ಕಲಬುರಗಿ: ಕಾರಿನಲ್ಲಿ (Car) ಉಸಿರುಗಟ್ಟಿ ಮೂರು ವರ್ಷದ ಮಗು ಸಾವನಪ್ಪಿರುವ ಘಟನೆ, ಕಲಬುರಗಿ (Kalaburagi) ಜಿಲ್ಲೆಯ ಶಹಾಬಾದ್ (Shahabad) ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ.
ಕೊಟ್ಟುರೇಶ್ವರ ಎಂಬವರ ಮೂರು ವರ್ಷದ ಮಗು ಬಸವಪ್ರಭು ಮೃತ ದುರ್ದೈವಿ. ಮಗುವನ್ನ ಕರೆದುಕೊಂಡು ಶಾಲೆಗೆ ಕಾರಿನಲ್ಲಿ ಹೋಗಿದ್ದ ಪೋಷಕರು ಶಾಲೆ ಬಳಿ ಕಾರು ಪಾರ್ಕ್ ಮಾಡಿ ಲಾಕ್ ಮಾಡದೇ ಹೊಗಿದ್ದರು. ಈ ವೇಳೆ ಮಗು ಆಟವಾಡುತ್ತಾ ಕಾರಿನೊಳಗೆ ಹೋಗಿದೆ. ಈ ವೇಳೆ ಕಾರಿನ ಎಲ್ಲಾ ಡೋರ್ಗಳು ಲಾಕ್ ಆಗಿವೆ. ಇದನ್ನೂ ಓದಿ: ದೆಹಲಿ ಅಗ್ನಿ ದುರಂತ – ರಕ್ಷಣೆ ನಿರೀಕ್ಷೆಯಲ್ಲಿದ್ದ ದಂಪತಿ ಟಾಯ್ಲೆಟ್ನಲ್ಲೇ ಸಾವು
ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಗು ಎಲ್ಲಿ ಹೋಯಿತು ಅಂತ ಹುಡುಕಾಡಿದ್ದ ಪೋಷಕರು ಬಳಿಕ ಕಾರು ಓಪನ್ ಮಾಡಿದ್ದಾಗ ದುರಂತ ಬೆಳಕಿಗೆ ಬಂದಿದೆ. ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕ ಯೋಗೇಂದ್ರ ಸಿಂಗ್ ಬಾಬಾ













