಿಮ ವರ್ಷದ 13 ಮಂದಿ ಕಾಮರ್ಸ್ ವಿದ್ಯಾರ್ಥಿಗಳು ಏಪ್ರಿಲ್ 19 ರಂದು ಗೋಕರ್ಣ ಟ್ರಿಪ್ ತೆರಳಿದ್ದರು. ಗೋಕರ್ಣದಿಂದ ಬೆಂಗಳೂರಿಗೆ ಹಿಂದಿರುಗುವಾಗ ಟೈಯರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಕೆಟ್ಟು ನಿಂತಿತ್ತು. ಈ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿವಾಹನದ ಬಳಿಯಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ctd 1

Share This Article
Leave a Comment

Leave a Reply

Your email address will not be published. Required fields are marked *